• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಲೇಖನ

4 ಹಂತದ ಮತದಾನ: ಶೇಕಡಾವಾರು ಪ್ರಮಾಣದಲ್ಲಿ ಮುಂದುವರಿದ ಅಕ್ರಮಗಳು; ಏಕಾಏಕಿ ಹೆಚ್ಚಾದ 1 ಕೋಟಿ ಮತಗಳು! ಮೋದಿ ಸರ್ಕಾರದ ಷಡ್ಯಂತ್ರವೇನು?

by Dynamic Leader
18/05/2024
in ಲೇಖನ
0
0
SHARES
1
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

ಚುನಾವಣಾ ಆಯೋಗದ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ, ಮತದಾರರ ಸಂಖ್ಯೆ ಇದ್ದಕ್ಕಿದ್ದಂತೆ ಒಂದು ಕೋಟಿಯಷ್ಟು ಹೆಚ್ಚಾಗಿದೆ.!

ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ 4 ಹಂತದ ಚುನಾವಣೆ ಮುಗಿದಿದೆ. ಹಲವು ರಾಜ್ಯಗಳಲ್ಲಿ ಚುನಾವಣೆ ವೇಳೆ ನಾನಾ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿತ್ತು. ಏತನ್ಮಧ್ಯೆ, ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ಟೀಕಿಸಲಾಗುತ್ತಿದೆ.

ಅದರಲ್ಲೂ ಚುನಾವಣೆ ಘೋಷಣೆಯಾದಾಗಿನಿಂದಲೂ ಕೇವಲ ಇಂಡಿಯಾ ಮೈತ್ರಿಕೂಟದ ನಾಯಕರು ಹಾಗೂ ಅಭ್ಯರ್ಥಿಗಳನ್ನೇ ಗುರಿಯಾಗಿಸಿಕೊಂಡು ಅಡ್ಡಿಪಡಿಸುವ ರೀತಿಯಲ್ಲಿ ಚುನಾವಣಾ ಆಯೋಗ ವರ್ತಿಸುತ್ತಿದೆ ಎನ್ನಲಾಗಿತ್ತು. ಇದಲ್ಲದೇ ಮತದಾನದ ವಿವರ ಪ್ರಕಟಿಸುವಲ್ಲಿ ನಾನಾ ಅಕ್ರಮಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಮೊದಲ ಹಂತ ಹಾಗೂ ಎರಡನೇ ಹಂತದ ಮತದಾನ ಮುಗಿದಮೇಲೆ, ಚುನಾವಣಾ ಆಯೋಗವು ತಕ್ಷಣದ ಮತದಾನದ ಶೇಕಡಾವಾರು ಪ್ರಮಾಣವನ್ನು ಬಿಡುಗಡೆ ಮಾಡದೆ ವಿಳಂಬ ಮಾಡಿ, ಮೊದಲು ಒಂದುರೀತಿಯ ಅಂಕಿಅಂಶವನ್ನು, ನಂತರ ಮತ್ತೊಂದು ಅಂಕಿಅಂಶವನ್ನು ಬಿಡುಗಡೆ ಮಾಡಿ ಗೊಂದಲವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತದಾನದ ವಿವರ ಬಿಡುಗಡೆಗೆ ವಿಳಂಬ ಮಾಡಿರುವುದು ಎಲ್ಲರಲ್ಲೂ ಅನುಮಾನ ಮೂಡಿಸಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಚುನಾವಣಾ ಮತದಾನದ ಶೇಕಡಾವಾರು ಮತ್ತು ಮತದಾರರ ಸಂಖ್ಯೆಯನ್ನು ತಕ್ಷಣವೇ ಪ್ರಕಟಿಸಬೇಕೆಂದು ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಲ್ಲದೆ, ಪ್ರಕರಣವನ್ನು ತುರ್ತಾಗಿ ವಿಚಾರಿಸುವಂತೆ ಮನವಿ ಮಾಡಿದ ನಂತರ, ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ತಕ್ಷಣವೇ ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಈ ವೇಳೆ ಚುನಾವಣಾ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ ಮತದಾನ ಮಾಡಿದವರ ಸಂಖ್ಯೆ ಹಠಾತ್ತನೆ ಒಂದು ಕೋಟಿ ಏರಿಕೆಯಾಗಿದೆ. ನಾಲ್ಕು ಹಂತದ ಮತದಾನದಲ್ಲಿ ಚುನಾವಣಾ ಆಯೋಗವು ಆರಂಭದಲ್ಲಿ 65.4% ಮತದಾನವಾಗಿದೆ ಎಂದು ವರದಿ ಮಾಡಿದೆ. ನಂತರ ಮೊನ್ನೆ ಬಿಡುಗಡೆ ಮಾಡಿರುವ ಹೊಸ ವರದಿ ಪ್ರಕಾರ ಶೇ.66.9ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಲೆಕ್ಕಗಳ ಪ್ರಕಾರ ಒಂದು ಕೋಟಿ ಮತಗಳು (1.07 ಕೋಟಿ) ಹೆಚ್ಚಿರುವುದು ಬೆಳಕಿಗೆ ಬಂದಿದೆ.

ಅಂದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 28,000 ಮತಗಳ ಹೆಚ್ಚಳವಾಗಿದೆ. ಈ ಕುರಿತು ವಿಶ್ಲೇಷಣೆ ನಡೆಸಿದಾಗ ಮೊದಲ ಹಂತದಲ್ಲಿ 18 ಲಕ್ಷ, ಎರಡನೇ ಹಂತದಲ್ಲಿ 32 ಲಕ್ಷ, ಮೂರನೇ ಹಂತದಲ್ಲಿ 22 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 34 ಲಕ್ಷ ಮತಗಳು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.

ಅಸ್ಸಾಂ ನಲ್ಲಿ ಪ್ರತಿ ಕ್ಷೇತ್ರಕ್ಕೆ ಗರಿಷ್ಠ ಸರಾಸರಿ 73,000 ಮತಗಳು ಹೆಚ್ಚಳವಾಗಿದೆ. ಆಂಧ್ರಪ್ರದೇಶದಲ್ಲಿ ಪ್ರತಿ ಕ್ಷೇತ್ರಕ್ಕೆ 69,000 ಮತಗಳು ಹೆಚ್ಚಿವೆ. ಕೇರಳದಲ್ಲಿ ಪ್ರತಿ ಕ್ಷೇತ್ರಕ್ಕೆ 57 ಸಾವಿರ, ಕರ್ನಾಟಕದಲ್ಲಿ 51 ಸಾವಿರ ಮತ್ತು ಮಹಾರಾಷ್ಟ್ರದಲ್ಲಿ 48 ಸಾವಿರ ಮತಗಳು ಪ್ರತಿ ಕ್ಷೇತ್ರದಲ್ಲೂ ಸರಾಸರಿ ಏರಿಕೆಯಾಗಿದೆ.

ಮತದಾನ ಮುಗಿದ ಕೂಡಲೇ ಚಲಾವಣೆಯಾದ ಮತಗಳ ಸಂಖ್ಯೆಯನ್ನು ಪ್ರಕಟಿಸಬೇಕು ಎಂದು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ಒತ್ತಾಯಿಸುತ್ತಲೇ ಇವೆ. ಆದರೆ ಮತದಾನ ಮಾಡಿದವರ ಸಂಖ್ಯೆಯನ್ನು ಬಹಿರಂಗಪಡಿಸಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ನಾಲ್ಕು ಹಂತದ ಚುನಾವಣೆಯ ನಂತರ ಮತದಾನದ ಪ್ರಮಾಣ ಹೆಚ್ಚಾಗಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ ಎಂದು ರಾಜಕೀಯ ಪಕ್ಷಗಳು ಹೇಳುತ್ತಿವೆ. ಇದರಲ್ಲಿ ಮೋದಿ ಸರ್ಕಾರದ ಷಡ್ಯಂತ್ರವೇನು? ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಪ್ರಶ್ನೆ ಎತ್ತಿದ್ದಾರೆ.

SOURCE: kalaignarseithigal.com

Tags: Election CommissionVote Percentageಇಂಡಿಯಾ ಮೈತ್ರಿಕೂಟಚುನಾವಣೆ ಅಕ್ರಮಚುನಾವಣೆ ಆಯೋಗಶೇಕಡಾವಾರು ಮತದಾನಸಂಸತ್ ಚುನಾವಣೆ 2024
Previous Post

ಕಾಂಗ್ರೆಸ್ ಮತ್ತು ಸಮಾಜವಾದಿ ಗೆದ್ದರೆ ರಾಮಮಂದಿರವನ್ನು ಬುಲ್ಡೋಜರ್‌ನಿಂದ ಕೆಡವುತ್ತಾರೆ – ಪ್ರಧಾನಿ ಮೋದಿ ಭಾಷಣ

Next Post

CSK Vs RCB | ಬೆಂಗಳೂರು ಕ್ರೀಡಾಂಗಣ… ಭಾರೀ ಮಳೆಯಿಂದಾಗಿ ಕೈಬಿಡಲಾದ IPL ಪಂದ್ಯಗಳು: ಒಂದು ನೋಟ

Next Post

CSK Vs RCB | ಬೆಂಗಳೂರು ಕ್ರೀಡಾಂಗಣ... ಭಾರೀ ಮಳೆಯಿಂದಾಗಿ ಕೈಬಿಡಲಾದ IPL ಪಂದ್ಯಗಳು: ಒಂದು ನೋಟ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025

Recent News

edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS