• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಸಂಸತ್ತಿನ ವಿಶೇಷ ಅಧಿವೇಶನ ಸೂಚನೆ; ಅವಧಿಪೂರ್ವ ಚುನಾವಣೆಯೇ? ಕೇಂದ್ರ ಬಿಜೆಪಿ ಸರ್ಕಾರದ ಯೋಜನೆ ಏನು?!

by Dynamic Leader
01/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ ಸಂಪಾದಕರು

ಲೋಕಸಭೆ ಚುನಾವಣೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಕಾನೂನು ಕರಡು ತರಬಹುದು ಎಂದು ಹೇಳಲಾಗುತ್ತಿದೆ.

ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಮೈತ್ರಿಕೂಟದ ಮೂರನೇ ಸಭೆ ನಿನ್ನೆ ಮುಂಬೈನಲ್ಲಿ (ಆ. 31) ಆರಂಭವಾಗುತ್ತಿದ್ದಂತೆಯೇ ಸಂಸತ್ತಿನ ವಿಶೇಷ ಅಧಿವೇಶನ ಕುರಿತಾದ ಘೋಷಣೆಯನ್ನು ದಿಢೀರ್ ಎಂದು ಹೊರಡಿಸಲಾಗಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಘೋಷಿಸಲಾಗಿದೆ. ‘ಇದು 17ನೇ ಲೋಕಸಭೆಯ 13ನೇ ಅಧಿವೇಶನವಾಗಿದ್ದು, ರಾಜ್ಯಸಭೆಯ 261ನೇ ಅಧಿವೇಶನವೂ ಆಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯ ಒಂಬತ್ತೂವರೆ ವರ್ಷಗಳ ಆಡಳಿತದಲ್ಲಿ ಜಿಎಸ್‌ಟಿಯನ್ನು ಪರಿಚಯಿಸಿದಾಗ, ಜೂನ್ 10, 2017 ರಂದು ಮೊದಲ ಬಾರಿಗೆ ಸಂಸತ್ತಿನ ಉಭಯ ಸದನಗಳ ಜಂಟಿ ಸಭೆ ನಡೆಸಲಾಯಿತು. ಆ ಬಳಿಕ ಇದೀಗ ಎರಡನೇ ಬಾರಿಗೆ ಉಭಯ ಸದನಗಳ ಜಂಟಿ ಸಭೆ ನಡೆಯಲಿದೆ. ವರದಿಗಳ ಪ್ರಕಾರ ಸಂಸತ್ತಿನ ನೂತನ ಕಟ್ಟಡದಲ್ಲಿ ಈ ಸಭೆ ನಡೆಯಲಿದೆ.

ಆದರೆ, ಸಂಸದೀಯ ವ್ಯವಹಾರಗಳ ಸಚಿವಾಲಯ ಅಥವಾ ಉಭಯ ಸದನಗಳ ಕಚೇರಿಗಳು ಈ ಅಧಿವೇಶನದ ಕಾರ್ಯಸೂಚಿಯ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಸೆಪ್ಟೆಂಬರ್ 18 ರಂದು ಅಧಿವೇಶನ ಪ್ರಾರಂಭವಾಗುತ್ತದೆ. ಉತ್ತರ ರಾಜ್ಯಗಳಲ್ಲಿ ಗಣೇಶ ಚತುರ್ಥಿಯನ್ನು ಆ ದಿನವೇ ಆಚರಿಸಲಾಗುತ್ತದೆ. ಹೀಗಾಗಿ ಈ ಸಭೆಯ ‘ಅಜೆಂಡಾ’ ಕುರಿತು ಊಹಾಪೋಹಗಳ ಆಧಾರದಲ್ಲಿ ರಾಜಕೀಯ ವಲಯದಲ್ಲಿ ನಾನಾ ಸುದ್ದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿ ಕೂಟವು 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ!

ಅದಾನಿ ವಿಚಾರ ಸೇರಿದಂತೆ ಬಿಜೆಪಿ ವಿರುದ್ಧ ಎದ್ದಿರುವ ಕೆಲವು ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್ ಸದಸ್ಯರು ಹೇಳುತ್ತಿದ್ದಾರೆ. ಆದರೆ, ಬಹಿರಂಗವಾಗಿ ಪ್ರಸ್ತಾಪಿಸದ ಕೆಲವು ಪ್ರಮುಖ ಅಜೆಂಡಾಗಳನ್ನು ಜಾರಿಗೆ ತರಲು ಬಿಜೆಪಿ ಸರ್ಕಾರ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ ಎಂದು ದೆಹಲಿಯ ರಾಜಕೀಯ ಮೂಲಗಳು ಹೇಳುತ್ತವೆ.

ಪ್ರಸ್ತುತ ಲೋಕಸಭೆಯು ಮೇ 2024 ರಲ್ಲಿ ಕೊನೆಗೊಳ್ಳಲಿರುವುದರಿಂದ, ಸಂಸತ್ತಿನ ಸಾರ್ವತ್ರಿಕ ಚುನಾವಣೆಯನ್ನು ಮೊದಲೇ ನಡೆಸಲು ಬಿಜೆಪಿ ಯೋಜಿಸುತ್ತಿದೆ ಎಂಬ ವರದಿಗಳಿವೆ. ಅಲ್ಲದೇ ಬಹುದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆಯನ್ನು ಬಿಜೆಪಿ ಜಾರಿಗೆ ತರಲು ಹೊರಟಿದೆ ಎಂಬ ಸುದ್ದಿಯೂ ಇದೆ. ಅಂದರೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಈ ವಿಶೇಷ ಅಧಿವೇಶನದಲ್ಲಿ ವಿಧೇಯಕ ತರಲು ಹೊರಟಿದ್ದಾರೆ ಎಂದು ವರದಿಯಾಗಿದೆ.

Tags: 2024 Election2024ರ ಚುನಾವಣೆBJpCongressEarly ElectionSpecial Sessionಅವಧಿಪೂರ್ವ ಚುನಾವಣೆಕಾಂಗ್ರೆಸ್ಬಿಜೆಪಿಮುಂಬೈ ಸಮಾವೇಶಲೋಕಸಭೆವಿರೋಧ ಪಕ್ಷದ ನಾಯಕರುವಿಶೇಷ ಅಧಿವೇಶನಸರ್ವಾಧಿಕಾರಸಂಸತ್
Previous Post

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ!

Next Post

ದೇಶದ ಯಾವುದೇ ಭಾಗದಲ್ಲಿದ್ದರೂ ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ರಕ್ಷಣೆ ನೀಡುತ್ತದೆ: ಬಾಂಬೆ ಹೈಕೋರ್ಟ್

Next Post

ದೇಶದ ಯಾವುದೇ ಭಾಗದಲ್ಲಿದ್ದರೂ ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ರಕ್ಷಣೆ ನೀಡುತ್ತದೆ: ಬಾಂಬೆ ಹೈಕೋರ್ಟ್

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

Recent News

edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS