• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಲಂಕಾಸುರ ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು ಬಿಡುಗಡೆ!

by Dynamic Leader
13/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಲಂಕಾಸುರ ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ಸಿನಿಮಾ ನಟಿ ಮಾಲಾಶ್ರೀ ಬಿಡುಗಡೆ ಮಾಡಿದರು.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್”  ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಿದೆ.  ಇತ್ತೀಚಿಗೆ ಅದ್ದೂರಿಯಾಗಿ ನಡೆದ ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಟಿ ಶೃತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಮಾಲಾಶ್ರೀ ಹಾರೈಸಿದರು.

‘ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ “ಮಾದೇಶ” ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ.‌ “ಲಂಕಾಸುರ” ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ’ ಎಂದರು ನಟಿ ಶೃತಿ.

ನಟ ಶ್ರೀನಗರ ಕಿಟ್ಟಿ‌, ನಿರ್ಮಾಪಕ ಎಂ.ಜಿ.ರಾಮಮೂರ್ತಿ ಸೇರಿದಂತೆ ಅನೇಕ ಗಣ್ಯರು ತಮ್ಮ ಮಾತುಗಳ ಮೂಲಕ ಶುಭ ಕೋರಿದರು. ‘ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ನೋಡಿ ಹಾರೈಸಿ’ ಎಂದರು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್.

‘ಕೊರೋನ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ “ಲಂಕಾಸುರ” ಚಿತ್ರ ಆರಂಭಿಸಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ಟೀಸರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ, ಲೋಗೊ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾನು ಆಭಾರಿ. ನನ್ನ ಇಡೀ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ‌. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹ ನೀಡಿ’ ಎಂದರು ನಾಯಕ  ವಿನೋದ್ ಪ್ರಭಾಕರ್.

‘ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. “ಮಾರ್ಡನ್ ಮಹಾಲಕ್ಷ್ಮಿ” ಹಾಡನ್ನು ನಾನೇ ಹಾಡಿದ್ದೇನೆ’ ಎಂದು ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಹೇಳಿದರು.

ನಿರ್ದೇಶಕ ಪ್ರಮೋದ್ ಕುಮಾರ್, ಛಾಯಾಗ್ರಾಹಕ ಸುಜ್ಞಾನ್, ನೃತ್ಯ ನಿರ್ದೇಶಕ ಭಜರಂಗಿ ಮೋಹನ್ ಮುಂತಾದವರು “ಲಂಕಾಸುರ” ಚಿತ್ರದ ಕುರಿತು ಮಾತನಾಡಿದರು.

Tags: Actor Vinod PrabhakarActress MalashriActress ShruthiLankasura CinemaLankasura FilmLankasura MovieModern Mahalakshmiನಟ ವಿನೋದ್ ಪ್ರಭಾಕರ್ನಟಿ ಮಾಲಾಶ್ರೀನಟಿ ಶ್ರುತಿಮಾಡರ್ನ್ ಮಹಾಲಕ್ಷ್ಮಿಲಂಕಾಸುರ ಫಿಲಂಲಂಕಾಸುರ ಮೂವಿಲಂಕಾಸುರ ಸಿನಿಮಾ
Previous Post

ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

Next Post

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ! 

Next Post

"1 RAಬರಿ ಕಥೆ" ಸದ್ಯದಲ್ಲೇ ಬಿಡುಗಡೆ! 

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS