ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ » Dynamic Leader
October 21, 2024
ರಾಜ್ಯ

ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಹೇಳಿದ್ದಾರೆ.

“ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ” ಎಂದು ಹೇಳಿದ್ದಾರೆ.

“1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿದ್ದಾರೆ.

Related Posts