• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಲಾಂಗ್ ಡ್ರೈವ್ ಎನ್ನುವ ಲವ್ಲಿ ಸಿನಿಮಾ!

by Dynamic Leader
12/02/2023
in ಸಿನಿಮಾ
0
ಲಾಂಗ್ ಡ್ರೈವ್ ಎನ್ನುವ ಲವ್ಲಿ ಸಿನಿಮಾ!
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಈ ಜಗತ್ತಿರುವುದೇ ಹೀಗೆ ಇಲ್ಲಿ ಯಾರನ್ನೂ ಒಳ್ಳೆಯವರು ಅಥವಾ ಕೆಟ್ಟವರು ಅಂಥಾ ಒಂದೇ ಏಟಿಗೆ ಏಳಿಬಿಡಲು ಸಾಧ್ಯವಿಲ್ಲ. ಪರಿಸ್ಥಿತಿಗಳು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತವೆ. ಬರಿಯ ಒಳ್ಳೆಯತನ, ಪ್ರಾಮಾಣಿಕತೆ ವ್ಯಕ್ತಿಯೊಬ್ಬನನ್ನು ನೋಡುಗರ ದೃಷ್ಟಿಯಲ್ಲಿ ಬೇರೆಯದ್ದೇ ರೀತಿಯಲ್ಲಿ ಚಿತ್ರಿಸಿಬಿಡುತ್ತದೆ. ಹಾಗೆಯೇ, ವ್ಯಸನಕ್ಕೆ ಬಿದ್ದ ವ್ಯಕ್ತಿ ಎಂಥ ಹೀನ ಕೆಲಸ ಮಾಡಲು ಕೂಡಾ ಮುಂದಾಗುತ್ತಾನೆ. ಯಾವತ್ತಾದರೊಂದು ದಿನ ಮುಖವಾಡ ಕಳಚಿಬೀಳುತ್ತದೆ ಅನ್ನೋ ಭಯದಲ್ಲಿ ಬದುಕುವುದಕ್ಕಿಂತಾ ಗೌರವಯುತವಾಗಿ ಬಾಳ್ವೆ ನಡೆಸೋದು ಉತ್ತಮ…

ʻಲಾಂಗ್ ಡ್ರೈವ್ʼ ಹೆಸರಿನ ಸಿನಿಮಾವೊಂದು ತೆರೆಗೆ ಬಂದಿದೆ. ಈ ಚಿತ್ರದಲ್ಲೂ ಇಂಥ ಅನೇಕ ವಿಚಾರಗಳಿವೆ. ಪ್ರೀತಿಗೆ ಬಿದ್ದ ಜೋಡಿ ಲಾಂಗ್ ಡ್ರೈವ್ ಹೊರಟಿರುತ್ತದೆ. ಅಲ್ಲಿ ಎದುರಾಗುವ ಘಟನೆಗಳು ಹುಡುಗನ ಬಗ್ಗೆ ಹುಡುಗಿಯ ಮನಸ್ಸಿನಲ್ಲಿ ಕೀಳು ಭಾವನೆ ಮೂಡಿಸುತ್ತದೆ. ಹಾಗೆಂದು ಹುಡುಗ ಅವಳ ಹತ್ತಿರ ಅನುಚಿತವಾಗಿ ವರ್ತಿಸಿರುವುದಿಲ್ಲ. ʻತನ್ನನ್ನು ಈತ ರಕ್ಷಿಸಲಾರʼ ಎನ್ನುವಂತಾ ಮನಸ್ಥಿತಿಗೆ ದೂಡುತ್ತದಷ್ಟೇ. ಇದೇ ಕಾರಣಕ್ಕೆ ಆಕೆ `ಒಂದು ಹುಡುಗೀನ ಇಷ್ಟ ಪಡೋದು ಗಂಡಸ್ತನ ಅಲ್ಲ. ಅವಳನ್ನು ಮದುವೆಯಾಗಿ ಮಗು ಕೊಡೋದು ಗಂಡಸ್ತನ ಅಲ್ಲ. ಇಷ್ಟ ಪಟ್ಟೋಳು ಒಂದು ಹುಡುಗನ ಜೊತೆ ಬರ್ತಾಳೆ ಅಂದ್ರೆ, ಅವನ ಮೇಲಿಟ್ಟಿರೋ ನಂಬಿಕೆಯಿಂದ….’ ಅಂತಾ ಕಮೆಂಟು ಮಾಡುತ್ತಾಳೆ. ಕಣ್ಣೀರಿಡುತ್ತಾ ಹೊರಟುಬಿಡುತ್ತಾಳೆ. ಅಲ್ಲಿ ನಡೆದ ಆ ಘಟನೆ ಯಾವುದು? ಅದಕ್ಕೆ ಯಾರು ಕಾರಣ? ಹುಡುಗಿಯ ಮುಂದೆ ತನ್ನ ಇಮೇಜು ಹಾಳು ಮಾಡಿಕೊಂಡ ಹುಡುಗ ಮುಂದೆ ಏನೆಲ್ಲಾ ಮಾಡುತ್ತಾನೆ…? ಎಂಬಿತ್ಯಾದಿ ವಿಚಾರಗಳ ಸುತ್ತ ಬೆಸೆದುಕೊಂಡ ಕಥೆ ಲಾಂಗ್ ಡ್ರೈವ್ನಲ್ಲಿದೆ.

ಸಾಮಾನ್ಯಕ್ಕೆ ಅನ್ಯಾಯಕ್ಕೊಳಗಾದವರು ಸೇಡು ತೀರಿಸಿಕೊಳ್ಳೋದು, ದುಷ್ಟನನ್ನು ಶಿಕ್ಷಿಸಿ ಹೀರೋ ಆಗೋದು ಬಹುತೇಕ ಎಲ್ಲ ಸಿನಿಮಾಗಳಲ್ಲೂ ಇರುತ್ತವೆ. ಅದನ್ನು ಮೀರಿ ಬೇರೊಂದು ಪ್ರಯತ್ನ ಈ ಚಿತ್ರದಲ್ಲಾಗಿದೆ. ಅದೆಷ್ಟು ಹೊಸತನದಿಂದ ಕೂಡಿದೆಯೆಂದರೆ ಈ ಚಿತ್ರದಲ್ಲಿ ಹೀರೋ ಯಾರು? ವಿಲನ್ ಯಾರು ಎನ್ನುವ ಗೊಂದಲ ಸೃಷ್ಟಿಸುವ ಮಟ್ಟಿಗೆ! ಅದೇನೇ ಇರಲಿ, ತಪ್ಪು ಮಾಡಿದವನಿಗೆ ಪರಿವರ್ತನೆಗೊಳ್ಳಲು ಅವಕಾಶ ಕೊಡಬೇಕು ಅನ್ನೋದನ್ನು ಈ ಸಿನಿಮಾದ ಕಂಟೆಂಟು ಪ್ರತಿಪಾದಿಸಿದೆ. ವಿಕಾಸ್ ವಸಿಷ್ಟ ಸಂಗೀತ ನೀಡಿರುವ ಮಾಯಾವಿಯೇ ಹಾಡು ಅದ್ಭುತವಾಗಿದೆ. ಜೀವನ್ ಚೆಂದಚೆಂದ ಪದಗಳನ್ನು ಪೋಣಿಸಿದ್ದಾರೆ. ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ಸಿಕ್ಕಿರುವ ಸೀಮಿತ ಸೌಲಭ್ಯದಲ್ಲಿ ಅಚ್ಚುಕಟ್ಟಾದ ಕೆಲಸ ಮಾಡಿ ತೋರಿಸಿದ್ದಾರೆ. 

ಅರ್ಜುನ್ ಯೋಗಿ, ಸುಪ್ರಿತಾ ಸತ್ಯನಾರಾಯಣ್ ನಟನೆ ಇಷ್ಟವಾಗುತ್ತದೆ. ತೇಜಸ್ವಿನಿ ಶೇಖರ್ ಎಂಟ್ರಿ ಕೊಟ್ಟಮೇಲೆ ಚಿತ್ರಕತೆಯ ಲಯ ಪಡೆಯುತ್ತದೆ. ಅಷ್ಟು ಸಹಜವಾಗಿ ಈಕೆ ಅಭಿನಯಿಸಿದ್ದಾರೆ. ಲಾಂಗ್ ಡ್ರೈವ್ ನಲ್ಲಿ ಹೆಚ್ಚು ಸ್ಕೋರ್ ಮಾಡುವುದು ವಿಲನ್ ನಂತೆ ಎಂಟ್ರಿ ಕೊಟ್ಟು ಹೀರೋ ಲೆವೆಲ್ಲು ತಲುಪುವ ಶಬರಿ ಮಂಜು. ಸ್ವತಃ ನಿರ್ಮಾಪಕರೂ ಆಗಿರುವ ಶಬರಿ ಮಂಜು ಕನ್ನಡದಲ್ಲಿ ಉತ್ತಮ ಪೋಷಕ ಕಲಾವಿದನಾಗಿ ನಿಲ್ಲೋದು ನಿಜ. ಜಿಮ್ ಕೀರ್ತೀ ಕಡಿಮೆ ದೃಶ್ಯಗಳಲ್ಲಿ ಕಾಣಿಸಿಕೊಂಡರೂ, ನೆನಪಿನಲ್ಲುಳಿಯುವ ಪಾತ್ರ ಮಾಡಿದ್ದಾರೆ. ಈತ್ತೀಚೆಗೆ ಬರುತ್ತಿರುವ ಉತ್ತಮ ಹಾಸ್ಯ ಕಲಾವಿದರ ಲಿಸ್ಟಿಗೆ ಜಿಮ್ ಕೀರ್ತಿ ಕೂಡಾ ಸೇರಿಕೊಂಡಿದ್ದಾರೆ. ಹಾಗಂತಾ ಕೀರ್ತಿ ಬರೀ ಕಾಮಿಡಿ ಪಾತ್ರಕ್ಕಷ್ಟೇ ಸೂಟ್ ಆಗುತ್ತಾರಂತೇನೂ ಇಲ್ಲ. ಯಾವುದೇ ಪಾತ್ರ ಕೊಟ್ಟರೂ ಅದನ್ನು ದಕ್ಕಿಸಿಕೊಳ್ಳುವ ಶಕ್ತಿ ಇವರಲ್ಲಿದೆ. ಬಲ ರಾಜ್ ವಾಡಿ ಅವರನ್ನು ನಿರ್ದೇಶಕರು ಇನ್ನೂ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬಹುದಿತ್ತು. ನಿರ್ದೇಶಕ ಶ್ರೀರಾಜ್ ಈ ಹಿಂದೆ ರವಿ ಶ್ರೀವತ್ಸ ಗರಡಿಯಲ್ಲಿ ಬೆಳೆದವರು. ʻಲಾಂಗ್ ಡ್ರೈವ್ʼ ನೋಡಿದರೆ ಶ್ರೀರಾಜ್ ಶ್ರೀವತ್ಸರ ಯಾವ ಛಾಯೆಯನ್ನು ಅನುಕರಿಸಿದಂತೆ ಕಾಣಿಸಿಲ್ಲ. ಬದಲಿಗೆ ತಮ್ಮದೇ ಹೊಸ ಶೈಲಿಯನ್ನು ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಲವ್ ಕಂ ಥ್ರಿಲ್ಲರ್ ಜಾನರಿನ ʻಲಾಂಗ್ ಡ್ರೈವ್ʼನಲ್ಲಿ ವಿಪರೀತ ತಿರುವು, ಭಯಾನಕ ದೃಶ್ಯಗಳನ್ನು ತುರುಕಿಲ್ಲ.  ಸಣ್ಣದೊಂದು ಕತೆಯನ್ನು ಎಷ್ಟು ಸರಳವಾಗಿ ಹೇಳಿ ಮುಗಿಸಬೇಕೋ ಅದನ್ನಷ್ಟೇ ಮಾಡಿದ್ದಾರೆ.

ಸಿನಿಮಾ ರೇಟಿಂಗ್: 3.5/5

Tags: Arjun YogiLang Drive CinemaLang Drive MovieSuprita SatyanarayanVikas Vasishtaಅರ್ಜುನ್ ಯೋಗಿಲಾಂಗ್ ಡ್ರೈವ್ ಮೂವಿಲಾಂಗ್ ಡ್ರೈವ್ ಸಿನಿಮಾವಿಕಾಸ್ ವಸಿಷ್ಟಸುಪ್ರಿತಾ ಸತ್ಯನಾರಾಯಣ್
Previous Post

ಅದಾನಿ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು! ಸುಬ್ರಮಣಿಯನ್ ಸ್ವಾಮಿ.

Next Post

ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

Dynamic Leader

Next Post
ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025

Recent News

edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS