• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

PF ಹಣವನ್ನು ಅದಾನಿ ಎಂಟರ್‌ಪ್ರೈಸಸ್ ಮತ್ತು ಅದಾನಿ ಪೋರ್ಟ್‌ಗಳಲ್ಲಿ ಹೂಡಿಕೆ! ದುಡಿಮೆ ಹಣಕ್ಕೆ ಅಪಾಯವೇ?

by Dynamic Leader
29/03/2023
in ದೇಶ
0
0
SHARES
0
VIEWS
Share on FacebookShare on Twitter

ಅದಾನಿ ಎಂಟರ್‌ಪ್ರೈಸಸ್ ಷೇರು ಬೆಲೆ 55% ಮತ್ತು ಅದಾನಿ ಪೋರ್ಟ್ಸ್ ಷೇರು ಬೆಲೆ 23% ರಷ್ಟು ಕುಸಿತವನ್ನು ಖಂಡಿದೆ. ಅದಾನಿ ಗ್ರೂಪ್ ಕಂಪನಿಗಳು ಮನಿ ಲಾಂಡರಿಂಗ್ ಮತ್ತು ಷೇರು ಮಾರುಕಟ್ಟೆ ವಂಚನೆಯನ್ನು ಆರೋಪಿಸಿ ಅಮೆರಿಕದ ಶಾರ್ಟ್ ಸೆಲ್ಲಿಂಗ್ ಸಂಸ್ಥೆಯಾದ ಹಿಂಡೆನ್‌ಬರ್ಗ್ ಕಂಪನಿ ವರದಿಯನ್ನು ಬಿಡುಗಡೆ ಮಾಡಿತ್ತು. ಈ ವರದಿಯ ನಂತರ ಷೇರುಪೇಟೆಯಲ್ಲಿ ಅದಾನಿ ಸಮೂಹದ ಷೇರುಗಳು ತೀವ್ರ ಕುಸಿತವನ್ನು ಕಂಡಿದೆ.

ಅದಾನಿ ಗ್ರೂಪ್ ಷೇರುಗಳು ಸುಮಾರು $105 ಬಿಲಿಯನ್ ನಷ್ಟವನ್ನು ಅನುಭವಿಸುತ್ತಿರುವ ಹಿನ್ನಲೆಯಲ್ಲಿ, ಷೇರುಪೇಟೆ ಕೆಲವು ವಾರಗಳ ಕಾಲ ತೀವ್ರ ಕುಸಿತವನ್ನು ಖಂಡಿತು. ಈ ಹಿನ್ನಲೆಯಲ್ಲಿ ಗೌತಮ್ ಅದಾನಿ ಕೂಡ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಿಂದ 35ನೇ ಸ್ಥಾನಕ್ಕೆ ತಳ್ಳಲ್ಪಟ್ಟರು.ಅದಾನಿಯ ವಿರುದ್ಧ ದೂರುಗಳು, ವಿವಾದಗಳು ಇನ್ನು ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಅದಾನಿ ಷೇರುಗಳಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಪ್ರಾಧಿಕಾರವು EPFO ಹೂಡಿಕೆಯನ್ನು ಮುಂದುವರೆಸುತ್ತಿರುವುದಾಗಿ ವರದಿಯಾಗಿದೆ. ಅದಾನಿ ಸಮೂಹದ ಷೇರುಗಳಿಂದ ಹೆಚ್ಚಿನ ಅಪಾಯವಿರುವ ಕಾರಣದಿಂದಲೇ FII ಹೂಡಿಕೆದಾರರು ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹೂಡದೇ ದೂರ ಸರಿದಿದ್ದಾರೆ.

ಆದರೆ ಕಾರ್ಮಿಕರ ಅನುಕೂಲಕ್ಕಾಗಿ ಸಂಗ್ರಹಿಸಿ ನಿರ್ವಹಣೆ ಮಾಡುತ್ತಿರುವ PF ಹಣವನ್ನು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡುವುದು ಜನರಲ್ಲಿ ದೊಡ್ಡ ಆಘಾತವನ್ನು ಸೃಷ್ಟಿಸಿದೆ. ದೇಶದಲ್ಲಿ ಒಟ್ಟು 27.73 ಕೋಟಿ ಕಾರ್ಮಿಕರು EPFO ಸದಸ್ಯರಾಗಿದ್ದಾರೆ. ಇವರ ಭವಿಷ್ಯದ ನಿವೃತ್ತಿ ನಿಧಿಯನ್ನು ಆಯೋಗವು ನಿರ್ವಹಿಸುತ್ತಿದೆ. ಈ ಹಣವು ಸಂಪೂರ್ಣವಾಗಿ ಜನರ ನಿವೃತ್ತಿಯ ನಂತರದ ಅಗತ್ಯಗಳಿಗಾದದ್ದು. ವೃದ್ಧಾಪ್ಯ ಮತ್ತು ಹಣ ಗಳಿಸಲು ಸಾಧ್ಯವಾಗದ ಸಂದರ್ಭದಲ್ಲಿ ಲಾಭದಾಯಕವಾಗಿ ಉಳಿಸಿದ PF ನಿಧಿಯನ್ನು ಹೆಚ್ಚಿನ ಅಪಾಯದ ಷೇರುಗಳಲ್ಲಿ ಹೂಡಿಕೆ ಮಾಡುವುದು ಸರಿಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಅದಾನಿ ವಿರುದ್ಧದ ದೂರುಗಳಿಂದ ಅದರ ಷೇರುಗಳು ಕುಸಿತವನ್ನು ಕಂಡಿದ್ದರೂ ಅದಾನಿ ಗ್ರೂಪ್‌ನ 2 ಕಂಪನಿ ಷೇರುಗಳಲ್ಲಿ PF ಹಣವನ್ನು ಹೂಡಿಕೆ ಮಾಡುವುದನ್ನು ಮುಂದುವರೆಸಿರುವುದು ಆಘಾತಕಾರಿಯಾಗಿದೆ. EPFO Remains Invested In Adani Stocks Despite Hindenburg-Induced Market Rout. 

PF ಹಣವನ್ನು ಅದಾನಿ ಎಂಟರ್‌ಪ್ರೈಸಸ್ ಮತ್ತು ಅದಾನಿ ಪೋರ್ಟ್‌ಗಳಲ್ಲಿ ಹೂಡಿಕೆ ಮಾಡಲಾಗುತ್ತಿದೆ. ಕಳೆದ 3 ತಿಂಗಳುಗಳಲ್ಲಿ ಅದಾನಿ ಎಂಟರ್‌ಪ್ರೈಸಸ್ ಷೇರು ಬೆಲೆ 55% ಮತ್ತು ಅದಾನಿ ಪೋರ್ಟ್ಸ್ ಷೇರು ಬೆಲೆ 23% ರಷ್ಟು ಕುಸಿದಿದೆ. ಈ ಕುಸಿತದ ನಂತರವೂ ಕಾರ್ಮಿಕರ ಪಿಂಚಣಿ ಹಣವನ್ನು ಕೋಟಿಗಟ್ಟಲೆ ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡುವುದು ಸರಿಯಾದ ಕ್ರಮವಲ್ಲ ಎಂಬ ಧ್ವನಿ ಕಾರ್ಮಿಕರಲ್ಲಿ ಬಲವಾಗಿ ಕೇಳಿಬರುತ್ತಿದೆ. EPFO ಬೋರ್ಡ್ ಆಫ್ ಟ್ರಸ್ಟಿಗಳು ಈ ನಿಟ್ಟಿನಲ್ಲಿ ತಕ್ಷಣದ ನಿರ್ಧಾರವನ್ನು ತೆಗೆದುಕೊಂಡರೆ ಮಾತ್ರ ಅದಾನಿ ಷೇರುಗಳಲ್ಲಿನ ಹೂಡಿಕೆಯನ್ನು ಹಿಂಪಡೆಯಬಹುದು. ಇಲ್ಲದಿದ್ದರೆ ಬರುವ 30 ರಿಂದ ಮುಂದಿನ 6 ತಿಂಗಳವರೆಗೆ ಅದಾನಿ ಷೇರುಗಳನ್ನು EPFO ಇರಿಸಿಕೊಳ್ಳಬೇಕಾದ ಸ್ಥಿತಿ ಎದುರಾಗುತ್ತದೆ ಎಂದು ಹೇಳಲಾಗುತ್ತಿದೆ. ಅದಾನಿ ಷೇರು ಹೂಡಿಕೆಯಿಂದ EPFO ಹೂಡಿಕೆ ಮೌಲ್ಯವು ಏರಿಳಿತವಾಗಬಹುದು. ಇದು PF ಸದಸ್ಯರ ಹಣದ ಮೇಲೆ ಗಣನೀಯವಾದ ಪರಿಣಾಮವನ್ನು ಸೃಷ್ಟಿಸುತ್ತದೆ. EPFO Remains Invested In Adani Stocks Despite Hindenburg-Induced Market Rout. 

Tags: Adani EnterprisesAdani FortAdani SharesEPFOFIIHindenburgPF
Previous Post

ದಲಿತರಿಗಿಂತಲೂ ಹಿಂದುಳಿದಿರುವ ಮುಸ್ಲಿಮರ ಮೀಸಲಾತಿ ಬದಲಾವಣೆ; ನ್ಯಾಯ ಸಮ್ಮತವೆ.!?

Next Post

ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಸ್ಪರ್ಧೆ?

Next Post

ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಸ್ಪರ್ಧೆ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025

Recent News

ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS