• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ವಿಧಾನಭೆಯ ನಿಯಮಗಳಿಗೆ, ರಾಷ್ಟ್ರಗೀತೆಗೆ ಮತ್ತು ಅಂಬೇಡ್ಕರ್, ಪೆರಿಯಾರ್ ಮುಂತಾದವರಿಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿಯಿಂದ ಅಗೌರವ!

by Dynamic Leader
10/01/2023
in ದೇಶ, ರಾಜಕೀಯ
0
ವಿಧಾನಭೆಯ ನಿಯಮಗಳಿಗೆ, ರಾಷ್ಟ್ರಗೀತೆಗೆ ಮತ್ತು ಅಂಬೇಡ್ಕರ್, ಪೆರಿಯಾರ್ ಮುಂತಾದವರಿಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿಯಿಂದ ಅಗೌರವ!
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್, ಸಂಪಾದಕರು

ತಮಿಳುನಾಡು: ತಮಿಳುನಾಡು ವಿಧಾನಸಭೆಯು ಸಾಮಾನ್ಯವಾಗಿ ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುತ್ತದೆ. ಅದರಂತೆ ಇಂದು (ಜನವರಿ 9) ಬೆಳಗ್ಗೆ 10 ಗಂಟೆಗೆ ರಾಜ್ಯಪಾಲ ಆರ್.ಎನ್.ರವಿ ಭಾಷಣದೊಂದಿಗೆ ವರ್ಷದ ಮೊದಲ ಸಭೆ ಆರಂಭವಾಯಿತು.

ಸಭಾಧ್ಯಕ್ಷರು ಎಂ.ಅಪ್ಪಾವು ಹಾಗೂ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು. ಇದಾದ ಬಳಿಕ ರಾಜ್ಯಪಾಲರಿಗೆ ಪೊಲೀಸ್ ಪರೇಡ್ ಗೌರವ ಸಲ್ಲಿಸಲಾಯಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಭಾಷಣ ಆರಂಭಿಸಿದರು. ಅವರು ಭಾಷಣ ಮಾಡುವಾಗ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ನಿರಾಕರಿಸಿದರು.

ಭಾಷಣ ಆರಂಭವಾಗುತ್ತಿದ್ದಂತೆ ಡಿಎಂಕೆ ಮಿತ್ರಪಕ್ಷಗಳು “ಗೊ ಬ್ಯಾಕ್ ಗವರ್ನರ್” ಎಂಬ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರ ಭಾಷಣದ ನಂತರ ಅದರ ತಮಿಳು ಆವೃತಿಯನ್ನು ಸಭಾಧ್ಯಕ್ಷರು ಎಂ.ಅಪ್ಪಾವು ವಾಚಿಸಿದರು. ಅಪ್ಪಾವು ಅದನ್ನು ಓದುತ್ತಿರುವಾಗ ಮದ್ಯ ಪ್ರವೇಶಿಸಿದ ಪ್ರತಿಪಕ್ಷಗಳು ‘ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ’ ಎಂದು ಆರೋಪ ಮಾಡಿದವು.

ಅಪ್ಪಾವು ಮಾತು ಮುಗಿಸಿದ ಬಳಿಕ ಎದ್ದು ನಿಂತ ಮುಖ್ಯಮಂತ್ರಿ ಸ್ಟಾಲಿನ್, ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ ಎಂದು ಅಪಾದಿಸಿದರು. ರಾಜ್ಯಪಾಲರು ಓದಿದ ಭಾಗಗಳನ್ನು ಟಿಪ್ಪಣಿಗಳಲ್ಲಿ ಸೇರಿಸಬಾರದು ಎಂಬ ಗೊತ್ತುವಳಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಮಂಡಿಸಿದರು. ಮುಖ್ಯಮಂತ್ರಿ ಗೊತ್ತುವಳಿಯನ್ನು ಸಭೆಯಲ್ಲಿ ಮಂಡಿಸುತ್ತಿರುವಾಗಲೇ ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದರು. ರಾಜ್ಯಪಾಲರು ತೆರಳಿದನಂತರ ಮುಖ್ಯಮಂತ್ರಿಗಳು ಮಂಡಿಸಿದ ಗೊತ್ತುವಳಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ವಿಧಾನಸಭೆ ಕಲಾಪ ಮುಗಿದ ಬಳಿಕ ರಾಷ್ಟ್ರಗೀತೆ ಮೊಳಗಿದಾಗ ರಾಜ್ಯಪಾಲರು ಸದನದಲ್ಲಿ ಇರಲಿಲ್ಲ ಎಂಬುದು ಗಮನಾರ್ಹ. ಭಾಷಣವನ್ನು ಅನುಮೋದಿಸಿದ ನಂತರ ಅದನ್ನು ಬದಲಾಯಿಸಿ ಸದನದಲ್ಲಿ ಓದುವುದನ್ನು ಒಪ್ಪಲು ಸಾಧ್ಯವಿಲ್ಲ. ಇದು ಕಲಾಪದ ಸಂಸ್ಕೃತಿಯಲ್ಲ. ಐತಿಹಾಸಿಕವಾದ ದ್ರಾವಿಡ ಚಳುವಳಿಯನ್ನು ಕಟ್ಟಿ, ಬ್ರಾಹ್ಮಣ್ಯಕ್ಕೆ ಸೆಡ್ಡು ಹೊಡೆದು ‘ಸನಾತನ ರೋಗಕ್ಕೆ ದ್ರಾವಿಡವೇ ಮದ್ದು’ ಎಂಬ ನಂಬಿಕೆಯನ್ನು ದಕ್ಷಿಣ ಭಾರತೀಯರಿಗೆ ನೀಡಿರುವ ತಮಿಳುನಾಡು ವಿಧಾನ ಸಭೆಯಲ್ಲಿ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದರೆ ಇವರು ಎಂತಹ ಉಗ್ರ ಸನಾತನವಾದಿಯಾಗಿರಬೇಕು ಎಂಬುದನ್ನು ನೀವೇ ಊಹಿಸಿಕೊಳ್ಳಿ.

‘ರಾಜ್ಯಪಾಲರು ಇಂತಹ ಹಲವಾರು ಸಮಸ್ಯೆಗಳನ್ನು ದಿನನಿತ್ಯ ಸೃಷ್ಟಿಸುತ್ತಿರುವುದು ನಿಜಕ್ಕೂ ನನಗೆ ನೋವು ತಂದಿದೆ’ ಎಂದು ವಿಧಾನಸಭೆ ಸಭಾಪತಿ ಅಪ್ಪಾವು ಹೇಳಿರುವುದು ಗಮನಾರ್ಹವಾದದ್ದು.

‘ರಾಜ್ಯಪಾಲ ಆರ್.ಎನ್.ರವಿ ಉಗ್ರ ಸನಾತನವಾದಿ, ದ್ರಾವಿಡ ವಿರೋಧಿ, ಬಿಜೆಪಿ ಏಜೆಂಟ್’ ಎಂದೆಲ್ಲ ತಮಿಳುನಾಡು ಜನರು ಹೇಳುವುದು ಸರಿಯಾಗಿಯೇ ಇದೆ ಎಂಬುದನ್ನು ಇಂದಿನ ನಡವಳಿಕೆ ನಮಗೆ ತೋರಿಸಿಕೊಟ್ಟಿದೆ.

Tags: AnnamalaiBJpDMkDravidaDravida MovmentMK StalinRN RaviTamilnaduಅಣ್ಣಾಮಲೈಆರ್.ಎನ್.ರವಿಎಂ.ಕೆ.ಸ್ಟಾಲಿನ್ಡಿಎಂಕೆತಮಿಳುನಾಡುದ್ರಾವಿಡದ್ರಾವಿಡ ಚಳುವಳಿಬಿಜೆಪಿ
Previous Post

ಜನವರಿ 26 ರಿಂದ ‘ಹಾತ್ ಸೇ ಹಾತ್ ಜೋಡೋ’ (ಕೈ ಜೋಡಿಸೋಣ) ಅಭಿಯಾನ!

Next Post

ಗಂಗಾಧರ ನಾಗೇಶ್ ಭಟ್ಟರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ – ಮಹೇಶ್ ಶೇಟ್

Dynamic Leader

Next Post
ಗಂಗಾಧರ ನಾಗೇಶ್ ಭಟ್ಟರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ – ಮಹೇಶ್ ಶೇಟ್

ಗಂಗಾಧರ ನಾಗೇಶ್ ಭಟ್ಟರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ - ಮಹೇಶ್ ಶೇಟ್

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025

Recent News

edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS