• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮಾನ್ವಿಯಲ್ಲಿ ಮೆರೆದಾಡುವ ಮಹಾನೀಯರು! ಚುನಾವಣೆ ಒಂದು ನೋಟ

by Dynamic Leader
24/02/2023
in ರಾಜಕೀಯ
0
0
SHARES
1
VIEWS
Share on FacebookShare on Twitter

ವರದಿ: ರಾಮು, ನೀರಮಾನ್ವಿ

ಮಾನ್ವಿ: ರಾಯಚೂರು ಜಿಲ್ಲೆ, ಮಾನ್ವಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯು ದಿನದಿಂದ ದಿನಕ್ಕೆ ಹಲವಾರು ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಮಾನ್ವಿ ಕ್ಷೇತ್ರದಲ್ಲಿ, ಅಧಿಕಾರದ ಚುಕ್ಕಾಣಿ ಹಿಡಿಯಲು ಸದರಿ ಜನಾಂಗದಲ್ಲಿಯೇ ತೀವ್ರ ಪೈಪೋಟಿ ನೆಡೆಯುತ್ತಿದೆ. ಜೆಡಿಎಸ್ ನಿಂದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈ ಬಾರಿಯೂ ಜೆಡಿಎಸ್ ಟಿಕೆಟ್ ನೀಡುವುದು ಖಚಿತವಾಗಿದೆ. ಅವರು ಮತ್ತೊಮ್ಮೆ ಆರಿಸಿ ಬರಲು ತೆರೆಮರೆಯಲ್ಲಿ ಕಸರತ್ತು ಮಾಡಿಕೊಂಡು ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯ ಪಂಚರತ್ನ ಯಾತ್ರೆಯ ಎಫೆಕ್ಟು ಇವರಿಗೆ ಕೈ ಕೊಡುವುದೇ ಎಂದು ಕಾದು ನೋಡೋಣ.

ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ಇದೆ. ಆ ಪಕ್ಷದಿಂದ ಜಿ.ಹಂಪಯ್ಯ ನಾಯಕ, ಶರಣಪ್ಪ ನಾಯಕ ಗುಡದಿನ್ನಿ, ರಾಜ ವಸಂತ್ ನಾಯಕ, ದೇವದುರ್ಗದ ಮಾಜಿ ಸಂಸದರಾದ ಬಿ.ವಿ.ನಾಯಕ ಮುಂತಾದವರು ತಮ್ಮದೇ ಆದ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬ ಗುಟ್ಟನ್ನು ಬಿಟ್ಟುಕೊಡದೆ, ಆಕಾಂಕ್ಷಿಗಳನ್ನು ತುದಿಕಾಲಮೇಲೆ ನಿಲ್ಲುವಂತೆ ಮಾಡಿದೆ. ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕರಾದ ಗಂಗಾಧರ ನಾಯಕ, ಮಾನಪ್ಪ ನಾಯಕ, ಮ್ಯಾಕಲ್ ಅಯ್ಯಪ್ಪ ನಾಯಕ ಸೇರಿದಂತೆ ಹಾಲಿ ಸಚಿವರಾದ ಶ್ರೀರಾಮುಲು ಹಾಗೂ ದೇವದುರ್ಗ ಶಾಸಕರಾದ ಶಿವನಗೌಡ ನಾಯಕ ಅವರು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಮ್ ಅದ್ಮಿ ಪಕ್ಷದಿಂದ ರಾಜ ಶ್ಯಾಮ್ ಸುಂದರ್ ನಾಯಕ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇನ್ನು ಜನಾರ್ದನ ರೆಡ್ಡಿಯ ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯು ಕೂಡ ಕಣದಲ್ಲಿ ಇರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ ಡಾ.ತನುಶ್ರೀ ಕೂಡ ಕಾಂಗ್ರೆಸ್ ಟಿಕೆಟ್ ಗಾಗಿ ಹರಸಾಹಸ ಪಡುತ್ತಿರುವುದು ಗುಟ್ಟಾಗಿ ಏನು ಉಳಿದಿಲ್ಲ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಕೊಡದಿದ್ದರೆ ಹಿಂದಿನಂತೆ; ಮುಂದೆಯೂ ಪಕ್ಷೇತರರಾಗಿ ಸ್ಪರ್ಧಿಸುವುಸು ನಿಶ್ಚಿತ.

ಈ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಬಿಜೆಪಿಯಿಂದ ಶರಣಪ್ಪ ನಾಯಕ, ಜೆಡಿಎಸ್ ನಿಂದ ರಾಜಾ ವೆಂಕಟಪ್ಪ ನಾಯಕ, ಪಕ್ಷೇತರ ಅಭ್ಯರ್ಥಿ ಎಂ.ಈರಣ್ಣನವರ ಸೊಸೆ ಡಾ.ತನುಶ್ರೀ ಅವರ ಮದ್ಯ ತೀವ್ರ ಸ್ವರೂಪದ ಪೈಪೋಟಿ ಇತ್ತು. ಆದರೆ ಎಲ್ಲವನ್ನು ಹಿಮ್ಮೆಟ್ಟಿಸಿ ಗೆದ್ದ ನಿಂತವರು ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ. ಆದರೇ ಆಗಿನ ಪರಿಸ್ಥಿತಿಯೇ ಬೇರೆಯದಾಗಿತ್ತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಎಂ.ಈರಣ್ಣನವರು ತಮ್ಮ ಮಡದಿಯನ್ನು ಅಧ್ಯಕ್ಷೆಯಾಗಿ ಮಾಡಲು ಶತಃ ಪ್ರಯತ್ನ ಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರು ಜಿಲ್ಲಾ ಮುಖಂಡರು ಅದಕ್ಕೆ ಎಳ್ಳು ನೀರು ಬಿಟ್ಟು, ರಾಜಕೀಯ ಗಂದ ಗಾಳಿ ಗೊತ್ತಿಲ್ಲದ ಬಿಜೆಪಿ ಪಕ್ಷದ ಅದಿ ವೀರಲಕ್ಷ್ಮಿ ಎನ್ನುವ ಅಭ್ಯರ್ತಿಯನ್ನು ತಂದು ವಾಮ ಮಾರ್ಗದಲ್ಲಿ ಗೆಲ್ಲಿಸಿಕೊಂಡರು. ಇದರಿಂದ ಕೆಂಡಾಮಂಡಲರಾದ ಎಂ.ಈರಣ್ಣ, ಅಧ್ಯಕ್ಷರ ಚುನಾವಣೆಯಲ್ಲಿ ಕುತಂತ್ರ ಮಾಡಿದ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಕ್ಕ ಪಾಠವನ್ನು ಕಲಿಸಬೇಕೆನ್ನುವ ಜಿದ್ದಿಗೆ ಬಿದ್ದು, ಸೊಸೆ ಡಾ.ತನುಶ್ರೀಯನ್ನು ಪಕ್ಷೇತರ ಅಭ್ಯರ್ತಿಯಾಗಿ ಕಣಕ್ಕೆ ಇಳಿಸಿ, ಕಾಂಗ್ರೆಸ್ ಸೋಲಿಸುವಲ್ಲಿ ಯಶಶ್ವಿಯಾದರು. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಗೆಲುವು ಸುಲುಭವಾಗಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಲ್ಕನೇ ಸ್ಥಾನಕ್ಕೆ ಕಳುಹಿಸಿದ ಕೀರ್ತಿ ಎಂ.ಈರಣ್ಣನವರಿಗೆ ಸಲ್ಲುತ್ತದೆ.

ಎಂ.ಈರಣ್ಣ

ಕಳೆದ ಬಾರಿ ನೆಡದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಜೆಡಿಎಸ್ ನಿಂದ ರಾಜ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಮೊದಲಿಗೆ ಮಾನಪ್ಪ ನಾಯಕಗೆ ಟಿಕೆಟ್ ಘೋಷಿಸಿ, ನಂತರ ಶರಣಪ್ಪ ನಾಯಕ ಗುಡದಿನ್ನಿ ಅವರಿಗೆ ನೀಡಲಾಯಿತು. ಶರಣಪ್ಪ ನಾಯಕ ಈಗ ಕಾಂಗ್ರೆಸ್ ನಲ್ಲಿ ಇದ್ದಾರೆ. ಮುಂಬರುವ ಚುನಾವಣೆಯಲ್ಲಿ ಎಂ.ಈರಣ್ಣ ಹಾಗೂ ಅವರ ಸೊಸೆ ಡಾ.ತನುಶ್ರೀಯ ಪಾತ್ರ ನಿರ್ನಾಯಕವಾಗಿರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಕಳೆದ ಬಾರಿ ಇದ್ದಂತ ವಾತವಾರಣ ಈಗಿಲ್ಲ. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಇದರಿಂದಾಗಿ ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ಯಾಕ್ಷ ಪ್ರಶ್ನೆಯಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಗೊಂದಲವಿದೆ. ಇವರೆಡರ ಮದ್ಯ ಎಂ.ಈರಣ್ಣನವರ ನೆಡೆ ಗುಪ್ಪವಾಗಿದೆ. ಹಾಗಾದರೆ ಗೆಲ್ಲುವ ಅಭ್ಯರ್ತಿ ಯಾರು ಎಂಬುದು ರಾಯಚೂರಿನಲ್ಲಿ ಮಾತ್ರವಲ್ಲ ಮಾನ್ವಿಯಲ್ಲೂ ಪ್ರತಿಧ್ವನಿಸುತ್ತಿದೆ.

Tags: Election 2023Karnataka Assembly Election 2023ManviManvi JDSManvi MLANeermanviRaichurRaja Venkatappa Nayak
Previous Post

ಕರ್ನಾಟಕ ಮುಸ್ಲಿಮ್ ಯುನಿಟಿಗೆ ಭರವಸೆಯ ನಾಯಕರು!

Next Post

ಆದಿವಾಸಿ ಜನರ ಆಕ್ರಂದನದ ಸುತ್ತ ಗೌಳಿ ಸಂಚಾರ!

Dynamic Leader

Next Post

ಆದಿವಾಸಿ ಜನರ ಆಕ್ರಂದನದ ಸುತ್ತ ಗೌಳಿ ಸಂಚಾರ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS