• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಭಾರತದ ಆರ್ಥಿಕತೆ ಕುಸಿತ: ರಘುರಾಮ್ ರಾಜನ್ ಎಚ್ಚರಿಕೆ!

by Dynamic Leader
06/03/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್, ಸಂಪಾದಕರು

ಭಾರತದ ಆರ್ಥಿಕ ಬೆಳವಣಿಗೆ ಕುಸಿತದ ಹಾದಿಯಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ. ಅವರು ಪಿಟಿಐಗೆ ನೀಡಿರುವ ಇಮೇಲ್ ಸಂದರ್ಶನದಲ್ಲಿ, ‘ದೇಶದಲ್ಲಿ ಖಾಸಗಿ ಹೂಡಿಕೆಯ ಕೊರತೆ; ಹೆಚ್ಚುತ್ತಿರುವ ಬಡ್ಡಿದರಗಳು; ಅಂತಾರಾಷ್ಟ್ರೀಯ ಆರ್ಥಿಕ ಹಿಂಜರಿತದಿಂದಾಗಿ, ಭಾರತವು 1950 ರಿಂದ 1980ರ ಅವಧಿಯಲ್ಲಿದ್ದ ಅತ್ಯಂತ ಕಡಿಮೆ (ಶೇ.4 ಕ್ಕಿಂತ ಕಡಿಮೆ) ಆರ್ಥಿಕ ಬೆಳವಣಿಗೆ ದರಕ್ಕೆ ತಳ್ಳಲ್ಪಡುವ ಅಪಾಯದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.4.4ಕ್ಕೆ ಇಳಿಕೆಯಾಗಿದೆ. ಕಳೆದ ಕೆಲವು ತ್ರೈಮಾಸಿಕಗಳಲ್ಲಿ, ಆರ್ಥಿಕ ಅಂಕಿಅಂಶಗಳು ಕೇವಲ ಕುಸಿತವನ್ನೇ ತೋರಿಸುತ್ತಿದೆ. ಖಾಸಗಿ ವಲಯವು ಹೊಸ ಹೂಡಿಕೆಯಲ್ಲಿ ಆಸಕ್ತಿ ತೋರಿಸುತ್ತಿಲ್ಲ.

ಇದರ ಮಧ್ಯೆ ಆರ್‌ಬಿಐ ಕೂಡ ನಿರಂತರವಾಗಿ ಬಡ್ಡಿ ದರವನ್ನು ಏರಿಸುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಜಾಗತಿಕ ಆರ್ಥಿಕತೆಯು ಆರ್ಥಿಕ ಹಿಂಜರಿತವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಇದರ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಚೇತರಿಕೆ ಕಾಣುವುದು ಅಸಾಧ್ಯವೆಂಬುದು ನನ್ನ ಅಭಿಪ್ರಾಯವಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಎಷ್ಟಿರುತ್ತದೆ ಎಂಬುದು ಈಗಿರುವ ದೊಡ್ಡ ಪ್ರಶ್ನೆಯಾಗಿದೆ. ಕೇಂದ್ರ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸಲು ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮದಲ್ಲಿ ಸಾಕಷ್ಟು ಹಣವನ್ನು ಹೂಡಿಕೆ ಮಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿಸಲು ಎಷ್ಟು ಹಣಕಾಸಿನ ಹೂಡಿಕೆ ಬೇಕು ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಹೂಡಿಕೆಗೆ ಸೂಕ್ತವಾದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯಲ್ಲಿ ಕಡಿಮೆಯಿದೆ. ಆದ್ದರಿಂದ, ಇದು ನಿರೀಕ್ಷಿತ ಫಲಿತಾಂಶವನ್ನು ನೀಡುವುದಿಲ್ಲ.

ಸರ್ಕಾರದ ವಕ್ತಾರರು ಭಾರತದಿಂದ ಮೊಬೈಲ್ ಫೋನ್ ರಫ್ತು ಹೆಚ್ಚಳವನ್ನು ಯೋಜನೆಯ ಯಶಸ್ಸಿನ ಉದಾಹರಣೆಯಾಗಿ ಉಲ್ಲೇಖಿಸಬಹುದು. ಆದರೆ ಪ್ರತಿ ಹ್ಯಾಂಡ್‌ಸೆಟ್‌ಗೂ ಭಾರತವು ತಯಾರಕರಿಗೆ ವಿಭಿನ್ನ ರೀತಿಯಲ್ಲಿ ಸಬ್ಸಿಡಿ ನೀಡುತ್ತಿದೆ ಎಂಬುದನ್ನು ನೆನಪಿಸಿಕೊಳ್ಳಬೇಕು. ಪ್ರಪಂಚದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳೆಲ್ಲ ಈಗ ಸೇವಾ ವಲಯವನ್ನು ಅವಲಂಬಿಸಿವೆ. ಇದರಲ್ಲಿ ಸಾರಿಗೆ, ಪ್ರವಾಸೋದ್ಯಮ, ಚಿಲ್ಲರೆ ವ್ಯಾಪಾರ, ವಸತಿ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಮಧ್ಯಂತರ ಕೌಶಲ್ಯ ಹೊಂದಿರುವವರಿಗೆ ಹೆಚ್ಚಿನ ಉದ್ಯೋಗಗಳು ಲಭ್ಯವಿರುತ್ತವೆ. ಅದಾನಿ-ಹಿಂಡೆನ್‌ಬರ್ಗ್ ನಂತಹ ಪ್ರಕರಣಗಳು ಸರ್ಕಾರ ಮತ್ತು ಉದ್ಯಮದ ನಡುವಿನ ಪರೋಕ್ಷ ಸಂಬಂಧವನ್ನು ಕೊನೆಗೊಳಿಸಲು ಸಹಾಯ ಮಾಡಬಹುದು. ಆದರೆ ಈ ವಿಚಾರದಲ್ಲಿ ವಿದೇಶದಿಂದ ನಕಲಿ ಕಂಪನಿಗಳ ಮೂಲಕ ಹೂಡಿಕೆ ಮಾಡಿರುವ ಆರೋಪದ ಬಗ್ಗೆ ಸೆಬಿ ತನಿಖೆ ನಡೆಸದಿರುವುದು ಅಚ್ಚರಿಯನ್ನು ಮೂಡಿಸಿದೆ’. ಎಂದು ಹೇಳಿದ್ದಾರೆ.

Amid the Adani row, former Reserve Bank of India (RBI) Governor Raghuram Rajan asked why markets regulator SEBI did not get to the bottom of the issues that were raised by US-based short-seller Hindenburg research. He also questioned why SEBI didn’t get in touch with the agency if it needed help from probing agencies.

“Why has SEBI not yet got to the bottom of the ownership of those Mauritius funds which have been holding and trading Adani stock? Does it need help from the investigative agencies?” news agency PTI quoted Rajan as asking.

Tags: adaniHindenburgPTIRaghuram RajanRBISEBIಅದಾನಿಆರ್ ಬಿಐಪಿಟಿಐರಘುರಾಮ್ ರಾಜನ್ಸೆಬಿಹಿಂಡೆನ್‌ಬರ್ಗ್
Previous Post

ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪರ ಪ್ರತಿಪಕ್ಷಗಳು ಬ್ಯಾಟಿಂಗ್!

Next Post

ವಿರಾಟ್ ಕೊಹ್ಲಿಯನ್ನು ಹೊಗಳಿದ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್!

Next Post

ವಿರಾಟ್ ಕೊಹ್ಲಿಯನ್ನು ಹೊಗಳಿದ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
edit post
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
edit post
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
edit post
ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವ ಬೇಡಿಕೆಗಳನ್ನು ಆರೆಸ್ಸೆಸ್ ಪರಿವಾರ ಸಂಸ್ಥೆಗಳು ಇನ್ನೂ ಮಾಡುತ್ತಲೇ ಇವೆ.

ಆರ್‌ಎಸ್‌ಎಸ್ ಎಂದಿಗೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ: ಕಾಂಗ್ರೆಸ್ ಆರೋಪ!

27/06/2025

Recent News

edit post
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
edit post
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
edit post
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
edit post
ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವ ಬೇಡಿಕೆಗಳನ್ನು ಆರೆಸ್ಸೆಸ್ ಪರಿವಾರ ಸಂಸ್ಥೆಗಳು ಇನ್ನೂ ಮಾಡುತ್ತಲೇ ಇವೆ.

ಆರ್‌ಎಸ್‌ಎಸ್ ಎಂದಿಗೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ: ಕಾಂಗ್ರೆಸ್ ಆರೋಪ!

27/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS