• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮಾನ್ವಿಯಲ್ಲಿ ಜೆಡಿಎಸ್ ಗೆಲುವಿನ ದಡ ಸೇರುವುದೇ? ಒಂದು ನೋಟ

by Dynamic Leader
05/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ವರದಿ: ರಾಮು ನೀರಮಾನ್ವಿ

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹಂಪಯ್ಯ ನಾಯಕ, ಜೆಡಿಎಸ್‌ನಿಂದ ರಾಜಾ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಬಿ.ವಿ.ನಾಯಕ ಅಭ್ಯರ್ಥಿಗಳಾಗಿದ್ದಾರೆ. ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿಯ ಮತಯಾಚನೆ ನೆಡೆದಿದೆ. ಮತ ಬೇಟೆಯಲ್ಲಿ ಮೂರು ಪಕ್ಷಗಳು ಬಿಸಿಲಿನಲ್ಲಿ ಬೆವರು ಹರಿಸುತ್ತಿದ್ದಾರೆ. ಮಾನ್ವಿ ನಗರದಲ್ಲಿ ಜೆಡಿಎಸ್ ಪ್ರಚಾರದಲ್ಲಿ ಮುಂದೆ ಇರುವುದು ಕಂಡು ಬಂದಿದೆ. ಕಾಂಗ್ರೆಸ್ ಬಿಜೆಪಿಗಿಂತ ಮೊದಲಿಗೆ ಜೆಡಿಎಸ್ ಚುನಾವಣೆ ಪ್ರಚಾರವನ್ನು ಕೈಗೊಂಡ ಕಾರಣ ಮತದಾರರನ್ನು ತನ್ನತ್ತ ಸೆಳೆಯಲು ಯಾಶಸ್ವಿಯಾಗಿದೆ. ಕ್ಷೇತ್ರದ ಹಳ್ಳಿಗಳಲ್ಲಿ ಜೆಡಿಎಸ್ ಪಕ್ಷದ ಅಬ್ಬರದ ಪ್ರಚಾರ ಮತ್ತು ಪಕ್ಷದ ಸೇರ್ಪಡೆ ಕಾರ್ಯಕ್ರಮಗಳು ಬರದಿಂದ ಸಾಗಿದ್ದು ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಬಿಜೆಪಿಯೂ ಹಿಂದೆ ಬಿದ್ದಿಲ್ಲ. ಅದೂ ತನ್ನ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಬೇರೆ ತಾಲ್ಲೂಕಿನಿಂದ ವಲಸೆ ಬಂದ ಕಾರಣ ಮತದಾರರನ್ನು ಸೆಳೆಯುವಲ್ಲಿ ಸಪಲವಾಗಿಲ್ಲ. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದು ಆ ಪಕ್ಷಕ್ಕೆ ಸ್ವಪ್ಲ ಬಲ ಹೆಚ್ಚಾಗಿದೆ. ಪಕ್ಷ ಸೇರ್ಪಡೆ ಬರದಿಂದ ಮುಂದುವರಿಯುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದ ನೆಡೆಯು ಮೋಡಮುಸುಕಿದ ವಾತಾವರಣ ಇದೆ. ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್‌ಗೆ ಸೇರಿರುವುದರಿಂದ ಆ ಪಕ್ಷಕ್ಕೆ ಹಿನ್ನಡೆಯಾಗಿದ್ದರೂ ಎಂ.ಈರಣ್ಣ ಅವರ ಸೇರ್ಪಡೆಯಿಂದ ನಿಟ್ಟುಸಿರು ಬಿಡುವಂತೆ ಅಗಿದೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನ ದೊಡ್ಡ ದೊಡ್ಡ ಹಳ್ಳಿಗಳಲ್ಲಿ ಕೂಡಾ ಇದೇ ಪರಿಸ್ಥಿತಿ ಮುಂದುವರಿಯುತ್ತಿದೆ. ಕೆಲವು ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಬಗ್ಗೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಇದು ಹಗಲಿನಷ್ಟೆ ಸತ್ಯ.

ಜೆಡಿಎಸ್, ಬಿಜೆಪಿಯಲ್ಲಿ ಕಾರ್ಯಕರ್ತರು ಹೊಸ ಹುರುಪಿನಿಂದ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಆದರೇ ಈ ರೀತಿಯ ವಾತಾವರಣ ಕಾಂಗ್ರೆಸ್‌ನಲ್ಲಿ ಕಂಡು ಬರುತ್ತಿಲ್ಲ. ಇದು ಆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಚುನಾವಣೆಗೆ ಇನ್ನೂ ಕೇವಲ ಐದು ದಿನ ಬಾಕಿಯಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಮುಖ ಜೋತಾಕಿಕೊಂಡು ತಿರುಗಾಡುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್‌ಗೆ ಇದೊಂದು ದೊಡ್ಡ ಹೊಡೆತ ಅಂದರೆ ಅತಿಶಯೋಕ್ತಿಯಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪುಟಿದೇಳಬೇಕಾದ ಪರಸ್ಥಿತಿ ಎದುರಾಗಿದೆ. ಅದರ ನಾಯಕರು ಇತ್ತ ಕಡೆ ಗಮನ ಹರಿಸುವರೇ ಎಂಬುದನ್ನು ಕಾದು ನೋಡಬೇಕು. ಅಂತು ಮಾನ್ವಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರದಲ್ಲಿ ಜೆಡಿಎಸ್ ಎಲ್ಲರಿಗಿಂತಲು ಒಂದು ಹೆಜ್ಜೆ ಮುಂದಿದೆ. ನಂತರ ಬಿಜೆಪಿ, ಅನಂತರ ಕಾಂಗ್ರೆಸ್ ಇದೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದೇ ರೀತಿಯಲ್ಲಿ ಜೆಡಿಎಸ್ ಮುನ್ನೆಡೆದರೆ ಅದು ಗೆಲುವಿನ ದಡ ಸೇರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇನ್ನೂ ಐದು ದಿನಗಳು ಚುನಾವಣೆಗೆ ಬಾಕಿ ಉಳಿದಿರುವುದರಿಂದ ಪಕ್ಷಗಳು ಯಾವ ತಂತ್ರಗಳನ್ನು ಅನುಸರಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Tags: BJpBV NayakaCongressHampaiah NayakaJDSKarnataka Assembly Election 2023ManviNeermanviRaja Venkatappa Nayakಕರ್ನಾಟಕ ವಿಧಾನಸಭೆ ಚುನಾವಣೆ 2023ಕಾಂಗ್ರೆಸ್ಜೆದಿಎಸ್ನೀರಮಾನ್ವಿಬಿ.ಹಂಪಯ್ಯ ನಾಯಕಬಿಜೆಪಿಬಿವಿ ನಾಯಕಮಾನ್ವಿರಾಜಾ ವೆಂಕಟಪ್ಪ ನಾಯಕ
Previous Post

ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’

Next Post

ಗರ್ಭಕೋಶದಲ್ಲಿದ್ದ 34 ವಾರಗಳ ಪುಟ್ಟ ಮಗುವಿಗೆ ಮೆದುಳು ಶಸ್ತ್ರಚಿಕಿತ್ಸೆ!

Dynamic Leader

Next Post

ಗರ್ಭಕೋಶದಲ್ಲಿದ್ದ 34 ವಾರಗಳ ಪುಟ್ಟ ಮಗುವಿಗೆ ಮೆದುಳು ಶಸ್ತ್ರಚಿಕಿತ್ಸೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS