ಆಂಧ್ರಪ್ರದೇಶದಲ್ಲಿ ಹುಂಡಿಯಲ್ಲಿ ರೂ.100 ಕೋಟಿ ಚೆಕ್ ಪಾವತಿಸಿದ ಭಕ್ತ; ಬ್ಯಾಂಕ್ ಮೊರೆ ಹೋದ ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ನಿರಾಸೆ! » Dynamic Leader
October 21, 2024
ಕ್ರೈಂ ರಿಪೋರ್ಟ್ಸ್

ಆಂಧ್ರಪ್ರದೇಶದಲ್ಲಿ ಹುಂಡಿಯಲ್ಲಿ ರೂ.100 ಕೋಟಿ ಚೆಕ್ ಪಾವತಿಸಿದ ಭಕ್ತ; ಬ್ಯಾಂಕ್ ಮೊರೆ ಹೋದ ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ನಿರಾಸೆ!

ಅಮರಾವತಿ: ಆಂಧ್ರದಲ್ಲಿ ದೇವಾಲಯದ ಹುಂಡಿಯಲ್ಲಿ ರೂ.100 ಕೋಟಿಯಷ್ಟು ಕಾಸೋಲೆಯನ್ನು ಪಾವತಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಕೇವಲ ರೂ.17 ಮಾತ್ರ ಇದ್ದುದರಿಂದ ದೇವಾಲಯದ ಆಡಳಿತಾಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ.

ಆಂಧ್ರಪ್ರದೇಶ ವಿಶಾಖಪಟ್ಟನ ಜಿಲ್ಲೆ ಸಿಂಹಾಚಲದಲ್ಲಿ ಶ್ರೀ.ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯವಿದೆ. ಈ ದೇವಾಲಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲಾಗುತ್ತದೆ. ಹೀಗಾಗಿ ದೇವಸ್ಥಾನ ನೌಕರರು ಹುಂಡಿಯಲ್ಲಿ ಬಂದಿದ್ದ ಕಾಣಿಕೆಗಳನ್ನು ಎಣಿಸುವ ಕಾರ್ಯದಲ್ಲಿ ತೊಡಗಿದ್ದಾಗ, ರಾಧಾಕೃಷ್ಣ ಅವರ ಹೆಸರಿನಲ್ಲಿ 100 ಕೋಟಿ ಬ್ಯಾಂಕ್ ಚೆಕ್ ಇದ್ದಿದ್ದನ್ನು ನೋಡಿ ಆಶ್ಚರ್ಯವಾದರು.

ದೇವಸ್ಥಾನದ ಅಧಿಕಾರಿಗಳು ಚೆಕ್ ಅನ್ನು ನಿಗದಿತ ಬ್ಯಾಂಕ್‌ಗೆ ಕಳುಹಿಸಿ ದೇವಸ್ಥಾನದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಪ್ರಯತ್ನಿಸಿದರು. ಆದರೆ ಬ್ಯಾಂಕ್ ಅಧಿಕಾರಿಗಳು ಚೆಕ್ ನೋಡಿ ಪರಿಶೀಲಿಸಿದಾಗ ಅದು ರಾಧಾಕೃಷ್ಣ ಅವರ ಬ್ಯಾಂಕ್ ಖಾತೆಯಾಗಿದ್ದು, ಆ ಬ್ಯಾಂಕ್ ಖಾತೆಯಲ್ಲಿ ಕೇವಲ 17 ರೂಪಾಯಿಗಳು ಮಾತ್ರ ಇದ್ದವು. ಇದರಿಂದ ಆಘಾತಕ್ಕೆ ಒಳಗಾದ ದೇವಸ್ಥಾನದ ಆಡಳಿತಾಧಿಕಾರಿಗಳು ರಾಧಾಕೃಷ್ಣನ್ ಎಂಬ ಭಕ್ತ ಉದ್ದೇಶಪೂರ್ವಕವಾಗಿ ಇದನ್ನು ಮಾಡಿದ್ದರೆ ಆತನ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Related Posts