• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು!

by Dynamic Leader
26/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಇಂದು (ಸೆ.26) ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದರು.  

ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದು ಹೇಳಿದರು.

ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು, ಈಗ ಚಡ್ಡಿ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ನೆಲ, ಜಲ, ಭಾಷೆಯ ವಿಷಯವನ್ನು ರಾಜಕಾರಣ ಮಾಡಬಾರದು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಡಿಎಂಕೆ ‘ಬಿ ಟೀಮ್’ ಎಂಬ ಬಿಜೆಪಿ ಆರೋಪ ರಾಜಕೀಯಪ್ರೇರಿತವಾದುದ್ದು. ಡಿಎಂಕೆ ತಮಿಳುನಾಡಿನವರು. ಬಿಜೆಪಿ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಅವರನ್ನು ಏನೆಂದು ಹೇಳಬೇಕು? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾನು ಸ್ವಾಗತಿಸಿದ್ದೇನೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ಸುಳ್ಳು ಎಂದರು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ; ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ; ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು. ಜನರು ಬಂದ್ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ಪ್ರತಿಭಟನೆ ಮಾಡುವವರು ಇದನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ, ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು. ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಯೋಜನೆ ಅನುಷ್ಠಾನ. ಈ ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂಬುದನ್ನು ಒತ್ತಿ ಹೇಳಿದರು.

ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದು ಒತ್ತಾಯಿಸಿದರು.

ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು. ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ ಎಂದು ಪ್ರತಿಕ್ರಿಯಿಸಿದರು.

Tags: BangaloreBangalore BundhcauveryKannadaMandyaMekedatuMysoreSiddaramaiahಕನ್ನಡಕಾವೇರಿಬೆಂಗಳೂರುಬೆಂಗಳೂರು ಬಂದ್ಮಂಡ್ಯಮೇಕೆದಾಟುಮೈಸೂರುಸಿದ್ದರಾಮಯ್ಯ
Previous Post

ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

Next Post

ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

Dynamic Leader

Next Post

ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS