ಮುಸ್ಲಿಮರು ಸರ್ಕಾರದ ಎಲ್ಲಾ ಯೋಜನೆಗಳ ಪಾಲುದಾರರು ಆಗಬೇಕು! ಕರ್ನಾಟಕ ಮುಸ್ಲಿಮ್ ಯೂನಿಟಿ (KMU) » Dynamic Leader
October 21, 2024
ರಾಜ್ಯ

ಮುಸ್ಲಿಮರು ಸರ್ಕಾರದ ಎಲ್ಲಾ ಯೋಜನೆಗಳ ಪಾಲುದಾರರು ಆಗಬೇಕು! ಕರ್ನಾಟಕ ಮುಸ್ಲಿಮ್ ಯೂನಿಟಿ (KMU)

ಕರ್ನಾಟಕ ಮುಸ್ಲಿಮ್ ಯೂನಿಟಿ (KMU) ಬಾಗಲಕೋಟೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಮುಸ್ಲಿಮರ ಐಕ್ಯತಾ ಸಮಾವೇಶವು ಬಾಗಲಕೋಟೆ ಜಿಲ್ಲೆಯ ಹುನುಗುಂದ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.

ಸುಮಾರು ಮುನ್ನೂರಕ್ಕೂ ಹೆಚ್ಚು ಕೆಎಂಯು ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಕೆಎಂಯುನ ರಾಜ್ಯ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿಯವರು, ಕರ್ನಾಟಕ ಮುಸ್ಲಿಮ್ ಸಮಾಜದ ಪ್ರಮುಖವಾದ ಮೂರು ಬೇಡಿಕೆಗಳ ನಿರ್ಣಯಗಳನ್ನು ಸಮಾವೇಶದಲ್ಲಿ ಓದಿದರು.  ಅದಕ್ಕೆ ಎಲ್ಲಾ ಪದಾಧಿಕಾರಿಗಳು ಕೈ ಎತ್ತುವುದರ ಮೂಲಕ ಬೆಂಬಲ ವ್ಯಕ್ತಪಡಿಸಿದರು. 

ಅಲ್ಲದೆ, ಬಾಗಲಕೋಟೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರಗಳು ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ನಗರ, ಹೋಬಳಿ, ಪಂಚಾಯತಿ, ಹಳ್ಳಿ ಹಾಗೂ ವಾರ್ಡ್ ಮಟ್ಟದಲ್ಲಿ ಸಂಘಟನೆಯನ್ನು ಕಟ್ಟುವ ಮೂಲಕ, ಮುಸ್ಲಿಮರ ಸಾಮಾಜಿಕ ನ್ಯಾಯ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಸಮಪಾಲಿಗಾಗಿ ನಾವು ಒಂದಾಗಬೇಕು ಎಂಬ ನಿರ್ಣಯವನ್ನು ಕೈಗೊಂಡರು.

ಕರ್ನಾಟಕ ಮುಸ್ಲಿಮ್ ಯೂನಿಟಿಯ ಉತ್ತರ ಕರ್ನಾಟಕ ಸಂಚಾಲಕರಾದ ಮೈಬೂಬ್ ಸರ್ಕಾವಾಸ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಮುಸ್ಲಿಮರು ಸರ್ಕಾರದ ಎಲ್ಲಾ ಯೋಜನೆಗಳ ಪಾಲುದಾರರು ಆಗಬೇಕು; ತಳಮಟ್ಟದ ರಾಜಕೀಯ ನಾಯಕತ್ವಕ್ಕೆ ಆದ್ಯತೆ ಅವಕಾಶಗಳನ್ನು ನೀಡಬೇಕು; ಈ ನಿಟ್ಟಿನಲ್ಲಿ ನಮ್ಮ ಸಂಘಟನೆ ಮುಂದಿನ ದಿನಗಳಲ್ಲಿ ಶ್ರಮಿಸಲಿದೆ ಎಂದರು.

ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹಾಗೂ ನಗರ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳ ಪದಗ್ರಹಣ ಕಾರ್ಯ ನಡೆಯಿತು. ಅಧ್ಯಕ್ಷೀಯ ಭಾಷಣವನ್ನು ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರರವರು ವಹಿಸಿದ್ದರು. ಈ ಸಮಾವೇಶದಲ್ಲಿ ಕೆಎಂಯುನ ಇತರೆ ಜಿಲ್ಲಾ ಮುಖಂಡರು, ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

Related Posts