ಸಾಮಾಜಿಕ ಕಾರ್ಯಕರ್ತ ಖಾಸಿಂ ಸಾಬ್ ಅವರ ಬರಹ / ಭಾಷಣ / ಹೇಳಿಕೆಗಳ ಸಂಗ್ರಹವನ್ನು ಮರು ಓದಿಗಾಗಿ ಎಲ್ಲಾ ಲಿಂಕ್‌ಗಳು ಒಂದೆಡೆ ನಿಮಗಾಗಿ ಸಂಗ್ರಹಿಸಿ ಕೊಡಲಾಗಿದೆ; ತಪ್ಪದೆ ಓದಿ. » Dynamic Leader
October 22, 2024
ಲೇಖನ

ಸಾಮಾಜಿಕ ಕಾರ್ಯಕರ್ತ ಖಾಸಿಂ ಸಾಬ್ ಅವರ ಬರಹ / ಭಾಷಣ / ಹೇಳಿಕೆಗಳ ಸಂಗ್ರಹವನ್ನು ಮರು ಓದಿಗಾಗಿ ಎಲ್ಲಾ ಲಿಂಕ್‌ಗಳು ಒಂದೆಡೆ ನಿಮಗಾಗಿ ಸಂಗ್ರಹಿಸಿ ಕೊಡಲಾಗಿದೆ; ತಪ್ಪದೆ ಓದಿ.

ಡೈನಾಮಿಕ್ ಲೀಡರ್‌ನಲ್ಲಿ ಇದುವರೆಗೂ ಪ್ರಕಟಣೆಗೊಂಡ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಖಾಸಿಂ ಸಾಬ್ ಅವರ ಬರಹ / ಭಾಷಣ / ಹೇಳಿಕೆಗಳ ಸಂಗ್ರಹವನ್ನು ಮರು ಓದಿಗಾಗಿ ಎಲ್ಲಾ ಲಿಂಕ್‌ಗಳನ್ನು ಒಂದೆಡೆ ನಿಮಗಾಗಿ ಸಂಗ್ರಹಿಸಿ ಕೊಡಲಾಗಿದೆ; ತಪ್ಪದೆ ಓದಿ.

ಹಿಂದಿನ ಮೀಸಲಾತಿಯನ್ನು ರದ್ದುಗೊಳಿಸಿ ಮುಸ್ಲಿಮರನ್ನು EWS ವರ್ಗಕ್ಕೆ ಸೇರಿಸಿ ಮುಖ್ಯಮಂತ್ರಿ ಬೊಮ್ಮಾಯಿ ಧರ್ಮ ದ್ವೇಷದ ಕ್ರಮ; ಕರ್ನಾಟಕ ಮುಸ್ಲಿಂ ಯುನಿಟಿ ಖಂಡನೆ!

ದಿನಾಂಕ: 25-03-2023
ಬೆಂಗಳೂರು: ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನ ಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ದಲಿತರಿಗಿಂತಲೂ ಹಿಂದುಳಿದಿರುವ ಮುಸ್ಲಿಮರ ಮೀಸಲಾತಿ ಬದಲಾವಣೆ; ನ್ಯಾಯ ಸಮ್ಮತವೆ.!?

ದಿನಾಂಕ: 27-03-2023
ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನಬದ್ಧವಾಗಿ ನೀಡಿರುವ ಶೇ.4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡಿ ಬದಲಾಯಿಸುವ ಮೂಲಕ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಮುಸ್ಲಿಮರ ಕುರಿತಾದ ತಮ್ಮ ಮಲತಾಯಿ ಧೋರಣೆಯನ್ನು ಹಿಜಾಬ್, ಅಝ, ಗೋಹತ್ಯೆ ನಿಷೇದಗಳ ನಂತರದ ಮುಸ್ಲಿಮ್ ವಿರೋಧಿ ನಿಲುವುಗಳ ಮುಂದುವರಿವಿಕೆಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಬಿ.ಝಡ್.ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕರ್ನಾಟಕ ಮುಸ್ಲಿಮ್ ಯುನಿಟಿ!

ದಿನಾಂಕ: 14-05-2023
ಈ ಭಾರಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮುತುವರ್ಜಿಯಿಂದ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಕಾಂಗ್ರೆಸ್ಸಿನೊಂದಿಗೆ ಮುಸ್ಲಿಂ ಸಮುದಾಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯಾಧ್ಯಕ್ಷರಾಗಿ ಜಬ್ಬಾರ್ ಕಲಬುರ್ಗಿ ಆಯ್ಕೆ: ಖಾಸಿಂ ಸಾಬ್

ದಿನಾಂಕ: 20-06-2023
ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಶಾಂತಿ ಕದಡುವ ಹೇಳಿಕೆಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ! ಶೇಕಬ್ಬ-KMU

ದಿನಾಂಕ: 03-07-2023
ರಾಜ್ಯದಲ್ಲಿ ಈಗ ಸೌಹಾರ್ದತೆ ನೆಲೆಸಿದೆ; ಅದನ್ನು ಹಾಳು ಮಾಡುವವರು ಯಾರೇ ಆಗಲಿ, ಯಾವುದೇ ಸಮುದಾಯವಾಗಲಿ, ಅವರ ವಿರುದ್ಧ ಕ್ರಮಕೈಗೊಳ್ಳಲು ಹಿಂಜರಿಕೆ ಬೇಡ.
(ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖಾಂತರ ಕರ್ನಾಟಕ ಮುಸ್ಲಿಮ್ ಯುನಿಟಿ ಪತ್ರ!

ದಿನಾಂಕ: 06-07-2023
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಸಾಮಾಜಿಕ-ಆರ್ಥಿಕ-ಉದ್ಯೋಗ ಕ್ಷೇತ್ರಗಳಲ್ಲಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಬಜೆಟ್ ನಲ್ಲಿ, ಸಾಮಾಜಿಕ ನ್ಯಾಯದ ಯೋಜನೆಗಳನ್ನು ಘೋಷಣೆ ಮಾಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಮನವಿ ಮಾಡಿದೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮುಸ್ಲಿಮರು ಸರ್ಕಾರದ ಎಲ್ಲಾ ಯೋಜನೆಗಳ ಪಾಲುದಾರರು ಆಗಬೇಕು! ಕರ್ನಾಟಕ ಮುಸ್ಲಿಮ್ ಯೂನಿಟಿ (KMU)

ದಿನಾಂಕ: 31-07-2023
ಕರ್ನಾಟಕ ಮುಸ್ಲಿಮ್ ಯೂನಿಟಿ (KMU) ಬಾಗಲಕೋಟೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಮುಸ್ಲಿಮರ ಐಕ್ಯತಾ ಸಮಾವೇಶವು ಬಾಗಲಕೋಟೆ ಜಿಲ್ಲೆಯ ಹುನುಗುಂದ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ತನ್ವೀರ್ ಪೀರಾ ರವರ ಕುರಿತು ಯತ್ನಾಳರ ತೇಜೋವದೆ ಹೇಳಿಕೆಯನ್ನು KMU ತೀವ್ರವಾಗಿ ಖಂಡಿಸುತ್ತದೆ: ಎ.ಖಾಸಿಂ ಸಾಬ್

ದಿನಾಂಕ: 07-12-2023
ವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 4 ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ‘ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ’ ಎಂದು ಆರೋಪಿಸಿ ಸಂಚಲನ ಮೂಡಿಸಿದರು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಭಾರತದ ಮೊದಲ ದಲಿತ ಪ್ರಧಾನಿ? ತೊಡಕು ಮತ್ತು ಸಾಧ್ಯತೆಗಳು: ಒಂದು ನೋಟ

ದಿನಾಂಕ: 23-12-2023
ಸಾವಿರಾರು ವರ್ಷಗಳ ಕಾಲದಿಂದ ವರ್ಣ ಜಾತಿಯ ಕಾರಣಕ್ಕಾಗಿ ಸಾಮಾಜಿಕ ನ್ಯಾಯ ಹಾಗೂ ಅಧಿಕಾರದ ಎಲ್ಲಾ ಅವಕಾಶಗಳಿಂದ ವಂಚಿತರಾಗಿರುವ ದಲಿತರು, ನಾಗರಿಕ ಹಕ್ಕುಗಳು ಮತ್ತು ಹಳ್ಳಿಯಿಂದ ದಿಲ್ಲಿಯವರೆಗಿನ ಎಲ್ಲಾ ರಾಜಕೀಯ ಅವಕಾಶಗಳಿಂದ ಇಂದಿಗೂ ವಂಚಿತರಾಗಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮಾನ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಒಂದು ಬಹಿರಂಗ ಪತ್ರ: ಖಾಸಿಂ ಸಾಬ್ ಎ

ದಿನಾಂಕ: 04-01-2024
ಕಾಂಗ್ರೆಸ್ಸಿನ ಹಿರಿಯ ಮುಖಂಡರು, ಪೆರಿಯಾರ್ ವಾದಿಗಳು, ಜಾತ್ಯತೀತ ಸಿದ್ಧಾಂತಃ ನಂಬಿರುವ ನೀವು ಇತ್ತೀಚಿಗೆ ಒಂದು ಹೇಳಿಕೆಯನ್ನು ನೀಡಿದ್ದೀರಾ. “ಅಯೋಧ್ಯೆಗೆ ರಾಮಮಂದಿರ ಉದ್ಘಾಟನೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು; ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು” ಎನ್ನುವುದು ನಿಮ್ಮ ಹೇಳಿಕೆಯಾಗಿತ್ತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ! ಖಾಸಿಂ ಸಾಬ್

ದಿನಾಂಕ: 19-04-2024
ಬೆಂಗಳೂರು: ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ನಿಧನಕ್ಕೆ ಕೆಎಂಯು ಸಂತಾಪ!

ದಿನಾಂಕ: 08-07-2024
ಉಳ್ಳಾಲದ ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರರು, ಇಸ್ಲಾಂ ಧಾರ್ಮಿಕ ಪಂಡಿತರ ಕುಟುಂಬದ ನೇತಾರರು, ಹಲವಾರು ಮಸೀದಿಗಳ ಖಾಝಿಗಳು, ಗೌರವಾಧ್ಯಕ್ಷರು, ಆದ್ಯಾತ್ಮಿಕ ಗುರುಗಳು, ಸಾವಿರಾರು ಧಾರ್ಮಿಕ ಮುಖಂಡರ ಮಾರ್ಗದರ್ಶಿಗಳು, ತಮ್ಮ ಒಟ್ಟು ಜೀವಿತ ಅವಧಿಯನ್ನು ಸಮಾಜಕ್ಕಾಗಿ ಮುಡುಪಾಗಿ ಇಟ್ಟಿದ್ದ ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಮ್ಮೆಲ್ಲರನ್ನು ಅಗಲಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

Part-1: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ..!? – ಖಾಸಿಂ ಸಾಬ್ ಎ.

ದಿನಾಂಕ: 22-07-2024
ನವೀನ್ ಸೂರಿಂಜೆ., ಕರ್ನಾಟಕದ ಮದರಸ – ಕನ್ನಡ ಕಲಿಕೆ – ಕೋಮುವ್ಯಾದಿ ನುಸುಳುವಿಕೆ ಕುರಿತು ನಿಮ್ಮ ನೀಲುವನ್ನು ಬದಲಾವಣೆ ಮಾಡಿಕೊಳ್ಳಲು, ನೀವು ಇತ್ತೀಚೆಗೆ ಪ್ರಕಟಿಸಿದ ಎರಡು ಲೇಖನಗಳ ಎರಡು ಭಾಗಗಳಿಗೆ ನನ್ನ ಪ್ರಶ್ನೆ – ಪ್ರತಿಕ್ರಿಯೆಗಳು! (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

Part-2: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಕೆಯ ದಾಳಿ: ನವೀನ್ ಸೂರಿಂಜೆಯವರ ಎರಡನೇಯ ಲೇಖನಕ್ಕೆ ಪ್ರತಿಕ್ರಿಯೆ!

ದಿನಾಂಕ: 24-07-2024
ಕಾಂ.ನವೀನ್ ಸೂರಿಂಜೆ ಅವರೇ, ನೀವು ಅಥವಾ ಈಗಿನ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ – ಮದರಸಗಳಲ್ಲಿ ಕನ್ನಡಕಲಿಕೆ’ ನಿಲುವನ್ನು ಒಪ್ಪದಿರುವ ಎಡಪಂತಿಯ ಅಥವಾ ಜಾತ್ಯತೀತ ಕಾಂಗ್ರೆಸ್ಸಿಗರ ಗಮನಕ್ಕೆ ಈ ಒಂದು ಪ್ರತಿಕ್ರಿಯೆ! (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ವಕ್ಫ್ ಬೋರ್ಡ್ ಸ್ವತಂತ್ರವನ್ನು ಮೋಟಕುಗೊಳಿಸುವ ಕೇಂದ್ರ ಸರಕಾರದ ಯೋಜನೆಗೆ KMU ವಿರೋಧ!

ದಿನಾಂಕ: 06-08-2024
“ಮೂಲತಃ ಬಿಜೆಪಿಯು ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ. ಇದರ ಮುಂದುವರಿದು ಈಗ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ. ಬಿಜೆಪಿ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಬಯಸುತ್ತದೆ!”- ಕರ್ನಾಟಕ ಮುಸ್ಲಿಂ ಯುನಿಟಿ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಇಸ್ಮಾಯಿಲ್ ತಮಟಗಾರರ ಮನೆಯ ಮೇಲಿನ ದಾಳಿಗೆ ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರ ಖಂಡನೆ!

ದಿನಾಂಕ: 17-08-2024
“ಇಸ್ಮಾಯಿಲ್ ತಮಟಗಾರ ಮೇಲೆ ಈ ಹಿಂದೆಯೂ ಸಹ ಹತ್ಯೆಗೆ ಯತ್ನ ನಡೆದಿದ್ದು, ಇವರ ಹಾಗೂ ಇವರ ಕುಟುಂಬಕ್ಕೆ ಜೀವ ಭಯ ಇರುವುದರಿಂದ ಸೂಕ್ತ ರಕ್ಷಣೆ ಒದಗಿಸಬೇಕು” – ಕರ್ನಾಟಕ ಮುಸ್ಲಿಂ ಯುನಿಟಿ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಸಿಎಂ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಜಾರಿ ಸಂಸದೀಯ ಪ್ರಜಾಪ್ರಭುತ್ವದ ವಿರುದ್ಧವಾಗಿದೆ; ಇದು ಖಂಡನೀಯ: ಖಾಸಿಂ ಸಾಬ್

ದಿನಾಂಕ: 18-08-2024
“ನೇರ ಭಾಗಿಯಾಗದ ಆರ್ಥಹೀನ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಯೋಜಿಸಿ ಸಿಲುಕಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಿ ಪ್ರೇರಿತ ಪಕ್ಷಗಳು ಹೊರಟಿವೆ. ಇದು ಜಾತಿ ಹಾಗೂ ಕೋಮು ಭ್ರಷ್ಟರ ನಡೆಯಾಗಿದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಒಬಿಸಿ ಮುಸ್ಲಿಂ 2B ಮೀಸಲಾತಿಯನ್ನು ಮರುಸ್ಥಾಪಿಸಬೇಕು; 4% ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕು: ಕರ್ನಾಟಕ ಮುಸ್ಲಿಂ ಯುನಿಟಿ

ದಿನಾಂಕ: 24-08-2024
ಕರ್ನಾಟಕ ಮುಸ್ಲಿಮರ ಪ್ರಮುಖ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಸೂಕ್ತ ಹಾಗೂ ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಇದೇ ಆಗಸ್ಟ್ 22 ರಂದು ಕರ್ನಾಟಕ ಮುಸ್ಲಿಂ ಯುನಿಟಿ ವತಿಯಿಂದ ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡರ ಚಿಂತನಾ ಸಭೆಯನ್ನು ಆಯೋಜಿಸಲಾಗಿತ್ತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

Related Posts