• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅದ್ಧೂರಿ ಅವರೆಕಾಯಿ ಮೇಳ!

by Dynamic Leader
29/12/2022
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಮಂಜುಳಾ ರೆಡ್ಡಿ, ಹಿರಿಯ ವರದಿಗಾರರು

ಬೆಂಗಳೂರು: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನವರಿ 5 ರಿಂದ 10 ರತನಕ ಅವರೇಕಾಯಿ ಮೇಳವನ್ನು ವಾಸವಿ ಕ್ಯಾಂಡಿಮೆಂಟ್ಸ್ ಅದ್ಧೂರಿಯಾಗಿ ನಡೆಸಲಿದೆ.

ವಾಸವಿ ಕ್ಯಾಂಡಿಮೆಂಟ್ಸ್ ವತಿಯಿಂದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ 2023 ರ ಜನವರಿ 5 ರಿಂದ 10 ರತನಕ ಈ ಅದ್ಧೂರಿ ಅವರೆಕಾಯಿ ಮೇಳ ನಡೆಯಲಿದೆ ಎಂದು ವಾಸವಿ ಕ್ಯಾಂಡಿಮೆಂಟ್ಸ್ ಮಾಲೀಕರಾದ ಗೀತಾ ಶಿವಕುಮಾರ್ ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ  ತಿಳಿಸಿದರು .

ಗೀತಾ ಅವರು ಮಾತನಾಡುತ್ತಾ “ಅತ್ಯುತ್ತಮ ಗುಣಮಟ್ಟ ಮತ್ತು ತಾಜಾ ತಿಂಡಿ ತಿನಿಸುಗಳಿಗೆ ಹೆಸರು ವಾಸಿಯಾದ ವಾಸವಿ ಕ್ಯಾಂಡಿಮೆಂಟ್ಸ್ ಕಳೆದ ಇಪ್ಪತ್ತು ವರ್ಷಗಳಿಂದ ವಿನೂತನವಾದ ಸಾಹಸ-ಪುಯೋಗವನ್ನು ಮಾಡುತ್ತಾ ಬರುತ್ತಿದೆ. ಅದರಲ್ಲಿ ಅಮೋಘ ಯಶಸ್ಸನ್ನೂ ಕಂಡಿದೆ. ಕಳೆದ ಇಪ್ಪತ್ತೊಂದು ವರ್ಷಗಳಿಂದ ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್‌ನಲ್ಲಿ ವಾಸವಿ ಕ್ಯಾಂಡಿಮೆಂಟ್ಸ್ ನ ವತಿಯಿಂದ ಅವರೇಕಾಯಿ ಮೇಳವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಅವರೇಕಾಯಿಯಿಂದ ತಯಾರಾಗುವ ಇಡ್ಲಿ, ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸಿಹಿ, ಖಾರಾ ಪದಾರ್ಥಗಳು ಸೇರಿದಂತೆ ಸುಮಾರು ನೂರು ಬಗೆಯ ತಿಂಡಿ, ತಿನಿಸುಗಳು, ರುಚಿಯಾದ ಖಾದ್ಯಗಳು ಗ್ರಾಹಕರಿಗೆ ಲಭ್ಯವಾಗಲಿದೆ.  ಹೀಗಾಗಿ ಬೆಂಗಳೂರಿನ ಬಹಳಷ್ಟು ಜನ ಈ ವಾರ್ಷಿಕ ಅವರೇಕಾಯಿ ಮೇಳಕ್ಕಾಗಿ ಕಾಯುತ್ತಿರುತ್ತಾರೆ.

ನಮ್ಮ ಮಳಿಗೆ  ಬೆಳಿಗ್ಗೆ 10 ರಿಂದ ರಾತ್ರಿ 10 ರವರೆಗೆ  ತೆರೆದಿರುತ್ತದೆ. ಸಂಜೆ 3 ರಿಂದ ರಾತ್ರಿ 10ರ ತನಕ ಮಾತ್ರ ವಿಶೇಷ ಖಾದ್ಯಗಳಾದ ದೋಸೆ, ವಡೆ ಇತ್ಯಾದಿಗಳು ದೊರೆಯುತ್ತದೆ. ಮಾಗಡಿ ತಾಲೂಕಿನ ರೈತರು ಬೆಳೆದ ಅವರೇಕಾಯಿಯನ್ನು ವಾಸವಿ ಕ್ಯಾಂಡಿಮೆಂಟ್ಸ್ ನೇರವಾಗಿ ಖರೀದಿಸುತ್ತದೆ. ಆದ್ದರಿಂದ ಇದರಲ್ಲಿ ಯಾವುದೇ ಮಧ್ಯವರ್ತಿಗಳ ಪ್ರವೇಶವಿರುವುದಿಲ್ಲ. ನೇರವಾಗಿ ಬೆಳೆಗಾರರ ಮನೆಬಾಗಿಲಿಗೆ ತೆರೆಳಿ, ಅವರೇಕಾಯಿ ಖರೀದಿಸುವುದರಿಂದ ರೈತರಿಗೆ ಮಾರುಕಟ್ಟೆಯಲ್ಲಿ ಸಿಗುವ ಲಾಭಕ್ಕಿಂತ ಹೆಚ್ಚು ಮೊತ್ತದ ಲಾಭ ನಮ್ಮ ಮೇಳದಿಂದ ಅವರಿಗೆ ಕೈಸೇರುತ್ತದೆ. ಇದರಿಂದ ಕಷ್ಟಪಟ್ಟು ಅವರೇಕಾಯಿ ಬೆಳೆದ ರೈತಬಾಂಧವರು ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆದು ಸಂತೃಪ್ತರಾಗುತ್ತಾರೆ.

ವರ್ಷದಿಂದ ವರ್ಷಕ್ಕೆ ಅವರೇಕಾಯಿ ಖರೀದಿಯೂ ಹೆಚ್ಚಳವಾಗುತ್ತಿದೆ. ಇದು ರೈತರಿಗೆ ಸಂತೋಷದ ವಿಷಯವೂ ಆಗಿದೆ.  ಕಷ್ಟಪಟ್ಟು  ಅವರೇಕಾಯಿ ಬೆಳೆದ ರೈತರನ್ನು ಸನ್ಮಾನಿಸುವ ಕಾರ್ಯಕ್ರಮವೂ ಇಲ್ಲಿ ನಡೆಯಲಿದೆ. ಈ ಬಾರಿ ಕೂಡಾ ಖರೀದಿದಾರರು ಪದಾರ್ಥಗಳನ್ನು ಮನೆಯಿಂದಲೇ ಸುಲುಭವಾಗಿ ಖರೀದಿಸಲು ಅನುಕೂಲವಾಗುವಂತೆ ಜ್ಯೊಮ್ಯಾಟೋ ಮತ್ತು ಡೆಂಜೋ ಮುಂತಾದ ಆನ್ ಲೈನ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ” ಎಂದು ವಾಸವಿ ಕ್ಯಾಂಡಿಮೆಂಟ್ಸ್ ಮಾಲೀಕರಾದ ಗೀತಾ ಶಿವಕುಮಾರ್ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಶಿವಶಂಕರ, ಸ್ವಾತಿ, ನರೇಶ್ ಉಪಸ್ಥಿತರಿದ್ದರು

Tags: National CollegeVasavi Condimentsಅವರೇಕಾಯಿ ಮೇಳನ್ಯಾಷನಲ್ ಕಾಲೇಜು ಮೈದಾನವಾಸವಿ ಕ್ಯಾಂಡಿಮೆಂಟ್ಸ್
Previous Post

ಮಹಾರಾಷ್ಟ್ರ ನಿರ್ಣಯವನ್ನು ಖಂಡಿಸಿ ಜೆಡಿಎಸ್ ಪ್ರತಿಭಟನೆ ನಗರ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಅರೆಸ್ಟ್!

Next Post

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ!

Dynamic Leader

Next Post

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS