• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

by Dynamic Leader
20/02/2023
in ರಾಜಕೀಯ
0
ಸಿದ್ದರಾಮಯ್ಯ

ಸಿದ್ದರಾಮಯ್ಯ

0
SHARES
0
VIEWS
Share on FacebookShare on Twitter

ಚಿತ್ರದುರ್ಗ: ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪವನ್ನು ತಳ್ಳಿಹಾಕಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಈ ವರೆಗೆ ಬಿಜೆಪಿಯವರು ಯಾಕೆ ಕಣ್ಮುಚ್ಚಿ ಕುಳಿತಿದ್ದರು ಎಂದು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಸಿಎಂ ಹೇಳುತ್ತಿದ್ದಾರೆ. ನಮ್ಮ ಅಧಿಯಲ್ಲಿ ಆಗಿದ್ದರೆ ತನಿಖೆ ನಡೆಸಬೇಕಿತ್ತು. ಯಾಕೆ ಸುಮ್ಮನಿದ್ದೀರಿ? ನಾನೇನಾದರೂ ಭ್ರಷ್ಟಾಚಾರದ ಹಗರಣಗಳಲ್ಲಿ ಭಾಗಿಯಾಗಿದ್ದರೆ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಯಾಕೆ ತನಿಖೆ ಮಾಡಿಸಿಲ್ಲ? ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಬಾಯಿಯಲ್ಲಿ ಕಡುಬು ಹಾಕಿಕೊಂಡು ಕೂತಿದ್ದಿರಾ’? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

ಡಿ.ಕೆ.ರವಿ

ಇದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಪ್ರತಿ ಬಾರಿ ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ನಮ್ಮತ್ತ ಬೆರಳು ತೋರಿಸುವುದು ಅವರಿಗೆ ಚಾಳಿಯಾಗಿದೆ. ನಮ್ಮ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬಂದಾಗೆಲ್ಲ ಅದಕ್ಕೆ ಆಧಾರಗಳು ಇಲ್ಲದೆ ಇದ್ದರೂ ತಕ್ಷಣ ತನಿಖೆಗೆ ಆದೇಶ ನೀಡುತ್ತಿದ್ದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಮತ್ತು ಡಿವೈಎಸ್‌ಪಿ ಗಣಪತಿಯವರ ಆತ್ಮಹತ್ಯೆ, ಅಕ್ರಮ ಲಾಟರಿ ಪ್ರಕರಣ, ಪರೇಶ್ ಮೇಸ್ತಾ ಸಾವು, ಸೌಜನ್ಯ ಕೊಲೆ ಪ್ರಕರಣವೂ ಹೀಗೆ 8 ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದೆ. ಡಿ.ಕೆ.ರವಿ, ಗಣಪತಿ, ಪರೇಶ್ ಮೇಸ್ತಾ ಸೇರಿದಂತೆ ಹೆಚ್ಚಿನ ಪ್ರಕರಣಗಳಲ್ಲಿ ಸಿಬಿಐ ‘ಬಿ ರಿಪೋರ್ಟ್’ ನೀಡಿದೆ. ಒಂದೇ ಒಂದು ಪ್ರಕರಣದಲ್ಲಿಯೂ ನಮ್ಮನ್ನು ದೋಷಿ ಮಾಡಿಲ್ಲ.

Justice H.S. Kempanna

ಅರ್ಕಾವತಿ ಬಡಾವಣೆಯಲ್ಲಿ ರೀ ಡೂ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಕೂಡಲೇ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ಮಾಡಿದ್ದೆ. ನನ್ನಿಂದ ಒಂದು ಗುಂಟೆ ಜಾಗ ಕೂಡಾ ಡಿನೋಟಿಫಿಕೇಶನ್ ಆಗಿಲ್ಲ ಎಂದು ಕೆಂಪಣ್ಣ ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ರೀ ಡೂ ಮಾಡಲು ಹೇಳಿದ್ದು ರಾಜ್ಯ ಹೈಕೋರ್ಟ್. ನ್ಯಾಯಾಲಯದ ಆದೇಶವನ್ನಷ್ಟೇ ನಮ್ಮ ಸರ್ಕಾರ ಪಾಲಿಸಿದೆ. ಎಲ್ಲಿಯೂ ಡಿನೋಟಿಫಿಕೇಷನ್ ನಡೆದಿಲ್ಲ. ನ್ಯಾಯಮೂರ್ತಿ ಕೆಂಪಣ್ಣನವರೇ ಇದನ್ನು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಕೆಂಪಣ್ಣನವರ ವರದಿಯ ಅಧ್ಯಯನ ಮಾಡಲು ಐಎಎಸ್ ಅಧಿಕಾರಿ ವಿಜಯಭಾಸ್ಕರ್ ನೇತೃತ್ವದಲ್ಲಿ ಸಮಿತಿ ನೇಮಕ ಮಾಡಿದ್ದೆ. ಆ ಸಮಿತಿ ವರದಿ ನೀಡುವ ಸಮಯದಲ್ಲಿ ಚುನಾವಣೆ ಎದುರಾದ ಕಾರಣ ಆ ವರದಿಯ ಮೇಲೆ ಕ್ರಮಕೈಗೊಳ್ಳಲಾಗಲಿಲ್ಲ. ಈಗ ರೀಡೂ ಮಾಡಲಾಗಿದೆ ಎಂದು ಆರೋಪ ಮಾಡುವವರು ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಮತ್ತು ವಿಜಯಭಾಸ್ಕರ್ ಸಮಿತಿ ನೀಡಿರುವ ವರದಿಯ ಮೇಲೆ ಯಾಕೆ ಕ್ರಮಕೈಗೊಂಡಿಲ್ಲ? ನಾಲ್ಕು ವರ್ಷಗಳಿಂದ ಬಾಯಿ ಮುಚ್ಚಿಕೊಂಡು ಕೂತವರು ಈಗ ರಾಜಕೀಯ ದುರುದ್ದೇಶದಿಂದ ಆರೋಪ ಮಾಡುತ್ತಿದ್ದಾರೆ.

ನ್ಯಾಯಮೂರ್ತಿ ಕೆಂಪಣ್ಣ ಹಾಗೂ ವಿಜಯಭಾಸ್ಕರ್ ಅವರ ಸಮಿತಿ ನೀಡಿರುವ ವರದಿಗಳು ಸರ್ಕಾರದ ಕೈಯಲ್ಲಿದೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ವಿಧಿಸಿ. ನಿಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ಸುಳ್ಳು ಆರೋಪಗಳನ್ನು ಮಾಡಬೇಡಿ. ಎಸಿಬಿ ರಚನೆ ಮಾಡಿ ಲೋಕಾಯುಕ್ತವನ್ನು ದುರ್ಬಲಗೊಳಿಸಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಆಗಿನ ಲೋಕಾಯುಕ್ತರಾಗಿದ್ದ ಭಾಸ್ಕರ್ ರಾವ್ ಅವರ ಮಗ ಮನೆಯಲ್ಲಿಯೇ ಕೂತು ಆರೋಪಿ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಇತ್ತು. ಲೋಕಾಯುಕ್ತರ ವಿರುದ್ಧವೇ ಆರೋಪ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತದ ಕಾರ್ಯದ ಮೇಲೆ ಕಣ್ಣಿಡಲು ಎಸಿಬಿ ರಚನೆ ಮಾಡಿದ್ದೇವೆಯೇ ಹೊರತು ಅದರಲ್ಲಿ ಯಾವುದೇ ದುರುದ್ದೇಶ ಇರಲಿಲ್ಲ. ಎಸಿಬಿ ಅಸ್ತಿತ್ವದಲ್ಲಿರುವುದು ಕೇವಲ ಕರ್ನಾಟಕದಲ್ಲಿ ಅಲ್ಲ, ಬಿಜೆಪಿ ಆಡಳಿತ ಇರುವ ಗುಜರಾತ್, ಮಧ್ಯಪ್ರದೇಶ, ಹರ್ಯಾಣ ಮೊದಲಾದ ರಾಜ್ಯಗಳಲ್ಲಿ ಇವೆ. ಅಲ್ಲಿ ಯಾಕೆ ಬಿಜೆಪಿ ಎಸಿಬಿಗೆ ವಿರುದ್ಧವಾಗಿ ಮಾತನಾಡುವುದಿಲ್ಲ? ಇಲ್ಲಿ ಎಸಿಬಿಯನ್ನು ಮುಚ್ಚಿ ಲೋಕಾಯುಕ್ತಕ್ಕೆ ಪೂರ್ಣ ಅಧಿಕಾರ ನೀಡಲು ಕಾರಣ ಹೈಕೋರ್ಟ್ ಆದೇಶವೇ ಹೊರತು, ಬಿಜೆಪಿ ಅಲ್ಲ” ಎಂದು ಕಿಡಿಕಾರಿದ್ದಾರೆ.

Tags: ACBArkavathi LayoutDK RaviJustice H.S. KempannaLokayuktaRedoಅರ್ಕಾವತಿ ಲೇಔಟ್ಎಸಿಬಿಡಿ.ಕೆ.ರವಿನ್ಯಾಯಮೂರ್ತಿ ಹೆಚ್.ಎಸ್.ಕೆಂಪಣ್ಣರೀಡುಲೋಕಾಯುಕ್ತ
Previous Post

ಅಶ್ವಿನಿ ಬಸವರಾಜು ಕಂಠದಲ್ಲಿ “ದೇವ ದೇವ ಮಹದೇವ” ಡಾ.ವಿ.ನಾಗೇಂದ್ರ ಪ್ರಸಾದ್ ಮೆಚ್ಚುಗೆ!

Next Post

ಕರ್ನಾಟಕ ಮುಸ್ಲಿಮ್ ಯುನಿಟಿಗೆ ಭರವಸೆಯ ನಾಯಕರು!

Dynamic Leader

Next Post

ಕರ್ನಾಟಕ ಮುಸ್ಲಿಮ್ ಯುನಿಟಿಗೆ ಭರವಸೆಯ ನಾಯಕರು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS