• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಿಜೆಪಿ ನಾಯಕನ ಕೈಯಲ್ಲಿ ‘ರಫೇಲ್’ ಕೈ ಗಡಿಯಾರ! 

by Dynamic Leader
21/12/2022
in ದೇಶ
0
0
SHARES
0
VIEWS
Share on FacebookShare on Twitter

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೈಯಲ್ಲಿ ಕಟ್ಟಿರುವ ಸುಮಾರು 5 ಲಕ್ಷ ಬೆಲೆ ಬಾಳುವ ರಫೇಲ್ ಕೈ ಗಡಿಯಾರದ ವಿಚಾರವೇ ಈಗ ತಮಿಳುನಾಡಿಲ್ಲಿ ಟ್ರೆಂಡಿಂಗ್ ನ್ಯೂಸ್.

ತಮಿಳುನಾಡು ಇಂಧನ ಸಚಿವ ಸೆಂದಿಲ್ ಬಾಲಾಜಿ ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ, ‘ಫ್ರೆಂಚ್ ಕಂಪನಿಯ ರಫೇಲ್ ವಾಚ್ ಹೊಂದಿರುವ ಅಣ್ಣಾಮಲೈ, ಖರೀದಿಯ ರಸೀದಿಯನ್ನು  ಒಂದು ಗಂಟೆಯ ಒಳಗೆ ಪ್ರಕಟಿಸಿದರೆ, ಸಾಮಾನ್ಯ ಜನರು ಸಹ ಅದನ್ನು ಖರೀದಿಸಿ ಆನಂದಿಸಬಹುದು. ಮತ್ತು ಕೇವಲ 4 ಕುರಿಮರಿಗಳನ್ನು ಹೊಂದಿರುವುದಾಗಿ ಹೇಳಿಕೊಳ್ಳುವ ಅಣ್ಣಾಮಲೈ, 5 ಲಕ್ಷಕ್ಕೂ ಹೆಚ್ಚು ಬೆಲೆಯ ದುಬಾರಿ ರಫೇಲ್ ವಾಚನ್ನು ಹೊಂದಿದ್ದಾರೆ ಎಂದು ಟೀಕಿಸಿದ್ದರು.

ಇದಕ್ಕೆ ಕೆಂಡಾಮಂಡಲವಾದ ಅಣ್ಣಾಮಲೈ ‘ನಾನು ಬಿಜೆಪಿ ಅಧ್ಯಕ್ಷನಾಗುವ ಮೊದಲೇ 2021 ಮೇ ತಿಂಗಳಲ್ಲಿ ರಫೇಲ್ ವಾಚನ್ನು ಖರೀದಿ ಮಾಡಿದ್ದೆ. ಅದರ ರಸೀದಿ, ಆದಾಯ ತೆರಿಗೆ ರಿಟರ್ನ್ಸ್, 10 ವರ್ಷಗಳು  ಬ್ಯಾಂಕಿನಲ್ಲಿ ನಡೆಸಿದ ಹಣಕಾಸಿನ ವ್ಯವಹಾರ, ಐಪಿಎಸ್ ಕಾಲದಲ್ಲಿ ಸಂಪಾದಿಸಿದ ಹಣ, ಮುಂತಾದ ಎಲ್ಲಾ ವಿವರಗಳನ್ನು ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯಲಿರುವ ಪಾದಯಾತ್ರೆಯ ಮೊದಲ ದಿನವೇ ಪ್ರಕಟಿಸುತ್ತೇನೆ’ ಎಂದು ಹೇಳಿದ ಅಣ್ಣಾಮಲೈ, ‘ಅದೇ ರೀತಿ ಡಿಎಂಕೆ ಪಕ್ಷದ ಆಸ್ತಿ ವಿವರಗಳನ್ನು ಪ್ರಕಟಿಸಲು ಅವರು ಸಿದ್ಧರಿದ್ದಾಯೇ’ ಎಂದೂ ಪ್ರಶ್ನೆ ಮಾಡಿದರು. ‘ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಅವರ ಕುಟುಂಬ ವರ್ಗದವರು, ಸಚಿವರುಗಳು, ಅವರ ಸಂಬಂಧಿಗಳು, ಅವರ ಬೇನಾಮಿಗಳು ಮಾಡಿರುವ ಭ್ರಷ್ಟಾಚಾರ ಎಲ್ಲವನ್ನೂ ಒಂದೊಂದಾಗಿ ಬಯಲು ಮಾಡುತ್ತೇನೆ’ ಎಂದೂ ಅಣ್ಣಾಮಲೈ ಗುಡುಗಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಸೆಂದಿಲ್ ಬಾಲಾಜಿ, ‘ನಾವು ನಿಮ್ಮಲ್ಲಿ ಕೇಳಿದ್ದು ಬರೀ ಬಿಲ್ ಮಾತ್ರ‌. ಬಿಲ್ ಇದೆ ಅಥವಾ ಇಲ್ಲ ಎಂಬುದೇ ಇದಕ್ಕೆ ಸರಿಯಾದ ಉತ್ತರವಾಗಿರುತ್ತದೆ. ಚುನಾವಣೆ ನಂತರ ಖರೀದಿ ಮಾಡಿದ್ದು ಎಂದು ಹೇಳಿದರೆ, ಚುನಾವಣಾ ನಾಮಪತ್ರದಲ್ಲಿ ಏಕೆ ಲೆಕ್ಕ ತೋರಿಸಲಿಲ್ಲ ಎಂಬ ಪ್ರಶ್ನೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ಕಾರಣಕ್ಕೆ 2021 ಮೇ ತಿಂಗಳಲ್ಲಿ ಖರೀದಿ ಮಾಡಿದ್ದು ಎಂದು ಹೇಳುವ ಸುಮಾರು 5 ಲಕ್ಷ ಬೆಲೆಬಾಳುವ  ರಫೇಲ್ ವಾಚಿಗೆ ನಿಮ್ಮ ಬಳಿ ಬಿಲ್ ಇದೆಯೇ? ಅಥವಾ ತಯಾರಿ ಮಾಡಬೇಕೇ? ಎಂದು ಪ್ರಶ್ನೆಯನ್ನು ಕೇಳಿದ್ದಾರೆ. 

ಅಣ್ಣಾಮಲೈ ಕೈಯಲ್ಲಿ ಇರುವ ಕೈ ಗಡಿಯಾರ ಫ್ರಾನ್ಸ್ ದೇಶದ ರಫೇಲ್ ಕಂಪನಿಯಿಂದ ತಯಾರಿಸಿದ್ದು ಎಂದು ಹೇಳಲಾಗುತ್ತಿದೆ. ರಫೆಲ್ ಕಂಪನಿಯು ಈಗಾಗಲೇ ಯುದ್ಧ ರಾಕೆಟ್ ಗಳನ್ನು ತಯಾರಿಸಿ ನಮ್ಮ ದೇಶಕ್ಕೆ ಸರಬರಾಜು ಮಾಡಿದೆ. ‘ರಾಕೆಟ್ ಗಳ ಬಿಡಿ ಭಾಗಗಳಿಂದ ಈ ರಫೇಲ್ ವಾಚನ್ನು ತಯಾರಿಸಲಾಗಿದೆ. ಬರೀ 500 ವಾಚ್ ಗಳನ್ನಷ್ಟೇ ರಫೇಲ್ ಕಂಪನಿ ತಯಿರಿಸಿತ್ತು ಅದರಲ್ಲಿ ನನ್ನ ಬಳಿಯಿರುವುದು 149ನೇ ವಾಚ್’ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈ ಹಿಂದೆ ಕರ್ನಾಟಕದಲ್ಲಿ ‘ರಿಯಲ್ ಸಿಂಗಮ್’, ‘ಕರ್ನಾಟಕ ಸಿಂಗಮ್’ ಎಂದೆಲ್ಲ ಅಡ್ಡಹೆಸರಿಟ್ಟು ಕರೆಯುತ್ತಿದ್ದ ಐಪಿಎಸ್ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ 2016ರಲ್ಲಿ ಕಾಫಿ ಮಾಲೀಕರೊಬ್ಬರು ಈ ವಾಚನ್ನು ಉಡುಗೊರೆಯಾಗಿ ನೀಡಿದ್ದು ಎಂದು ಹೇಳಲಾಗುತ್ತಿದೆ.

ಈಗ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದವರು ಅಣ್ಣಾಮಲೈಗೆ ‘ಬಿಲ್ ಎಲ್ಲಿ’ ಎಂದು ಕೇಳುವುದನ್ನೇ ಟ್ರೆಂಡ್ ಮಾಡಿಕೊಂಡಿದ್ದಾರೆ.

ತಮಿಳುನಾಡು ಕರೂರಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ‘ಅಣ್ಣಾಮಲೈನ 5 ಲಕ್ಷ ರೂಪಾಯಿಯ ಕೈ ಗಡಿಯಾರ, ಮೋದಿಯ 10 ಲಕ್ಷ ರೂಪಾಯಿಯ ಕೋಟ್ ಇವೆಲ್ಲವೂ ಸರಳ. ಪ್ರಾಮಾಣಿಕತೆಯ ಸಂಕೇತ. ಕುರಿಮರಿ ಮತ್ತು ಚಹಾ ಮಾರಾಟದಿಂದ ಗಳಿಸಿದ ಹಣದಿಂದ ಖರೀದಿಸಿದ್ದು. ಬಿಜೆಪಿಗೂ ಭ್ರಷ್ಟಾಚಾರಕ್ಕೂ ಅವಿನಾಭಾವ ಸಂಬಂಧ. ಅದನ್ನು ಯಾರಿಂದಲೂ ದೂರ ಮಾಡಲು ಸಾಧ್ಯವಿಲ್ಲ. ಬಿಜೆಪಿಯು ತನ್ನ ಭ್ರಷ್ಟಾಚಾರವನ್ನು ಮರೆಮಾಚಲು ದೇಶಭಕ್ತಿ  ಎಂಬ ಮುಖವಾಡವನ್ನು ಧರಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.

Tags: Annamalai Rtd IPSKarnataka BJPMinister Sendil BalajiTaminadu BJP
Previous Post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

Next Post

ಒಟಿಟಿಯಿಂದ ಸಿನಿಮಾ ನಾಶವಾಗುತ್ತದೆ! ಅಡೂರು ಗೋಪಾಲಕೃಷ್ಣನ್

Next Post

ಒಟಿಟಿಯಿಂದ ಸಿನಿಮಾ ನಾಶವಾಗುತ್ತದೆ! ಅಡೂರು ಗೋಪಾಲಕೃಷ್ಣನ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025

Recent News

ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS