ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ! » Dynamic Leader
October 22, 2024
ರಾಜ್ಯ

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಸ್ವಯಂ ಘೋಷಿತ ರಾಜ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳ ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು.

ಬೆಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಹಿಂದೂ ವಿರೋಧಿ, ಭ್ರಷ್ಟಾಚಾರ ಚಟುವಟಿಕೆ ಹಾಗೂ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ 1) ರಾಜೇಶ್ ಪವಿತ್ರನ್, 2) ಎಲ್.ಕೆ.ಸುವರ್ಣ, 3) ಸುಂದರ್ ಜೀ, 4) ವಿವೇಕನಂದ, 5) ಕಿಶೋರ್ ಕುಮಾರ್ ಮುಂತಾದವರ ವಿರುದ್ಧ ಅಖಿಲ ಭಾರತ ಹಿಂದೂ ಮಹಾಸಭಾ (ಕರ್ನಾಟಕ) ರಾಜಾಧ್ಯಕ್ಷ ಡಾ.ಮನೋಜ್ ಆಲುಂಗಲ್ ಕೆಂಡಕಾರಿದ್ದಾರೆ.

ಇಂದು ಬೆಂಗಳೂರು ಪ್ರಸ್‍ಕ್ಲಬ್‍ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಡಾ.ಮನೋಜ್ ಆಲುಂಗಲ್ ‘ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷವು ಭಾರತದ ಪ್ರಪ್ರಥಮ ರಾಜಕೀಯ ಪಕ್ಷವಾಗಿದೆ. ಈ ಪಕ್ಷವು ವಿನಾಯಕ ದಾಮೋದರ್ ಸಾವರ್ಕರ್ ಅವರಿಂದ 1907ರಲ್ಲಿ ಸ್ಥಾಪಿಸಲ್ಪಟ್ಟಿದ್ದು. ಇಂದಿನ ಆಯ್ದ ಹಲವು ಪ್ರತಿಷ್ಠಿತ ಪಕ್ಷಗಳು ಇಲ್ಲಿಂದಲೇ ಹುಟ್ಟಿಕೊಂಡಿರುತ್ತದೆ.

ಈ ಪಕ್ಷದ ಈಗಿನ ರಾಷ್ಟ್ರಾಧ್ಯಕ್ಷರು ಚಕ್ರಪಾಣಿ ಮಹಾರಾಜ್ ರವರು, ಕರ್ನಾಟಕ ರಾಜ್ಯದ ಸಂಪೂರ್ಣ ಜವಾಬ್ದಾರಿಯನ್ನು ನನಗೆ ನೀಡಿರುತ್ತಾರೆ. ನಾನು ಈಗ ರಾಜ್ಯಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ರಾಜ್ಯಾಧ್ಯಕ್ಷನಾದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದಲ್ಲಿ ನಾವೆಲ್ಲರು ಒಂದೇ ಎಂಬ ಒಗ್ಗಟ್ಟಿನ ಮಂತ್ರವನ್ನು ಸಾರುತ್ತ, ಎಲ್ಲರೂ ಪಕ್ಷದ ಕಾರ್ಯ ಚಟುವಟಿಕೆಗಳನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಬಂದಿರುತ್ತೇವೆ.

ಈ ಹಿನ್ನಲೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದ ಕೆಲವು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಸರಿಯಾದ ರೀತಿಯಲ್ಲಿ ಪಕ್ಷದ ಕಾರ್ಯವೈಕರಿಗಳನ್ನು ಮುಂದುವರೆಸಿಕೊಂಡು ಹೋಗುವಂತೆ ನಿರ್ದೇಶನ ನೀಡಿದ್ದರೂ ಅವರುಗಳು ತಮ್ಮ ಹಿಂದಿನ ಚಾಳಿಯನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದ ಕಾರಣದಿಂದ ಪಕ್ಷದ ರಾಷ್ಟ್ರಾಧ್ಯಕ್ಷರ ಗಮನಕ್ಕೆ ತಂದು, ಅವರ ಆದೇಶದ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿರುತ್ತದೆ.

ನಂತರದಲ್ಲಿ ಕೆಲವು ಪಕ್ಷದ ಪದಾಧಿಕಾರಿಗಳು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಹೆಸರಿನಡಿಯಲ್ಲಿ ಸ್ವಯಂ ಘೋಷಿತ ರಾಜ್ಯಾಧ್ಯಕ್ಷರುಗಳಾಗಿ ಸಮಾಜದ ಜನತೆಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಹಿಂದೂ ವಿರೋಧಿ, ಭ್ರಷ್ಟಾಚಾರ ಚಟುವಟಿಕೆ ಹಾಗೂ ಸಮಾಜ ವಿರೋಧಿ ಕಾರ್ಯಗಳಲ್ಲಿ ಪಾಲ್ಗೊಂಡಿರುತ್ತಾರೆ. ಮತ್ತು ತಮ್ಮ ಈ ಎಲ್ಲಾ ಕಾರ್ಯಗಳಿಗೂ ಅಖಿಲ ಭಾರತ ಹಿಂದೂ ಮಾಹಾಸಭಾ ಪಕ್ಷದ ಹೆಸರು, ಬಾವುಟ, ಹಾಗೂ ಲಾಂಛನವನ್ನು ಉಪಯೋಗಿಸುತ್ತಿದ್ದಾರೆ. ಇದು ದರಾದೃಷ್ಟಕರ ಸಂಗತಿಯಾಗಿದೆ.

ಇಂತಹ ಕಾರ್ಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ನಾವು, ಈ ರೀತಿಯಾದಂತಹ ಅವ್ಯವಹಾರಗಳನ್ನು ತಡೆಗಟ್ಟುವ ಹಾಗೂ ಪಕ್ಷದ ಹೆಸರಿಗೆ ಯಾವುದೇ ಚ್ಯುತಿ ಬಾರದಂತೆ ನೋಡಿಕೊಳ್ಳುವ ಹಿತಾಸಕ್ತಿಯಿಂದ ಕಾನೂನಾತ್ಮಕ ಹೋರಾಟವನ್ನು ಮಾಡಲು ಮುಂದಾಗಿ 1) ರಾಜೇಶ್ ಪವಿತ್ರನ್, 2) ಎಲ್.ಕೆ.ಸುವರ್ಣ, 3) ಸುಂದರ್ ಜೀ, 4) ವಿವೇಕನಂದ, 5) ಕಿಶೋರ್ ಕುಮಾರ್ ಮುಂತಾದವರ ವಿರುದ್ಧ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿರುತ್ತೇವೆ. ಆದರೂ ರಾಜೇಶ್ ಪವಿತ್ರನ್ ಹಾಗೂ ಆತನ ಸಹಚರರು ಪಕ್ಷದ ಹೆಸರನ್ನು ನಮೂದಿಸಿ, ಸಭೆ ಸಮಾರಂಭಗಳನ್ನು ಮಾಡುತ್ತಿದ್ದಾರೆ. ಇದರ ವಿರುದ್ಧ ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 16.12.2022 ರಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಿರುತ್ತೇವೆ’. ಎಂದು ತಿಳಿಸಿದರು. ಪತ್ರಿಕಾ ಗೋಷ್ಟಿಯಲ್ಲಿ ಹಿಂದೂ ಮಹಾಸಭಾ ಪಕ್ಷದ ಹಲವಾರು ಪ್ರಮುಕ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Related Posts