• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಈ ವಾರ ತೆರೆಗೆ ‘ಕಡಲತೀರದ ಭಾರ್ಗವ’ 

by Dynamic Leader
02/03/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ.ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್.

ಈ ಕುರಿತು ಮಾತನಾಡಿದ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು, ಡಾ.ಶಿವರಾಮ ಕಾರಂತರಿಗೂ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಅವರಿಗೆ ಧಕ್ಕೆ ತರುವಂತಹ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗಾಗಲೇ ಚಿತ್ರವನ್ನು ಹಲವರಿಗೆ ತೋರಿಸಿದ್ದೇವೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ. ಶೀರ್ಷಿಕೆಗೆ ನ್ಯಾಯ ಸಲ್ಲಿಸಿದ್ದೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ’ ಪನ್ನಗ ಸೋಮಶೇಖರ್.

 

‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು. ‘ಚಿತ್ರದ ಟ್ರೇಲರ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ನೋಡಿದವರೆಲ್ಲ, ಬಹಳ ಗ್ರಿಪ್ಪಿಂಗ್ ಆಗಿದೆ, ಕಥೆ ಗೊತ್ತಾಗುತ್ತಿಲ್ಲ, ಹೊಸಬರೇ ಸೇರಿ ಈ ಚಿತ್ರ ಮಾಡಿದ್ದು ಎಂದನಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಾಳೆ ಚಿತ್ರ ನೋಡುವ ಪ್ರೇಕ್ಷಕರು ಸಹ ಇದೇ ಅಭಿಪ್ರಾಯಪಟ್ಟರೆ ನಮ್ಮ ಶ್ರಮ ಸಾರ್ಥಕ’ ಎನ್ನುತ್ತಾರೆ ವರುಣ್.

ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಅವರ ಸಂಬಂಧಿಯೂ ಆದ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ. ‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್.ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ.ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

Tags: Dr.Shivarama KarantKadala Theerada Bhargavaಕಡಲತೀರದ ಭಾರ್ಗವಡಾ.ಶಿವರಾಮ ಕಾರಂತ್
Previous Post

ಚುನಾವಣಾ ಆಯೋಗವು ಒಂದು ಬೋಗಸ್ ಸಂಸ್ಥೆ! ಉದ್ಧವ್ ಠಾಕ್ರೆ

Next Post

ಟ್ರೇಲರ್ ಮೂಲಕ ಗಮನ ಸೆಳೆದ “ಚೌಕಾಬಾರ” ಮಾರ್ಚ್ 10 ರಂದು ತೆರೆಗೆ!

Next Post

ಟ್ರೇಲರ್ ಮೂಲಕ ಗಮನ ಸೆಳೆದ "ಚೌಕಾಬಾರ" ಮಾರ್ಚ್ 10 ರಂದು ತೆರೆಗೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
edit post
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
edit post
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025
edit post
ಹೆಚ್ಚು ಬಳಕೆದಾರರು ಈಗ ChatGPT ಯನ್ನು ಬಳಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, OPENAI CEO ಸ್ಯಾಮ್ ಆಲ್ಟ್ಮನ್ (sam altman), ChatGPTಯಲ್ಲಿ ಹೆಚ್ಚು ನಂಬಿಕೆ ಇಡುವುದರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

CHATGPT ಅನ್ನು ಸಂಪೂರ್ಣವಾಗಿ ನಂಬಬೇಡಿ: OPENAI ಅಧ್ಯಕ್ಷ Sam Altman ಬಳಕೆದಾರರಿಗೆ ಎಚ್ಚರಿಕೆ!

03/07/2025

Recent News

edit post
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
edit post
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
edit post
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025
edit post
ಹೆಚ್ಚು ಬಳಕೆದಾರರು ಈಗ ChatGPT ಯನ್ನು ಬಳಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, OPENAI CEO ಸ್ಯಾಮ್ ಆಲ್ಟ್ಮನ್ (sam altman), ChatGPTಯಲ್ಲಿ ಹೆಚ್ಚು ನಂಬಿಕೆ ಇಡುವುದರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

CHATGPT ಅನ್ನು ಸಂಪೂರ್ಣವಾಗಿ ನಂಬಬೇಡಿ: OPENAI ಅಧ್ಯಕ್ಷ Sam Altman ಬಳಕೆದಾರರಿಗೆ ಎಚ್ಚರಿಕೆ!

03/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS