• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ.

by Dynamic Leader
20/05/2025
in ರಾಜ್ಯ
0
0
SHARES
25
VIEWS
Share on FacebookShare on Twitter

ವಿಜಯನಗರ (ಹೊಸಪೇಟೆ): ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ ಸಾದನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ? ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಜಿಜೆಪಿ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದರು.

15ನೇ ಹಣಕಾಸು ಆಯೋಗದ ಕಾಲದಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ರೂ5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ. ಎಂದು ಕಿಡಿಕಾರಿದರು.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ ಎಂದು ಲೇವಡಿ ಮಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ಸರ್ಕಾರಿ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

2014ರಲ್ಲಿ ರೂ.28,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ ರೂ.414 ಇದ್ದದ್ದು ಈಗ ರೂ.850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಜನ ನಮ್ಮ ಪರವಾಗಿಯೇ ಇದ್ದಾರೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದು ಗುಡುಗಿದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

Tags: Sadana SamaveshaSiddaramaiahಇಂದಿರಾ ಗಾಂಧಿಉಕ್ಕಿನ ಮಹಿಳೆಪ್ರಗತಿಯತ್ತ ಕರ್ನಾಟಕಪ್ರತಿಮೆಲೋಕಾರ್ಪಣೆಸಮರ್ಪಣೆ ಸಂಕಲ್ಪಸಾದನಾ ಸಮಾವೇಶಹಕ್ಕುಪತ್ರ
Previous Post

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

Next Post

ಬಿಜೆಪಿಯ ‘ಆಪರೇಷನ್ ಸೌತ್’ ನಲ್ಲಿ ಪ್ರಸ್ತುತ ಪ್ರಸ್ತಾಪವಾಗುತ್ತಿರುವ ಹೆಸರು ಶಶಿ ತರೂರ್! – ಡಿ.ಸಿ.ಪ್ರಕಾಶ್

Next Post

ಬಿಜೆಪಿಯ 'ಆಪರೇಷನ್ ಸೌತ್' ನಲ್ಲಿ ಪ್ರಸ್ತುತ ಪ್ರಸ್ತಾಪವಾಗುತ್ತಿರುವ ಹೆಸರು ಶಶಿ ತರೂರ್! - ಡಿ.ಸಿ.ಪ್ರಕಾಶ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS