• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮುಸಲ್ಮಾನರನ್ನು ಕಟ್ಟಿಹಾಕಿ ಹೊಡೆಯುವ ಹಕ್ಕನ್ನು ಕೊಟ್ಟವರು ಯಾರು? ಗುಜರಾತ್ ಪೊಲೀಸರಿಗೆ ಕೋರ್ಟ್ ಪ್ರಶ್ನೆ!

by Dynamic Leader
24/01/2024
in ದೇಶ
0
0
SHARES
0
VIEWS
Share on FacebookShare on Twitter

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ?

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಿವೆ. ಸಿಎಎ (CAA) ಹಾಗೆ ಕಠಿಣ ಕಾನೂನುಗಳನ್ನು ತರುವ ಮೂಲಕ ಅಲ್ಪಸಂಖ್ಯಾತರನ್ನು ಭಾರತದಿಂದ ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಒಂದೆಡೆಯಾದರೆ ಮತ್ತೊಂದು ಕಡೆ ಹಿಂದೂ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಹಿಂಸಾಚಾರವನ್ನು ಅನಾವರಣಗೊಳಿಸುತ್ತಿವೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಹೆಚ್ಚು ಧಾರ್ಮಿಕ ಸಂಘರ್ಷಗಳಿವೆ. ಆದರೆ ಈಗ ಬಿಜೆಪಿಯೇತರ ರಾಜ್ಯಗಳಲ್ಲಿ ಕೂಡ ಧಾರ್ಮಿಕ ಸಂಘರ್ಷಗಳು ನಡೆಯುತ್ತಿವೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಸುದೀರ್ಘ ಕಾಲ ಆಡಳಿತ ನಡೆಸುತ್ತಿರುವ ಹಾಗೂ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ, ಕಳೆದ ವರ್ಷ ನಡೆದ ಕ್ರೂರ ಘಟನೆಗೆ ಸಂಬಂಧಿಸಿದಂತೆ ತೀರ್ಪೊಂದು ಇದೀಗ ಹೊರಬಿದ್ದಿದೆ.

ಅಕ್ಟೋಬರ್ 2022ರಲ್ಲಿ, ಗುಜರಾತ್‌ನ ಖೇಡಾ ಜಿಲ್ಲೆಯ ಉಂಡೆಲಾ ಗ್ರಾಮದಲ್ಲಿ ಮೂವರು ಯುವಕರು ಪೊಲೀಸರಿಗೆ ಸಿಕ್ಕಿಬಿದ್ದರು. ಕಾರ್ಯಕ್ರಮವೊಂದರಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದಾಗ ಹಲವರು ಘಟನೆಯನ್ನು ಖಂಡಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ, ‘ಲಾಠಿಯಿಂದ ಹೊಡೆಯುವುದು ಹಿಂಸೆಯಾಗುವುದಿಲ್ಲ; ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ’ ಎಂದು ಘಟನೆಯಲ್ಲಿ ಭಾಗಿಯಾದ ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು ವಿವಾದಕ್ಕೀಡಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಪೊಲೀಸರ ಅಪರಾಧ ಸಾಬೀತಾಗಿದ್ದು, ಕಳೆದ ವರ್ಷ (2023) ಅಕ್ಟೋಬರ್‌ನಲ್ಲಿ ತಪ್ಪಿತಸ್ಥರಾದ 4 ಪೊಲೀಸರಿಗೆ ಶಿಕ್ಷೆ ಪ್ರಕಟಿಸಲಾಗಿತ್ತು. ಅದರಂತೆ ಗುಜರಾತ್ ಹೈಕೋರ್ಟ್ ಅವರಿಗೆ 14 ದಿನಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ತೀರ್ಪು ನೀಡಿತು.

ಆದರೆ ಗುಜರಾತ್ ನ್ಯಾಯಾಲಯದ ತೀರ್ಪಿನ ವಿರುದ್ಧ 4 ಮಂದಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ನಿನ್ನೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಗುಜರಾತ್ ಪೊಲೀಸರನ್ನು ಪ್ರಶ್ನಿಸಿದೆ.

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೂ “ಜನರನ್ನು ಕಂಬಗಳಿಗೆ ಕಟ್ಟಿಹಾಕಿ, ಸಾರ್ವಜನಿಕವಾಗಿ ಹೊಡೆದು, ವಿಡಿಯೋ ತೆಗೆಯುವುದೆಲ್ಲ ಯಾವ ರೀತಿಯ ಹಿಂಸೆ? ಹಾಗಾಗಿ ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾಗಿದೆ” ಎಂದು ಹೇಳಿ, ಸದರಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

Tags: BatonImprisonmentMuslim YouthPoliceReligious ConflictSupreme Courtಜೈಲು ಶಿಕ್ಷೆಧಾರ್ಮಿಕ ಸಂಘರ್ಷಪೊಲೀಸ್ಮುಸ್ಲಿಂ ಯುವಕಲಾಠಿ ಏಟುಸುಪ್ರೀಂ ಕೋರ್ಟ್
Previous Post

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು: ಮಾಯಾವತಿ ಆಗ್ರಹ!

Next Post

ಮತದಾನ ಹಕ್ಕು ಮತ್ತು ಮೀಸಲಾತಿ ಇವೆರಡೂ ನಮ್ಮ ಕಣ್ಣುಗಳಿದ್ದಂತೆ; ಅದನ್ನು ಯಾವತ್ತೂ ಕಳೆದುಕೊಳ್ಳಬಾರದು: ಡಿ.ಸಿ.ಪ್ರಕಾಶ್

Next Post

ಮತದಾನ ಹಕ್ಕು ಮತ್ತು ಮೀಸಲಾತಿ ಇವೆರಡೂ ನಮ್ಮ ಕಣ್ಣುಗಳಿದ್ದಂತೆ; ಅದನ್ನು ಯಾವತ್ತೂ ಕಳೆದುಕೊಳ್ಳಬಾರದು: ಡಿ.ಸಿ.ಪ್ರಕಾಶ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS