• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ತಮಿಳು ನಟ ವಿಜಯ್ ಅವರಿಂದ “ತಮಿಳಗ ವೆಟ್ರಿ ಕಳಗಂ” ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷ ಅಸ್ತಿತ್ವಕ್ಕೆ: ಫುಲ್ ಡೀಟೇಲ್ಸ್ ಇಲ್ಲಿದೆ!

by Dynamic Leader
02/02/2024
in ರಾಜಕೀಯ, ಸಿನಿಮಾ
0
0
SHARES
0
VIEWS
Share on FacebookShare on Twitter

ಚೆನ್ನೈ: ನಟ ವಿಜಯ್, ರಾಜಕೀಯ ರಂಗಕ್ಕೆ ಇಳಿದಿದ್ದಾರೆ. ಅವರ ಪಕ್ಷಕ್ಕೆ “ತಮಿಳಗ ವೆಟ್ರಿ ಕಳಗಂ” ಎಂದು ಹೆಸರಿಟ್ಟಿರುವುದಾಗಿ ಇಂದು ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಇದರ ಬಗ್ಗೆ ಅವರು ಪ್ರಕಟಿಸಿರುವ ಪತ್ರಿಕಾ ಹೇಳಿಕೆಯಲ್ಲಿ, “ವಿಜಯ್ ಪೀಪಲ್ಸ್ ಮೂವ್ಮೆಂಟ್ನ ಹೆಸರಿನಲ್ಲಿ ಅನೇಕ ವರ್ಷಗಳಿಂದ ತನ್ನಿಂದ ಎಷ್ಟು ಸಾಧ್ಯವೋ ಅಷ್ಟು ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಮಾಡುತ್ತಾ ಪರಿಹಾರ ನೆರವುಗಳನ್ನು ನೀಡಿ, ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವುದು ತಮ್ಮೆಲ್ಲರಿಗೂ ತಿಳಿದಿದೆ.

ಆದಾಗ್ಯೂ, ಸಂಪೂರ್ಣವಾಗಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸುಧಾರಣೆಗಳನ್ನು ತರಲು, ಸ್ವಯಂ ಸೇವಾ ಸಂಸ್ಥೆಯಿಂದ ಸಾಧ್ಯವಿಲ್ಲ, ಅದನ್ನು ಮಾಡಲು ರಾಜಕೀಯ ಶಕ್ತಿಯ ಅಗತ್ಯವಿದೆ.

ಪ್ರಸ್ತುತ ರಾಜಕೀಯ ವಾತಾವರಣ, ಆಡಳಿತಾತ್ಮಕ ಅಸ್ವಸ್ಥತೆಗಳು ಮತ್ತು ‘ಭ್ರಷ್ಟ ರಾಜಕೀಯ ಸಂಸ್ಕೃತಿ’ ಒಂದೆಡೆಯಾದರೆ, ನಮ್ಮ ಜನರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುವ ‘ವಿಭಜಕ ರಾಜಕೀಯ ಸಂಸ್ಕೃತಿ’ ಮತ್ತೊಂದೆಡೆಯಾಗಿದೆ. ಇದರಿಂದ ನಮ್ಮ ಏಕತೆ ಮತ್ತು ಪ್ರಗತಿಗೆ ಅಡೆತಡೆ ಉಂಟಾಗಿವೆ.

ನಿಸ್ವಾರ್ಥ, ಪಾರದರ್ಶಕ, ಜಾತಿ ರಹಿತ, ದೂರದೃಷ್ಟಿಯ ಆಲೋಚನೆ ಹೊಂದಿದ, ಲಂಚ-ಭ್ರಷ್ಟಾಚಾರ ರಹಿತ ದಕ್ಷ ಆಡಳಿತವನ್ನು ಮುನ್ನಡೆಸಬಲ್ಲ, ಮೂಲಭೂತ ರಾಜಕೀಯ ಬದಲಾವಣೆಗಾಗಿ, ನಿರ್ದಿಷ್ಟವಾಗಿ ಹೇಳುವುದಾದರೆ, ತಮಿಳುನಾಡಿನಲ್ಲಿರುವ ಪ್ರತಿಯೊಬ್ಬರೂ ಅದಕ್ಕಾಗಿ ಹಾತೊರೆಯುತ್ತಿದ್ದಾರೆ ಎಂಬುದು ವಾಸ್ತವಿಕ ಸತ್ಯವಾಗಿದೆ. ಅಂತಹ ಮೂಲಭೂತ ರಾಜಕೀಯ ಬದಲಾವಣೆಯನ್ನು, ಜನರ ಒಮ್ಮತದ ಅಭಿಮಾನ ಮತ್ತು ಪ್ರೀತಿಯನ್ನು ಪಡೆದ ಪ್ರಮುಖವಾದ ಒಂದು ಜನಶಕ್ತಿಯ ಮೂಲಕವೇ ಸಾಧ್ಯವಾಗಿಸಬಹುದಾಗಿದೆ.

ಅದರಂತೆ ನನ್ನ ನೇತೃತ್ವದಲ್ಲಿ “ತಮಿಳಗ ವೆಟ್ರಿ ಕಳಗಂ” ಎಂಬ ಹೆಸರಿನಲ್ಲಿ ರಾಜಕೀಯ ಪಕ್ಷವನ್ನು ಆರಂಭಿಸಿ, ಭಾರತದ ಮುಖ್ಯ ಚುನಾವಣಾ ಆಯೋಗದಲ್ಲಿ ನೋಂದಾಯಿಸಲು ನಮ್ಮ ಪಕ್ಷದ ಪರವಾಗಿ ಇಂದು ಅರ್ಜಿ ಸಲ್ಲಿಸಲಾಗಿದೆ. ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಜನರು ಬಯಸುವ ಮೂಲಭೂತ ರಾಜಕೀಯ ಬದಲಾವಣೆಗೆ ಕಾರಣವಾಗುವುದು ನಮ್ಮ ಗುರಿಯಾಗಿದೆ.

ಚುನಾವಣಾ ಆಯೋಗದ ಅನುಮೋದನೆ ಪಡೆದ ನಂತರ, ಮುಂಬರುವ ಸಂಸತ್ತಿನ ಚುನಾವಣೆ ಮುಗಿದ ಮೇಲೆ, ತಮಿಳುನಾಡಿಗೆ ಸಂಬಂಧಿಸಿದ ನೀತಿಗಳ ಯಶಸ್ಸಿಗೆ ಮತ್ತು ತಮಿಳುನಾಡಿನ ಜನರ ಉನ್ನತಿಗಾಗಿ ನಮ್ಮ ಪಕ್ಷದ ನೀತಿ, ನಿಯಮಗಳು, ಧ್ವಜ, ಚಿಹ್ನೆ ಮತ್ತು ಕ್ರಿಯಾ ಯೋಜನೆಗಳನ್ನು ಮುಂದಿಟ್ಟು, ಸಾರ್ವಜನಿಕ ಸಭೆ ಸಮಾರಂಭಗಳೊಂದಿಗೆ ತಮಿಳುನಾಡಿನ ಜನತೆಗಾಗಿ ನಮ್ಮ ರಾಜಕೀಯ ಪಯಣ ಆರಂಭವಾಗಲಿದೆ.

ಮುಂಬರುವ 2024ರ ಸಂಸತ್ ಚುನಾವಣೆಯಲ್ಲಿ ನಾವು ಸ್ಪರ್ಧಿಸುವುದಿಲ್ಲ, ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸಾಮಾನ್ಯ ಸಭೆ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ನನ್ನ ಮಟ್ಟಿಗೆ ಹೇಳುವುದಾದರೆ, ರಾಜಕೀಯವು ಕೇವಲ ಇನ್ನೊಂದು ವೃತ್ತಿಯಲ್ಲ; ರಾಜಕೀಯ ನನ್ನ ಹವ್ಯಾಸವಲ್ಲ; ಅದು ನನ್ನ ಆಳವಾದ ಆಸೆ. ಅದರಲ್ಲಿ ನನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಬಯಸುತ್ತೇನೆ.

ನನ್ನ ಪರವಾಗಿ, ನಾನು ಈಗಾಗಲೇ ಒಪ್ಪಿಕೊಂಡಿರುವ ಮತ್ತೊಂದು ಚಲನಚಿತ್ರ ಸಂಬಂಧಿತ ಕೆಲಸಗಳನ್ನು, ಪಕ್ಷದ ಕೆಲಸಕ್ಕೆ ಅಡ್ಡಿಯಾಗದ ರೀತಿಯಲ್ಲಿ ಮುಗಿಸಿಕೊಟ್ಟ ನಂತರ, ನಾನು ಸಂಪೂರ್ಣವಾಗಿ ಜನಸೇವೆಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.  

Tags: Actor VijayPolitical PartyTamilaga Vetri KazhagamTVKTVK VijayVijayಟಿವಿಕೆಟಿವಿಕೆ ವಿಜಯ್ತಮಿಳಗ ವೆಟ್ರಿ ಕಳಗಂತಮಿಳುನಾಡುನಟ ವಿಜಯ್ರಾಜಕೀಯ ಪಕ್ಷವಿಜಯ್
Previous Post

ಸಂತೋಷ್ ಕೊಡೆಂಕೇರಿ ನಿರ್ದೇಶನದ “ರವಿಕೆ ಪ್ರಸಂಗ” ಚಿತ್ರಕ್ಕೆ ಯು-ಎ ಸರ್ಟಿಫಿಕೇಟ್ ನೀಡಿದ ಸೆನ್ಸಾರ್ ಮಂಡಳಿ!

Next Post

ಹೇಮಂತ್ ರಾವ್ ಜೊತೆ ಹ್ಯಾಟ್ರಿಕ್ ಹೀರೋ ಸಿನಿಮಾ…ಸಪ್ತ ಡೈರೆಕ್ಟರ್‌ಗೆ ಶಿವಣ್ಣ ಜೈ!

Next Post

ಹೇಮಂತ್ ರಾವ್ ಜೊತೆ ಹ್ಯಾಟ್ರಿಕ್ ಹೀರೋ ಸಿನಿಮಾ...ಸಪ್ತ ಡೈರೆಕ್ಟರ್‌ಗೆ ಶಿವಣ್ಣ ಜೈ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

Recent News

edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS