• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಮಾಜಿ ಮಹಾಪೌರ, ನಾಡೋಜ ಡಾ.ಜಿ.ನಾರಾಯಣ ಜನ್ಮಶತಮಾನೋತ್ಸವ!

by Dynamic Leader
31/01/2023
in ಬೆಂಗಳೂರು, ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮಾಜಿ ಮಹಾಪೌರ, ನಾಡೋಜ ಡಾ.ಜಿ.ನಾರಾಯಣ ಜನ್ಮಶತಮಾನೋತ್ಸವವನ್ನು ದಿನಾಂಕ: 05.02.2023 ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಜಂಟಿಯಾಗಿ ಘೋಷಿಸಿದೆ.  

 ಜಿ.ನಾರಾಯಣ:
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇಶಹಳ್ಳಿಯಲ್ಲಿ ಜನಿಸಿದ ಜಿ.ನಾರಾಯಣ ಅವರು ಕನ್ನಡದ ವಿದ್ವಾಂಸರಾಗಿ, ಕನ್ನಡ ನಾಡು ಕಂಡ ಮಹತ್ವದ ಆಡಳಿತಗಾರರಲ್ಲಿ ಒಬ್ಬರಾಗಿದ್ದರು. ಆಡಳಿತ ಮತ್ತು ರಾಜಕೀಯದಲ್ಲಿದ್ದರೂ ಅವರು ವಿವಾದಾತೀತರೆನಿಸಿದ್ದರು.

ಶಾಲೆಯಿಂದ ಹೊರಬಿದ್ದ ನಾರಾಯಣರು ತಮ್ಮ ಜೀವನವನ್ನು ದೇಶ ಸೇವೆಗೆ ಮುಡಿಪುಗೊಳಿಸಿದರು. ಮದ್ದೂರಿನ ವೀರಣ್ಣಗೌಡರ ಪ್ರಭಾವದ ಆಕರ್ಷಣೆಗೆ ಒಳಗಾದ ನಾರಾಯಣರು ಅವರೊಡನೆ ಸ್ವಾತಂತ್ರ್ಯ ಹೋರಾಟದ ಕೆಲಸದಲ್ಲಿ ಭಾಗಿಯಾದರು. ಶಿವಪುರದ ಸತ್ಯಾಗ್ರಹದಲ್ಲಿ ಭಾಗಿಯಾದ ನಂತರದಲ್ಲಿ ಸಾಹುಕಾರ್ ಚೆನ್ನಯ, ಕೆಂಗಲ್ ಹನುಮಂತಯ್ಯ ಅಂತಹ ಹಿರಿಯರ ಪರಿಚಯ ಒಡನಾಟಗಳು ಅವರಿಗೆ ದೊರಕಿದವು. ಪೂನಾದ ಬಳಿ ಉದಲಿ ಎಂಬಲ್ಲಿಗೆ ಹೋಗಿ ಖಾದಿ ಗ್ರಾಮೋದ್ಯೋಗದ ಬಗ್ಗೆ ತರಬೇತಿ ಪಡೆದು ಬಂದರು.

ಚಾಮರಾಜಪೇಟೆಯಲ್ಲಿ ತಮ್ಮದೇ ಆದ ಮುದ್ರಣಾಲಯ ಆರಂಭಿಸಿದರು. ಅಂದಿನ ದಿನದಲ್ಲಿ ಕಾಂಗ್ರೆಸ್ ಪತ್ರಿಕೆಯನ್ನು ಅವರೇ ಸಂಪಾದಿಸುತ್ತಿದ್ದರು. ‘ವಿನೋದ’ ಹಾಸ್ಯ ಮಾಸಪತ್ರಿಕೆ ಅವರ ಮಹತ್ವದ ಕೊಡುಗೆಗಳಲ್ಲೊಂದು. ಆ ಪತ್ರಿಕೆ ಅಂದಿನ ದಿನಗಳಲ್ಲಿ ಬಹು ಜನಪ್ರಿಯಗೊಂಡು ನಾಡಿಗೇರ ಕೃಷ್ಣರಾವ್, ಶ್ರೀನಿವಾಸ ವೈದ್ಯ, ಎಚ್.ಎಲ್.ಕೇಶವಮೂರ್ತಿ, ಅನಂತ ಕಲ್ಲೋಳ ಅಂತಹ ಮಹಾನ್ ಪ್ರತಿಭೆಗಳ ಹೊರಹೊಮ್ಮುವಿಕೆಗೆ ಕಾರಣೀಭೂತವೆನಿಸಿತ್ತು.

ಜಿ. ನಾರಾಯಣರು 1964ರ ಅವಧಿಯಲ್ಲಿ ಬೆಂಗಳೂರಿನ ಮೇಯರ್ ಆಗಿ, 1969ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, 1987ರಲ್ಲಿ ಕರ್ನಾಟಕ ಪ್ರೆಸ್ ಅಕಾಡೆಮಿ ಅಧ್ಯಕ್ಷರಾಗಿ, 1992ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಲ್ಲಿಸಿರುವ ಸೇವೆ ಸ್ಮರಣೀಯವಾದುದು. ತಾವರೆ ಎಲೆ ಕೆಸರು ನೀರುಗಳನ್ನು ಹೇಗೆ ಅಂಟಿಸಿಕೊಳ್ಳುವುದಿಲ್ಲವೋ ಹಾಗೆ ಅವರು ಅಭಿವೃದ್ಧಿ ಕಾರ್ಯಗಳಿಗೆ ಹೆಸರಾದರೇ ವಿನಹ ಆಪಾದನೆ, ವಿವಾದಗಳಿಗೆ ಎಂದೂ ಸಿಲುಕಲಿಲ್ಲ. ಸಾಹಿತ್ಯದಲ್ಲಿ ಅವರು ಸೇವೆ ಮಾಡಿದ್ದಾರಾದರೂ ಅವರು ಸಾಂಸ್ಕೃತಿಕ ವಲಯದಲ್ಲಿ ಹೆಚ್ಚು ತೊಡಗಿಕೊಂಡಿದ್ದರಿಂದ ಕನ್ನಡದ ಮಹಾನ್ ಸಾಹಿತಿಗಳ ಸಾನ್ನಿಧ್ಯ ಅವರಿಗೆ ನಿರಂತರವಾಗಿ ಲಭ್ಯವಾಗಿತ್ತು. ಆಕರ್ಷಣೀಯ ವ್ಯಕ್ತಿತ್ವದ ನಾರಾಯಣರು ತಮ್ಮ ಸಮಂಜಸ ನಿಲುವುಗಳು, ಗಾಂಭೀರ್ಯ, ಆಕರ್ಷಕ ವ್ಯಕ್ತಿತ್ವಗಳಿಂದ ಎಲ್ಲಾ ಜನರಿಗೂ ಪ್ರಿಯರಾಗಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟು ಸರ್ಕಾರದಿಂದ ಸೂಕ್ತ ಬೆಂಬಲಗಳು ಪರಿಷತ್ತಿಗೆ ದೊರಕುವಂತೆ ಮಾಡಿ ಸಾಹಿತ್ಯ ಪರಿಷತ್ತು ಉತ್ತಮ ಕೆಲಸ ಮಾಡುವಲ್ಲಿ ಜಿ.ನಾರಾಯಣರು ವಹಿಸಿದ ಪಾತ್ರ ಮಹತ್ವಪೂರ್ಣವಾದುದು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅವರು ಅಧ್ಯಕ್ಷರಾಗಿದ್ದಾಗ ನಡೆಸಿದ ಮಹತ್ವಪೂರ್ಣ ಕಾಯಕಗಳಲ್ಲಿ ಜಾನಪದ ತಜ್ಞರ ಭಾಗವಹಿಕೆಯಲ್ಲಿ ಮೂಡಿಸಿದ ‘ಕರ್ನಾಟಕ ಜಾನಪದ ಲೋಕ’ದಂತಹ ಕೃತಿಗಳು ಈಗಲೂ ಜನಪ್ರಿಯವಾಗಿವೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷತೆಯನ್ನೂ ಅಲಂಕರಿಸಿದ್ದ ನಾರಾಯಣರು ಈ ಲೋಕವನ್ನಗಲುವ ಸಂದರ್ಭದವರೆಗೆ ‘ಜಾನಪದ ಲೋಕ’ ಟ್ರಸ್ಟಿನ ಅಧ್ಯಕ್ಷರಾಗಿದ್ದರು.

ಬಿ.ಎಂ.ಶ್ರೀ.ಪ್ರತಿಷ್ಠಾನ’, ‘ಸಾಹಿತ್ಯ ಸಂವರ್ಧಕ ಟ್ರಸ್ಟ್’, ‘ಜಾನಪದ ಲೋಕ’ ಮುಂತಾದ ಅನೇಕ ಸಂಸ್ಥೆಗಳ ದತ್ತಿಗಳ ನಿರ್ವಹಣೆ ಕೂಡಾ ಜಿ.ನಾರಾಯಣರ ತೆಕ್ಕೆಯಲ್ಲಿದ್ದು ಅವರು ಹಲವಾರು ಪ್ರತಿಷ್ಠಿತ ಸ್ಥಾನಗಳಲ್ಲಿದ್ದಾಗಿಯೂ ಸಾರ್ವಜನಿಕ ಜೀವನದಲ್ಲಿ ಗಳಿಸಿದ ಉತ್ತಮ ಹೆಸರಿಗೆ ದ್ಯೋತಕವಾಗಿವೆ. ಜಿ.ನಾರಾಯಣರು ಕರ್ನಾಟಕ ಗಮಕ ಕಲಾ ಪರಿಷತ್, ಶಶಿ ಕಲಾವಿದರು, ಲೇಖಕರ ಬಳಗ, ಶಾರದಾ ವಿದ್ಯಾಪೀಠ, ಉದಯ ಭಾನು ಕಲಾ ಸಂಘ ಮುಂತಾದ ಹಲವಾರು ಸಂಸ್ಥೆಗಳಿಗೆ ಮಾರ್ಗದರ್ಶಕರೂ ಆಗಿದ್ದವರು.

ಕನ್ನಡ ಪರವಾದ ಮಹತ್ವದ ಹೋರಾಟಗಳಲ್ಲಿ ಜಿ.ನಾರಾಯಣರು ಗಮನಾರ್ಹವಾದ ಪಾತ್ರವಹಿಸಿದ್ದಾರೆ. ಅದರಲ್ಲೂ ಅವರು ಕರ್ನಾಟಕ ಏಕೀಕರಣ ಚಳುವಳಿ ಮತ್ತು ಗೋಕಾಕ್ ಚಳುವಳಿಗಳಲ್ಲಿ ನಿರ್ವಹಿಸಿದ ಪಾತ್ರಗಳು ಗಮನಾರ್ಹವಾದದ್ದು. ಅವರು ಗೋಕಾಕ ಸಮಿತಿಯ ಸದಸ್ಯರೂ ಆಗಿದ್ದರು.

ಕರ್ನಾಟಕ ಏಕೀಕರಣ ಹೋರಾಟದಲ್ಲಿ ಇವರು ವಹಿಸಿದ ಪ್ರಮುಖ ಪಾತ್ರವನ್ನು ಗುರುತಿಸಿ ರಾಜ್ಯ ಸರ್ಕಾರವು ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ.

ಇಂತಹ ಮೇರು ವ್ಯಕ್ತಿತ್ವದ ಮಾಜಿ ಮಹಾಪೌರ, ನಾಡೋಜ ಡಾ.ಜಿ.ನಾರಾಯಣ ಅವರಿಗೆ ಜನ್ಮಶತಮಾನೋತ್ಸವವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಜಂಟಿಯಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ.

ಶತಮಾನೋತ್ಸವದ ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ವಹಿಸಲಿದ್ದಾರೆ. ಡಾ.ಜಿ.ನಾರಾಯಣ ಸಂಸ್ಕೃತಿ ಪ್ರಶಸ್ತಿ ಪ್ರದಾನವನ್ನು ಜಾನಪದ ಲೋಕ ಮಾಜಿ ಅಧ್ಯಕ್ಷರಾದ ಡಾ.ಟಿ.ತಿಮ್ಮೇಗೌಡ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಧರ್ಮಗುರುಗಳಾದ ಫಾದರ್ ಸೈಮನ್ ಬರ್ತಲೋಮಿಯಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪ್ರಶಶ್ತಿ ಪುರಸ್ಕೃತರು: ಶೇಷಾದ್ರಿಪುರಂ ಕಾಲೇಜಿನ ಗೌರವ ಕಾರ್ಯದರ್ಶಿಗಳಾದ ನಾಡೋಜ ವೂಡೇ ಪಿ.ಕೃಷ್ಣ, ಹಿರಿಯ ಕನ್ನಡ ಹೋರಾಟಗಾರರಾದ ರಾಮಣ್ಣ ಕೋಡಿಹೊಸಹಳ್ಳಿ, ಹಿರಿಯ ಹೋರಾಟಗಾರರಾದ ಆರೋಗ್ಯಪ್ಪ ಹಾಗೂ ಫಿಲೋಮಿನ ರಾಜ್.

ಆಶಯ ನುಡಿ: ರಫಾಯಲ್ ರಾಜ್, ಅಧ್ಯಕ್ಷರು, ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ. ಬೆಂಗಳೂರು.      

Tags: Catholic ChristianG.NarayanaGokakJanapada LokaKannadaKannada ChaluvaliKannada sahitya ParishadKarnataka Press AcademyNadojaಕಥೋಲಿಕ ಕ್ರೈಸ್ತರುಕನ್ನಡಕನ್ನಡ ಚಳುವಳಿಕನ್ನಡ ಸಾಹಿತ್ಯ ಪರಿಷತ್ಕರ್ನಾಟಕ ಪ್ರೆಸ್ ಅಕಾಡೆಮಿಗೋಕಾಕ್ಜಾನಪದ ಲೋಕಜಿ.ನಾರಾಯಣನಾಡೋಜಬಿ.ಎಂ.ಶ್ರೀ.ಪ್ರತಿಷ್ಠಾನಸಾಹಿತ್ಯ ಸಂವರ್ಧಕ ಟ್ರಸ್ಟ್
Previous Post

ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ!

Next Post

ಅದಾನಿ ಹಣವನ್ನು ನಾಶ ಮಾಡುತ್ತಿಲ್ಲ – ಅದಾನಿಗೆ ಆರ್‌ಎಸ್‌ಎಸ್‌ ಬೆಂಬಲ!

Next Post

ಅದಾನಿ ಹಣವನ್ನು ನಾಶ ಮಾಡುತ್ತಿಲ್ಲ - ಅದಾನಿಗೆ ಆರ್‌ಎಸ್‌ಎಸ್‌ ಬೆಂಬಲ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025

Recent News

edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS