• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೋದಿಗೆ ತಾಯಿಗಿಂತ, ದೇಶದ ಸೇವೆಗಿಂತ; ಅದಾನಿಯೇ ಮುಖ್ಯ?

by Dynamic Leader
17/12/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ‘ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ’ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ ಎಂದು ವಿರೋಧ ಪಕ್ಷಗಳು ಹಾಗೂ ಆರ್ಥಿಕ ತಜ್ಞ್ಯರೆಲ್ಲ ಕಳವಳ ವ್ಯಕ್ತ ಪಡಿಸುತ್ತಿದ್ದಾರೆ. ವಿರೋಧಪಕ್ಷಗಳ ಒಕ್ಕೊರಳಿನ ಒತ್ತಾಯದಿಂದ ಸಂಸತ್ ನಲ್ಲಿ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟವು.

ಈ ಹಿನ್ನಲೆಯಲ್ಲಿ ಫೆಬ್ರವರಿ 8 ರಂದು ಸುಮಾರು 9 ಗಂಟೆಗಳ ಕಾಲ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅದಾನಿಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ, ನೆಹರು ಕುಟುಂಬವನ್ನು ತರಾಟೆಗೆ ತೆಗೆದುಕೊಂಡರು. ‘ನೆಹರೂ ವಂಶಸ್ಥರೇಕೆ ಅವರ ಉಪನಾಮ ಬಳಸಲ್ಲ’ ಎಂಬುದನ್ನು ಒಂದು ವಿಷಯವಾಗಿ ಮುನ್ನಲೆಗೆ ತಂದು, ಬಿಜೆಪಿ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಲು ಲೇವಡಿ, ಹಾಸ್ಯ ಚಟಾಕಿ ಹಾರಿಸುತ್ತಾ ಕಾಲ ಕಳೆದರು. ದೇಶವಿರುವ ಪರಿಸ್ಥಿತಿಯಲ್ಲಿ ಮೋದಿಗೆ ಹಾಷ್ಯತನ ಬೇಕೆ? ಎಂಬುದನ್ನು ಜನ  ಕೇಳುತ್ತಿದ್ದಾರೆ. ಭಾರತೀಯ ಪದ್ಧತಿಯಂತೆ – ಪ್ರಪಂಚದ ಪದ್ಧತಿಯಂತೆ ಗಂಡು ಮಕ್ಕಳ ಕುಟುಂಬದ ಹೆಸರೇ ಮುಂದುವರಿಯುತ್ತದೆ. ನೆಹರೂಗೆ ಮಗನಿರಲಿಲ್ಲ. ಇಂದಿರಾ ಒಬ್ಬಳೇ ಮಗಳು. ಆದ್ದರಿಂದ ಅವರ ಪತಿ ಫಿರೋಜ್ ಗಾಂಧಿಯ ಹೆಸರನ್ನು ಉಪನಾಮವಾಗಿ ಬಳಸುತ್ತಿದ್ದಾರೆ. ಇದು ಪ್ರಧಾನಿಗೆ ಗೊತ್ತಿಲ್ಲವೇ?

2014ರಲ್ಲಿ ಅದಾನಿ ಪುತ್ರನ ವಿವಾಹವಾಗಿತ್ತು. ಈ ಮದುವೆಗೆ ಜಗತ್ತಿನಾದ್ಯಂತ ಕ್ಲಾಸ್ ಒನ್ ಶ್ರೀಮಂತರೆಲ್ಲ ಬಂದು ಹೋದರು. ಆದರೆ, ನರೇಂದ್ರ ಮೋದಿಯವರು ಮಾತ್ರ ಮೂರು ದಿನಗಳು ಅಲ್ಲಿಯೇ ಉಳಿದು, ಅದಾನಿ ಪುತ್ರನ ವಿವಾಹದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮೋದಿ ಅವರ ತಾಯಿ ಇತ್ತೀಚೆಗೆ ನಿಧನರಾದಾಗ, ಅವರು ಕೆಲವೇ ಗಂಟೆಗಳಲ್ಲಿ ಅವರ ಅಂತಿಮ ವಿಧಿಗಳನ್ನು ಪೂರ್ಣಗೊಳಿಸಿ ಹೊರನಡೆದರು. ಪ್ರದಾನಿ ಮೋದಿಗೆ ತಾಯಿಗಿಂತ ದೇಶ ಸೇವೆಯೇ ದೊಡ್ಡದು ಎಂಬಂತೆ ಅಂದು ಬಿಂಬಿಸಲಾಯಿತು. ಆದರೆ, ಮೋದಿಗೆ ತನ್ನ ತಾಯಿಗಿಂತ, ಈ ದೇಶದ ಸೇವೆಗಿಂತ; ಅದಾನಿ ಪುತ್ರನ ವಿವಾಹವೇ ಅಂದು ಮುಖ್ಯವಾಗಿತ್ತು ಎಂಬುದನ್ನು ಇನ್ನು ಯಾರೂ ಮರೆತಿಲ್ಲ.    

‘ಮೂವತ್ತು ವರ್ಷಗಳಿಂದ ಕುಟುಂಬದೊಂದಿಗೆ ಇರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಹೇಳಿದ್ದರು. ಹಾಗಾದರೆ, ಇಷ್ಟು ವರ್ಷ ಅಮ್ಮನನ್ನು ಸಾಕುತ್ತಿದ್ದ ಅಣ್ಣನೂ ಸೇರಿದಂತೆ ಜೊತೆಯಲ್ಲಿ ಹುಟ್ಟಿದವರು ಬಂದು ಶಾಸ್ತ್ರೋಕ್ತವಾಗಿ ನಡೆದುಕೊಂಡಿರಬೇಕು ಅಲ್ಲವೇ? ಆದರೆ, ಅಂದು ನಾವು ಮೋದಿಯನ್ನು ಮಾತ್ರ ನೋಡುತ್ತಿದ್ದೆವು. ಪ್ರಧಾನಿಯ ತಾಯಿಯ ಸಾವನ್ನು ಹಾಗೂ ಪ್ರಧಾನಿಯನ್ನು ಲೈವ್ ಟೆಲಿಕಾಸ್ಟ್ ಮಾಡಿ, ತಮ್ಮ ಟಿ.ಆರ್.ಪಿ.ಯನ್ನು ಹೆಚ್ಚಿಸಿಕೊಂಡ ಮಾದ್ಯಮಗಳು, ಪ್ರಧಾನಿ ನರೇಂದ್ರ ಮೋದಿಗೆ ತಾಯಿಗಿಂತ ಈ ದೇಶ ಸೇವೆಯೇ ದೊಡ್ಡದು ಎಂಬಂತೆ ಬಿಂಬಿಸಿದವು. 

ಸಂಸತ್ತಿನಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು, ನೀವು (ಮೋದಿ) ಇಸ್ರೇಲ್, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಅದಾನಿ ವ್ಯವಹಾರವನ್ನು ಪಡೆಯುತ್ತಾರೆ. ಹಾಗಾದರೆ ನಿಮ್ಮ ಮತ್ತು ಅದಾನಿ ನಡುವೆ ಏನಿದೆ? ಎಂಬುದನ್ನು ಈ ದೇಶಕ್ಕೆ ತಿಳಿಸಿಕೊಡಿ ಎಂದು ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನೆ ಮಾಡುತ್ತಾರೆ. ಸಂಸದ ರಾಹುಲ್ ಗಾಂಧಿಯ ಈ ಗುರುತರವಾದ ಪ್ರಶ್ನೆಗೆ (ಆರೋಪಕ್ಕೆ) ಮೋದಿಯವರು ತಕ್ಕ ಉತ್ತರ ನೀಡುತ್ತಾರೆ ಎಂದು ಈ ದೇಶವೇ ಎದುರು ನೋಡುತ್ತಿರುವಾಗ, ಸಂಸತ್ತಿನಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ, ವಿರೋಧ ಪಕ್ಷಗಳನ್ನು ಲೇವಡಿಯಿಂದ, ಹಾಸ್ಯ ಹಾಗೂ ಉಡಾಫೆಯ ಮಾತುಗಳಿಂದ ತಿವಿದು, ವಿರೋಧ ಪಕ್ಷಗಳ ಗುರುತರವಾದ ಆರೋಪಗಳನ್ನು ದಿಕ್ಕು ತಪ್ಪಿಸಿ, ಪ್ರಶ್ನೆ ಮಾಡಿದವರನ್ನೇ ಅಪರಾಧಿಯನ್ನಾಗಿಸುವ ಪ್ರಯತ್ನವನ್ನು ಮಾಡಿದರು.

‘ದೇಶಭಕ್ತಿಯೇ ಕಿಡಿಗೇಡಿಗಳ ಕೊನೆಯ ಆಶ್ರಯ ತಾಣ’ ಎಂಬ ಸ್ಯಾಮ್ಯುಯೆಲ್ ಜಾನ್ಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು, ಮೋದಿ ಸರ್ಕಾರ ಅಧಿಕಾರ ವರ್ಗದೊಂದಿಗೆ ಕೈಜೋಡಿಸಿ, ತನ್ನ ತಪ್ಪುಗಳನ್ನು ಯಾರೂ ಪ್ರಶ್ನಿಸದಂತೆ ಮುಚ್ಚಿಹಾಕಲು, ತನ್ನ ಅಕ್ರಮಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದೆ. ದೇಶಭಕ್ತಿ, ರಾಷ್ಟ್ರೀಯ ಭದ್ರತೆ ಹಾಗೂ ರಾಷ್ಟ್ರದ ಅಭಿವೃದ್ಧಿಯ ಸುಳ್ಳು ವಿಚಾರಗಳನ್ನು ಮುಂದಿಡುವುದು ಈಗ ಅವರಿಗೆ ವಾಡಿಕೆಯಾಗಿದೆ.

Tags: adaniHeerabenModiNarendra ModiRahul Gandhiಅದಾನಿನರೇಂದ್ರ ಮೋದಿಮೋದಿರಾಹುಲ್ ಗಾಂಧಿಹೀರಾಬೆನ್
Previous Post

‘ಹಸು ಹಗ್ಗಿಂಗ್ ಡೇ’ ರದ್ದು; ಘೋಷಣೆಯನ್ನು ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ!

Next Post

ಬೆಚ್ಚಿ ಬೀಳಿಸುವ ಘಟನೆಗಳ ಜೊತೆಗೆ ಕಾಡಿನಲ್ಲಿ ಸುತ್ತಾಡಿಸುವ ಡಿಸೆಂಬರ್ 24! ಸಿನಿಮಾ ರಿವ್ಯೂ

Dynamic Leader

Next Post

ಬೆಚ್ಚಿ ಬೀಳಿಸುವ ಘಟನೆಗಳ ಜೊತೆಗೆ ಕಾಡಿನಲ್ಲಿ ಸುತ್ತಾಡಿಸುವ ಡಿಸೆಂಬರ್ 24! ಸಿನಿಮಾ ರಿವ್ಯೂ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS