• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಅಕಾಡೆಮಿ ಮಾಡಲಾಗದ ಕೆಲಸಗಳನ್ನು ಪತ್ರಕರ್ತರ ಸಂಘ ಮಾಡಬೇಕಿದೆ!  ಟಿ.ಎಸ್.ನಾಗಾಭರಣ 

by Dynamic Leader
08/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘವು ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ ಅವರ ನೆನಪಿಗಾಗಿ ಜೀವಬಿಂಬ ಎಂಬ ಪುಸ್ತಕವನ್ನು ಹೊರತಂದಿದೆ. ಅದರ ಬಿಡುಗಡೆ ಸಮಾರಂಭ ಪ್ರೆಸ್‌ಕ್ಲಬ್ ಆವರಣದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ  ಪತ್ರಕರ್ತರ ಸಂಘದ ಅಧಿಕೃತ  ಜಾಲತಾಣವನ್ನು ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ಹಿರಿಯನಟ ದೇವರಾಜ್, ನಟಿ ಭಾವನಾ ರಾಮಣ್ಣ  ಉದ್ಘಾಟಿಸಿದರು. ವೇದಿಕೆಯಲ್ಲಿ ಮಾತನಾಡಿದ ನಟ ದೇವರಾಜ್ ‘ನಾಗೇಶ್ ಒಬ್ಬ  ಸರಳಜೀವಿ, ನನ್ನ ಮೊದಲ ಫೋಟೋಶೂಟ್ ಅವರೇ ಮಾಡಿದ್ದರು. ಅವರ, ನನ್ನ ಸ್ನೇಹ 35 ವರ್ಷದ್ದು ಎಂದು ಹೇಳಿದರು,  ನಟಿ ಭಾವನಾ ಮಾತನಾಡುತ್ತ  ನನ್ನ ಪ್ರಥಮ ಛಾಯಾಚಿತ್ರವನ್ನು ಕ್ಲಿಕ್ ಮಾಡಿದ್ದು ಡಿಸಿ, ಅದು ಮಯೂರದಲ್ಲಿ ಪ್ರಕಟವಾಗಿತ್ತು. ನನ್ನ ತಂದೆಯ ಜೊತೆ ಸಾಕಷ್ಟು ಬಾರಿ ಅವರ ಮನೆಗೆ ಹೋಗಿದ್ದೆ’ ಎಂದು ತಮ್ಮ ಆರಂಭದ ದಿನಗಳನ್ನು ನೆನಪಿಸಿಕೊಂಡರು.  

ಸಂಘದ ಅಧ್ಯಕ್ಷ ಬಿ.ಎನ್.ಸುಬ್ರಹ್ಮಣ್ಯ ಮಾತನಾಡುತ್ತ ‘ನಮ್ಮ ಸಂಘ ಬಹಳಷ್ಟು ಮಹತ್ವಾಕಾಂಕ್ಷೆಗಳನ್ನು ಇಟ್ಟುಕೊಂಡಿದೆ. ಸಂಘದ ಜಾಲತಾಣವನ್ನು ಗೆಳೆಯರಾದ ಚಂದ್ರಶೇಖರ್ ಮಾಡಿಕೊಟ್ಟಿದ್ದಾರೆ. ಸಂಘದ ಸದಸ್ಯತ್ವವನ್ನು ಅರ್ಹತೆ ಪರಿಗಣಿಸಿ ನೀಡಲಾಗುತ್ತದೆ. ನೇರವಾಗಿ ಯಾರಿಗೂ ಕೊಡುತ್ತಿಲ್ಲ. ಮುಂದಿನ ದಿನಗಳಲ್ಲಿ ಹಲವಾರು ಲೇಖನಗಳನ್ನು ಪ್ರಕಟಿಸುವ ಆಶಯವಿದೆ’ ಎಂದರು.

ಕೊನೆಯಲ್ಲಿ ಮಾತನಾಡಿದ  ನಾಗಾಭರಣ,’ಬಹಳ ಅರ್ಥಪೂರ್ಣವಾಗಿ ಜೀವಬಿಂಬವನ್ನು ಬಿಡುಗಡೆ ಮಾಡಿದ್ದಾರೆ. ನನ್ನ ಸಿನಿಮಾ, ಜೀವನ ಪಯಣವನ್ನೂ ಸಹ ಡಿಸಿ ತನ್ನ ಬಿಂಬದಲ್ಲಿ ದಾಖಲಿಸಿ ಕೊಟ್ಟಿದ್ದಾನೆ. ಕನ್ನಡ ಚಿತ್ರರಂಗದ ಇತಿಹಾಸವನ್ನು ಪ್ರಗತಿ ಸ್ಟುಡಿಯೋ ಕಟ್ಟಿಕೊಟ್ಟಿದ್ದರೂ,.ಅದನ್ನು ಡಿಸಿ ಮುಂದುವರೆಸಿಕೊಟ್ಟಿದ್ದಾರೆ. ಆತ ಬಹುಮುಖ ವ್ಯಕ್ತಿತ್ವ ಹೊಂದಿದ ಬಿಂಬಗ್ರಾಹಿ, ಆತನಲ್ಲೊಂದು ತುಡಿತವಿತ್ತು. ಆತನಿಂದ ಬೆಳ್ಳಿಹೆಜ್ಜೆಯ ಸ್ವರೂಪ ಬೇರೆಯದೇ ರೂಪ ಪಡೆಯುತ್ತಿತ್ತು. ಆತ ದಾಖಲೆಗಳ ಸೃಷ್ಟಿಕರ್ತ. ತಪಸ್ಸನ್ನು ಮಾಡಿದಂಥ ವ್ಯಕ್ತಿ. ಲಕ್ಷಾಂತರ ಮನಸುಗಳಿಗೆ ಆತ ಬೇಕಾದವನಾಗಿ ಬದುಕಿದ್ದಾನೆಂದು ಡಿಸಿ ಸ್ಮರಿಸಿದ ನಂತರ, ಚಲನಚಿತ್ರ ಅಕಾಡೆಮಿ ಮಾಡಲಾಗದ ಹಲವು ಕೆಲಸಗಳನ್ನು ಪತ್ರಕರ್ತರ ಸಂಘ ಮಾಡಬೇಕಿದೆ. ಪತ್ರಕರ್ತರ ಸಂಘ ಹಿಂದೆಯೂ ಇತ್ತು. ನಾವೆಲ್ಲ ಆಗ ಬೇರೆಬೇರೆ ಕಾರಣಗಳಿಂದಾಗಿ ಪತ್ರಕರ್ತರ ಸಂಘವನ್ನು ಒಂದು ಮಾನದಂಡವಾಗಿ ಪರಿಗಣಿಸುತ್ತಿದ್ದೆವು’ ಎಂದು  ಹೇಳಿದರು.

ಪ್ರೆಸ್‌ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ಮಾತನಾಡುತ್ತ ಅವರು ತಮ್ಮ ಹಾಗೂ ಡಿಸಿ ಜೊತೆಗಿನ ಒಡನಾಟದ ಸಂದರ್ಭವನ್ನು ನೆನಪು ಮಾಡಿಕೊಂಡರು. ಕಾರ್ಯಾಧ್ಯಕ್ಷರು ಹಾಗೂ ಕೃತಿಯ ಸಂಪಾದಕರೂ ಆದ ಚೇತನ್‌ ನಾಡಿಗೇರ್‌, ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಜಿ., ಕಾರ್ಯದರ್ಶಿ ಜಗದೀಶ್‌ ಕುಮಾರ್‌, ದೃಶ್ಯ ಮಾದ್ಯಮದ ಪತ್ರಕರ್ತ ಮಾಲತೇಶ್ ಜಗ್ಗಿನ್, ಅವಿನಾಶ್, ಕೇಶವಮೂರ್ತಿ, ರವಿಕಾಂತ ಕುಂದಾಪುರ, ವಿಕಾಸ ನೇಗಿಲೋಣಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪತ್ರಕರ್ತ ಶಶಿಧರ ಚಿತ್ರದುರ್ಗ ಸ್ವಾಗತ ಮಾತುಗಳನ್ನಾಡಿದರೆ, ಶರಣು ಹುಲ್ಲೂರು ನಿರೂಪಣೆಯ ಜವಾಬ್ದಾರಿ ವಹಿಸಿಕೊಂಡಿದ್ದರು.

Tags: Actor DevarajActress Bhavana RamannaCinemaJeeva BimbaTS Nagabharanaಜೀವಬಿಂಬಟಿ.ಎಸ್.ನಾಗಾಭರಣಡಿ.ಸಿ.ನಾಗೇಶ್ನಟ ದೇವರಾಜ್ನಟಿ ಭಾವನಾ ರಾಮಣ್ಣಸಿನಿಮಾ
Previous Post

ಭಾರತೀಯ ಪೌರತ್ವ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ!

Next Post

ಶೃತಿ-ಶರಣ್ ಮನೆ ಮಗಳು ಚಿತ್ರರಂಗಕ್ಕೆ ʻಧರಣಿʼಯ ನಾಯಕಿ ಕೀರ್ತಿ ಕೃಷ್ಣ!

Next Post

ಶೃತಿ-ಶರಣ್ ಮನೆ ಮಗಳು ಚಿತ್ರರಂಗಕ್ಕೆ ʻಧರಣಿʼಯ ನಾಯಕಿ ಕೀರ್ತಿ ಕೃಷ್ಣ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025
edit post
ನಾನು ಕ್ಷಮೆ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

10/07/2025

Recent News

edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025
edit post
ನಾನು ಕ್ಷಮೆ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

10/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS