• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಚಂದ್ರನಿಗೆ ಹೋಗಲು 41 ದಿನಗಳು ಸಾಕು; ಎಸ್‌ಬಿಐಗೆ ದಾನಿಗಳ ಹೆಸರುಗಳನ್ನು ನೀಡಲು 140 ದಿನಗಳು ಬೇಕೆ?

by Dynamic Leader
06/03/2024
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಕೇಂದ್ರ ಬಿಜೆಪಿ ಸರ್ಕಾರವು 2018ರಲ್ಲಿ ಚುನಾವಣಾ ಬಾಂಡ್ ಎಂಬ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯ ಮೂಲಕ ವ್ಯಕ್ತಿಗಳು ಮತ್ತು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿ ತಮ್ಮ ನೆಚ್ಚಿನ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದು. ಅದಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಚುನಾವಣಾ ಬಾಂಡ್‌ಗಳು 1 ಸಾವಿರದಿಂದ 1 ಕೋಟಿ ರೂಪಾಯಿಯವರೆಗೆ ಮಾರಾಟ ಮಾಡಲಾಯಿತು.

ಈ ಯೋಜನೆಯ ವಿಶೇಷತೆ ಏನೆಂದರೆ, ಚುನಾವಣಾ ಬಾಂಡ್‌ಗಳನ್ನು ಖರೀದಿಸುವವರ ಹೆಸರು ಮತ್ತು ವಿಳಾಸ ಸೇರಿದಂತೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ. ಈ ಬಾಂಡ್ ಅನ್ನು 15 ದಿನಗಳಲ್ಲಿ ನಗದು ರೂಪದಲ್ಲಿ ಪರಿವರ್ತಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಚುನಾವಣಾ ಬಾಂಡ್‌ಗಳ ಮೊತ್ತವು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಹೋಗುತ್ತವೆ. ಅಂತಹ ಸಮಸ್ಯೆ ಈ ಚುನಾವಣಾ ಬಾಂಡ್ನಲ್ಲಿ ಇದೆ.

ಈ ಚುನಾವಣಾ ಬಾಂಡ್ ಸಂಪೂರ್ಣವಾಗಿ ಬಿಜೆಪಿಯ ಪರವಾಗಿಯೇ ಇತ್ತು ಎಂದು ಹೇಳಲಾಗುತ್ತಿದೆ. 2016 ರಿಂದ 2022ರ ಅವಧಿಯಲ್ಲಿ ಬಿಜೆಪಿ ಮಾತ್ರ ರೂ.5,272 ಕೋಟಿ ದೇಣಿಗೆ ಪಡೆದಿತ್ತು. ಇದು ಒಟ್ಟು ನಿಧಿಯಲ್ಲಿ ಶೇ.58 ರಷ್ಟು ಆಗಿರುತ್ತದೆ. ಈ ಕಾರಣದಿಂದಾಗಿ, ಚುನಾವಣಾ ಬಾಂಡ್‌ಗಳಲ್ಲಿ ಪಾರದರ್ಶಕತೆ ಇಲ್ಲ, ಹೀಗಾಗಿ ಅದನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾದವು.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ 5 ನ್ಯಾಯಾಧೀಶರ ಸಂವಿಧಾನ ಪೀಠವು, ಚುನಾವಣಾ ಬಾಂಡ್ ಕಾರ್ಯವಿಧಾನವನ್ನು ರದ್ದುಗೊಳಿಸಲಾಗಿದೆ ಎಂದು ಸರ್ವಾನುಮತದ ತೀರ್ಪು ನೀಡಿತು.

ಇದಲ್ಲದೆ, 2019 ರಿಂದ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದವರ ವಿವರಗಳನ್ನು ಮಾರ್ಚ್ 6 ರೊಳಗೆ ಎಸ್‌ಬಿಐ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಮತ್ತು ದಾನಿಗಳ ವಿವರಗಳನ್ನು ಮಾರ್ಚ್ 13 ರೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತು.

ಏತನ್ಮದ್ಯೆ, ಎರಡು ದಿನಗಳ ಹಿಂದೆ ಎಸ್‌ಬಿಐ ಬ್ಯಾಂಕ್, ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್‌ 30 ರವರೆಗೆ ಕಾಲಾವಕಾಶ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುವ ಮೂಲಕ ಭಾರಿ ವಿವಾದವನ್ನು ಸೃಷ್ಟಿಸಿತು. ಈ ಘಟನೆಯಲ್ಲಿ, ಚುನಾವಣೆಗೆ ಮುನ್ನ ಈ ವಿವರಗಳನ್ನು ಪ್ರಕಟಿಸುವುದನ್ನು ತಪ್ಪಿಸಲು ಎಸ್‌ಬಿಐ ಇಂತಹ ಬೇಡಿಕೆಯನ್ನು ಎತ್ತಿದೆ ಎಂದು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸುತ್ತಿವೆ.

ಈ ಹಿನ್ನಲೆಯಲ್ಲಿ, ತಮಿಳುನಾಡಿನ ಮಧುರೈ ಸಂಸದ ಎಸ್.ವೆಂಕಟೇಶನ್ ಅವರು ಈ ವಿಚಾರವಾಗಿ ಎಸ್‌ಬಿಐ ಬ್ಯಾಂಕ್ ಅನ್ನು ಟೀಕಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ, “ಚಂದ್ರಯಾನವು ಚಂದ್ರನನ್ನು ತಲುಪಲು 41 ದಿನಗಳನ್ನು ತೆಗೆದುಕೊಂಡಿತು, ಇದು ಆಧುನಿಕ ವಿಜ್ಞಾನದ ಸಾಧನೆಯಾಗಿದೆ. ಮುಂಬೈ ಮೂಲದ ಎಸ್‌ಬಿಐ ದೆಹಲಿಯ ಸುಪ್ರೀಂ ಕೋರ್ಟ್‌ಗೆ ದಾನಿಗಳ ಹೆಸರುಗಳನ್ನು ನೀಡಲು 140 ದಿನಗಳ ಕಾಲಾವಕಾಶ ಕೇಳುತ್ತಿದೆ. ಇದು ಆಧುನಿಕ ಭ್ರಷ್ಟಾಚಾರದ ಸಾಧನೆಯಾಗಿದೆ.

48 ಕೋಟಿ ಗ್ರಾಹಕರ ನಂಬಿಕೆಯಾಗಿದ್ದ ಎಸ್‌ಬಿಐ ಇನ್ನು ಮುಂದೆ ಹ್ಯಾಶ್‌ಟ್ಯಾಗ್ ಹಾಕಿ #ModiKaParivar ಎಂದು ನಮೂದಿಸಿಕೊಳ್ಳಲಿ” ಎಂದು ಟೀಕಿಸಿದ್ದಾರೆ.

Tags: Electoral Bondsಎಸ್‌ಬಿಐಚಂದ್ರಯಾನಚುನಾವಣಾ ಬಾಂಡ್ಚುನಾವಣೆ ಆಯೋಗಸುಪ್ರೀಂ ಕೋರ್ಟ್
Previous Post

ಭಾರತೀಯರೆಲ್ಲರೂ ನನ್ನ ಕುಟುಂಬ ಎಂದ ಮೋದಿ; ಮಣಿಪುರದ ಜನರೂ ನಿಮ್ಮ ಕುಟುಂಬವೇ? ಎಂದ ನಟ ಪ್ರಕಾಶ್ ರಾಜ್!

Next Post

ಬಿಜೆಪಿಯಲ್ಲಿ ವಯೋಮಿತಿ: ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್‌ಗೆ ವಿನಾಯಿತಿ?

Next Post

ಬಿಜೆಪಿಯಲ್ಲಿ ವಯೋಮಿತಿ: ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್‌ಗೆ ವಿನಾಯಿತಿ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS