• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಕುವೆಂಪುನಗರದಲ್ಲಿ ಮಹಾತ್ಮ ಗಾಂಧಿಜೀಯವರ 154ನೇ ಜನ್ಮ ದಿನಾಚರಣೆ!

by Dynamic Leader
02/10/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂ ವ್ಯಾಪ್ತಿಯ ಕುವೆಂಪುನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ “ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್” ವತಿಯಿಂದ ಇಂದು ಮಹಾತ್ಮ ಗಾಂಧಿಯವರ 154ನೇ ಜನ್ಮ ದಿನಾಚರನೆಯನ್ನು ಬಹಳ ವಿಭೃಂಜಣೆಯಿಂದ ಆಚರಿಸಲಾಯಿತು.

ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಕುವೆಂಪುನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗಣ್ಯರಿಂದ ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಎಲ್ಲರಿಗೂ ಸಿಹಿ ಹಂಚಲಾಯಿತು.

ಮಹಾತ್ಮಾ ಗಾಂಧಿಯವರದ್ದು ಅಪರೂಪದ ವ್ಯಕ್ತಿತ್ವ; ಶಸ್ತ್ರಾಸ್ತ್ರಗಳ ವಿರುದ್ಧ ಹೋರಾಡಿ ಗೆದ್ದ ಅಹಿಂಸಾತ್ಮಕ ಪಾರಿವಾಳ. ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್ಸ್ಟೈನ್ ಒಮ್ಮೆ ಅವರ ಬಗ್ಗೆ ಪ್ರಸ್ತಾಪಿಸುತ್ತಾ “ಇಂತಹ ಮನುಷ್ಯ ಈ ಭೂಮಿಯ ಮೇಲೆ ಬದುಕಿದ್ದರು ಎಂದು ಮುಂದಿನ ಪೀಳಿಗೆ ನಂಬುವುದು ತುಂಬಾ ಕಷ್ಟ” ಎಂದರು.

“ಉನ್ನತವಾದ ಗುರಿಯಿಟ್ಟುಕೊಂಡರೆ ಸಾಲದು; ಅದನ್ನು ಸಾಧಿಸುವ ಮಾರ್ಗವೂ ಪ್ರಾಮಾಣಿಕವಾಗಿರಬೇಕು” ಎಂದು ಹೇಳಿದ್ದು ಮಾತ್ರವಲ್ಲ ಹೇಳಿದಂತೆ ಬದುಕಿ ತೋರಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು. ಅಹಿಂಸೆ ಮತ್ತು ಸತ್ಯ ಎಂದಿಗೂ ಸೋಲುವುದಿಲ್ಲ ಎಂದು ಅವರು ದೃಢವಾಗಿ ನಂಬಿದ್ದರು.

ಅನೇಕ ಗುಲಾಮಗಿರಿ ದೇಶಗಳಲ್ಲಿ ಜನರನ್ನು ಮುನ್ನಡೆಸುವ ನಾಯಕರು ಶಸ್ತ್ರಾಸ್ತ್ರಗಳನ್ನು ಹಿಡಿದು ಸ್ವಾತಂತ್ರ್ಯಕ್ಕಾಗಿ ಹೋರಾಡಿದಾಗ, ಅಹಿಂಸೆಯ ಮೂಲಕ ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧ ನಿರಾಯುಧವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಅವರು. ಅಹಿಂಸೆ, ಸತ್ಯ, ಸಮರ್ಪಣೆ, ಪರಿಶ್ರಮದಲ್ಲಿ ಕೊನೆಯವರೆಗೂ ದೃಢವಾಗಿದ್ದ ಅವರು, ಎಂದಿಗೂ ತಾನು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಂಡಿಲ್ಲ ಮತ್ತು ಅವರು ಎಂದಿಗೂ ಹಿಂಸೆಯನ್ನು ಪ್ರತಿಪಾದಿಸಲಿಲ್ಲ.

ರಷ್ಯಾದ ವಿಮೋಚನೆಗಾಗಿ ಹೋರಾಡಿದ ಲೆನಿನ್, ಚೀನಾದ ವಿಮೋಚನೆಗಾಗಿ ಹೋರಾಡಿದ ಮಾವೋ (ಮಾಓ ತ್ಸೆ ತುಂಗ್) ಮುಂತಾದ ವಿಶ್ವದ ಯಾವುದೇ ದೇಶವನ್ನು ತೆಗೆದುಕೊಂಡರೂ ದೇಶಗಳು ಸ್ವಾತಂತ್ರ್ಯ ಪಡೆದಾಗ, ಆ ದೇಶದಲ್ಲಿ ಸ್ಥಾಪಿಸಲಾದ ಸರ್ಕಾರದ ನಾಯಕತ್ವವನ್ನು ಅವರೇ ವಹಿಸಿಕೊಂಡಿದ್ದರು.

ಆದರೆ ಭಾರತದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರು ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಇತರರಿಗೆ ಆಡಳಿತದ ಜವಾಬ್ದಾರಿಯನ್ನು ವಹಿಸಿಕೊಟ್ಟು ಮೊದಲಿನಂತೆ ಸರಳ ವ್ಯಕ್ತಿಯಂತೆ ದೇಶದ ಏಕತೆಗೆ ಮತ್ತು ಪ್ರಗತಿಗೆ ಶ್ರಮಿಸಲು ಮುಂದಾದರು.

ಒಂದು ದೇಶವನ್ನು ಮುನ್ನಡೆಸುವ ನಾಯಕ ಹೇಗಿರಬೇಕು ಎಂಬುದಕ್ಕೆ ಅವರೇ ಉದಾಹರಣೆಯಾಗಿದ್ದರು. ಆದ್ದರಿಂದಲೇ ಮೋಹನ್ ದಾಸ್ ಕರಮಚಂದ ಗಾಂಧಿ “ಮಹಾತ್ಮ” ಆದರು. ಈ ಬಿರುದನ್ನು ಕವಿ ರವೀಂದ್ರನಾಥ ಟ್ಯಾಗೋರ್ ಅವರು ನೀಡಿದ್ದಾರೆ. 1909ರಲ್ಲಿ ಪ್ರಂಜಿವನ್ ಮೆಹ್ತಾ ಎಂಬ ಸ್ನೇಹಿತ ಗಾಂಧಿಗೆ ಬರೆದ ಪತ್ರದಲ್ಲಿ ಮೊದಲ ಬಾರಿಗೆ ಅವರನ್ನು “ಮಹಾತ್ಮ” ಎಂದು ಕರೆದಿದ್ದರು.

ಭಾರತ ಸ್ವತಂತ್ರವಾದಾಗ ವಿದೇಶಿ ಪತ್ರಕರ್ತರೊಬ್ಬರು ಮಹಾತ್ಮ ಗಾಂಧಿಯನ್ನು ಭೇಟಿಯಾಗಿ, “ದೇಶದ ಜನತೆಗೆ ನೀವು ಈಗ ಏನು ಹೇಳಲು ಬಯಸುತ್ತೀರಿ?” ಎಂದು ಕೇಳಿದರು. ಅದಕ್ಕೆ ಗಾಂಧಿಯವರು, “ನನ್ನ ಜೀವನವೇ ನನ್ನ ಸಂದೇಶ” ಎಂದರು.

“ನನ್ನ ಜೀವನವೇ ನನ್ನ ಸಂದೇಶ” ಎಂದು ಸಾರಿದ ಮಹಾತ್ಮ ಗಾಂಧಿಯವರ ಜನ್ಮ ದಿನಾಚರನೆಯನ್ನು ಆಚರಿಸುವುದಲ್ಲದೇ  ಅದನ್ನು ಮುಂದಿನ ತಲಮಾರಿಗೆ ಪರಿಚಯಿಸುವ ಕೆಲಸವೂ ಮಾಡುತ್ತಿರುವ ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್ ಪದಾಧಿಕಾರಿಗಳ ಮತ್ತು ಆಡಳಿತ ಮಂಡಳಿ ಸದಸ್ಯರ ಕಾರ್ಯ ಶ್ಲಾಘನೀಯ.

ಇದನ್ನೂ ಓದಿ: ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ! – ಸಿದ್ದರಾಮಯ್ಯ

Tags: Gandhi JayantiIndependenceKuvempunagarMahatma Gandhiಕುವೆಂಪುನಗರಗಾಂಧಿ ಜಯಂತಿಮಹಾತ್ಮಾಗಾಂಧಿಸ್ವಾತಂತ್ರ್ಯ
Previous Post

ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ!

Next Post

ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ!

Dynamic Leader

Next Post

ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS