• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು-ಮಿಲ್ಕು ಸಾಂಗ್ ಬಿಡುಗಡೆ!

by Dynamic Leader
09/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ: ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ!

ಬೆಂಗಳೂರು: ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ.

ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ ಹೂಡಿದ್ದಾರೆ. ಕೊಪ್ಪದಲ್ಲಿ ‘ಸಿಲ್ಕು-ಮಿಲ್ಕು’ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕೊಪ್ಪ ಜನತೆಯನ್ನ ಹುಚ್ಚೆಬ್ಬಿಸಿದ ಇನಾಮ್ದಾರ ಚಿತ್ರ ತಂಡ, ಮತ್ತಷ್ಟು ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಜನರನ್ನು ಆಕರ್ಷಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಲಾವಿದರ ದಂಡೆ ಇರುವ ಈ ಸಿನಿಮಾ ಎರಡು ಬಣ್ಣಗಳ ನಡುವಿನ ಘರ್ಷಣೆಯ ಸುತ್ತ ಹೆಣೆದಿರುವ ಕಥೆ ಎಂದು ನಿರ್ದೇಶಕರು ಹೇಳುತ್ತಾರೆ.

ಕೊಪ್ಪದಲ್ಲಿ ಸಾವಿರಾರು ಜನರ ಮುಂದೆ ಕೊಪ್ಪದ ಮಕ್ಕಳ ಕೈಯಲ್ಲಿ ಸಿಲ್ಕು-ಮಿಲ್ಕು ಸಾಂಗ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಕೊಪ್ಪದ ಜನತೆಯನ್ನು ಸ್ಮರಿಸಿಕೊಂಡಿದ್ದಾರೆ. ಖಡಕ್ ಧ್ವನಿಯಲ್ಲಿ ಪ್ರಮೋದ್ ಶೆಟ್ಟಿಯ ಡೈಲಾಗ್ ಕೇಳಿ ಹುಚ್ಚೆದ್ದು ಕುಣಿದ ಕೊಪ್ಪದ ಜನತೆಗೆ ನಿರ್ದೇಶಕ ಸಂದೇಶ ಶೆಟ್ಟಿ, ಪ್ರಮೋದ್ ಶೆಟ್ಟಿ ಅವರಿಗೆ ಸ್ಯಾಂಡಲ್ವುಡ್ ಘಟೋದ್ಗಜ ಎಂದು ಬಿರುದನ್ನು ನೀಡಿದ್ದಾರೆ. ಇದು ಕೊಪ್ಪದ ಜನತೆಯಲ್ಲಿ ಮತ್ತಿಷ್ಟು ಜೋಶ್ ತಂದು ಕೊಟ್ಟಿದೆ.

ಇಡೀ ಸಿನಿಮಾ ಟೆಕ್ನಿಕಲ್ ಆಗಲಿ, ಕಥೆಯಾಗಲಿ ಎಲ್ಲವೂ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ಹಾಗೂ ಒಬ್ಬ ಹೊಸ ನಿರ್ಮಾಪಕ, ನಿರ್ದೇಶಕ ಉಳಿಯಬೇಕಾದರೆ ನಿಮ್ಮ ಸಹಕಾರ ಅಗತ್ಯ ಎಂದು ಪ್ರಮೋದ್ ಶೆಟ್ಟಿ ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ನಿರಂಜನ್ ಶೆಟ್ಟಿ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ, ಎರಡು ಜನಾಂಗ ಘರ್ಷಣೆಯನ್ನ ತೆರೆ ಮೇಲೆ ತರಲು ನಿರ್ದೇಶಕರು ಹೊಸತನದ ಪ್ರಯತ್ನವನ್ನ ಮಾಡಿದ್ದಾರೆ, ನಿಮಗೆಲ್ಲರಿಗೂ ಈ ಸಿನಿಮಾ ಇಷ್ಟ ಆಗುತ್ತೆ ನಮ್ಮ ತಂಡವನ್ನ ಬೆಂಬಲಿಸಿ, ನೀವು ನಮಗೆ ಶಕ್ತಿಯಾಗಿ ಎಂದು ತಿಳಿಸಿದರು.

ಸಂಗೀತ ನಿರ್ದೇಶಕ ರಾಕೇಶ್ ಆಚಾರ್ಯ ಮಾತನಾಡಿ ಇದೊಂದು ಸೂಕ್ಷ್ಮವಾದ ಕಥಾಹಂದರ ಬಲು ಅಚ್ಚುಕಟ್ಟಾಗಿ ಈ ಸಿನಿಮಾವನ್ನ ತೆರೆಯ ಮೇಲೆ ತರಲು ನಿರ್ದೇಶಕರು ಪ್ರಯತ್ನಪಟ್ಟಿದ್ದಾರೆ. ಈ ಸಿನಿಮಾದಲ್ಲಿ ನಾನು ಮೂರು ಹಾಡುಗಳನ್ನ ಮಾಡಿದ್ದೇನೆ. ನಿಮ್ಮೆಲ್ಲರ ಬೆಂಬಲ ಈ ಸಿನಿಮಾದ ಮೇಲೆ ಇರಲಿ ಎಂದು ಕೇಳಿಕೊಂಡರು. ನಾಯಕ ನಟ ರಂಜನ್  ಛತ್ರಪತಿ, ನಟಿ ಚಿರಶ್ರೀ ಅಂಚನ್ ಹಾಗೂ ಏಸ್ತಾರ್ ನೆರೋನಾ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಮಹಾಬಲೇಶ್ವರ ಕ್ಯಾದಗಿ, ರಕ್ಷಿತ್ ಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊಪ್ಪದ ವೇದಿಕೆಯಲ್ಲಿ ಸಂತೋಷವನ್ನು ಹಂಚಿಕೊಂಡರು.

Tags: InamdarKoppaKoppalPramod ShettySandesh Shetty AjriSilku Milkuಇನಾಮ್ದಾರ್ಕೊಪ್ಪಕೊಪ್ಪಳಪ್ರಮೋದ್ ಶೆಟ್ಟಿಸಂದೇಶ್ ಶೆಟ್ಟಿ ಆಜ್ರಿಸಿಲ್ಕು ಮಿಲ್ಕು
Previous Post

ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

Next Post

ಧಾರ್ಮಿಕ ಅಲ್ಪಸಂಖ್ಯಾತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ!

Dynamic Leader

Next Post

ಧಾರ್ಮಿಕ ಅಲ್ಪಸಂಖ್ಯಾತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS