• ಡಿ.ಸಿ.ಪ್ರಕಾಶ್
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಎಂಕೆ ಮತ್ತು ಇತರ ಅರ್ಜಿದಾರರು ಸಲ್ಲಿಸಿದ್ದ ಪ್ರಕರಣದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ತಂದ ಪ್ರಮುಖ ತಿದ್ದುಪಡಿಗಳಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿ ಆದೇಶಿಸಿದೆ.
ವಕ್ಫ್ ಆಸ್ತಿಯನ್ನು ವರ್ಗಾಯಿಸಲು 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿರಬೇಕು ಎಂಬ ನಿಯಮಕ್ಕೆ ನಿಷೇಧ ಹೇರಿದೆ. ವಕ್ಫ್ ಭೂಮಿ ಸರ್ಕಾರಿ ಭೂಮಿ ಎಂಬ ಆರೋಪವಿದ್ದರೆ, ಸಂಬಂಧಿತ ಪ್ರಾಧಿಕಾರವು ವರದಿ ಸಲ್ಲಿಸುವವರೆಗೆ ಅಥವಾ ಸರ್ಕಾರ ನಿರ್ಧಾರ ತೆಗೆದುಕೊಳ್ಳುವವರೆಗೆ ಆ ಭೂಮಿಯನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ನಿರ್ಬಂಧಿಸಲಾಗಿದೆ.
ವಕ್ಫ್ ಬಳಕೆದಾರರನ್ನು (ದೀರ್ಘಕಾಲೀನ ಧಾರ್ಮಿಕ ಬಳಕೆಯ ಆಧಾರದ ಮೇಲೆ ವಕ್ಫ್ ಆಸ್ತಿ ಎಂದು ಪರಿಗಣಿಸಲಾದ ಆಸ್ತಿ) ತೆಗೆದುಹಾಕುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರದ ಮೇಲಿನ ನಿಷೇಧ. ಕೇಂದ್ರ ವಕ್ಫ್ ಮಂಡಳಿಯಲ್ಲಿ ನಾಲ್ಕಕ್ಕಿಂತ ಹೆಚ್ಚು ಮುಸ್ಲಿಮೇತರರನ್ನು ಸೇರಿಸಿಕೊಳ್ಳುವುದನ್ನು ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರನ್ನು ಸೇರಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಇದು ಈ ಮಂಡಳಿಗಳಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವುದನ್ನು ಖಚಿತಪಡಿಸುತ್ತದೆ.
ಇಂದಿನ ನ್ಯಾಯಾಲಯದ ಆದೇಶವು ಬಿಜೆಪಿ ಸರ್ಕಾರ ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಪರಿಚಯಿಸಿದಾಗಿನಿಂದ ಡಿಎಂಕೆ ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣಗಳನ್ನು ಹೂಡಿರುವ ಇತರ ಅನೇಕರೊಂದಿಗೆ ಸೇರಿ ಯಶಸ್ವಿಯನ್ನೂ ಖಂಡಿದೆ.
ಬಿಜೆಪಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನವನ್ನು ವಿರೋಧಿಸಿ, ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯವನ್ನೂ ಅಂಗೀಕರಿಸಿತು.
ಈ ಹಿನ್ನೆಲೆಯಲ್ಲಿ, ಇಂದಿನ ಆದೇಶವು ಸುಪ್ರೀಂ ಕೋರ್ಟ್ ಮುಸ್ಲಿಮರ ಧಾರ್ಮಿಕ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳನ್ನು ಹಾಗೂ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಜನರ ವಿಶ್ವಾಸವನ್ನು ಬಲಪಡಿಸುತ್ತದೆ.
 
  
 

 
  
 










 
 
