• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

2,000 ರೂಪಾಯಿ ನೋಟು ಚಲಾವಣೆಯಲ್ಲಿಲ್ಲ; ಚಲಾವಣೆಯಲ್ಲಿದೆ! ಜನರ ಪ್ರತಿಕ್ರಿಯೆ ಏನು?

by Dynamic Leader
23/03/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ದೇಶದಲ್ಲಿ 500 ರೂಪಾಯಿ ನೋಟುಗಳಿಗಿಂತ 2000 ರೂಪಾಯಿ ನೋಟುಗಳೇ ಚಲಾವಣೆಯಲ್ಲಿದೆ ಎಂದು, ರಿಸರ್ವ್ ಬ್ಯಾಂಕ್ ಲೆಕ್ಕಾಚಾರದ ಪ್ರಕಾರ ರೂ.27.05 ಲಕ್ಷ ಕೋಟಿ 2,000 ನೋಟುಗಳು ಚಲಾವಣೆಯಲ್ಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2,000 ರೂಪಾಯಿ ನೋಟುಗಳನ್ನು ಏಕೆ ಮುದ್ರಿಸಲಾಯಿತು? ಕಪ್ಪುಹಣ ತೊಲಗಿಸಲು ‘ನೋಟು ರದ್ದತಿ’ ಎಂಬ ಹೆಸರಿನಲ್ಲಿ ಡಿಸೆಂಬರ್ 2016ರಲ್ಲಿ, 500 ಮತ್ತು 1000 ರೂಪಾಯಿಗಳನ್ನು ಅಮಾನ್ಯಗೊಳಿಸಿ ಹೊಸ ನೋಟುಗಳನ್ನು ಪರಿಚಯಿಸಲಾಯಿತು. 20, 50, 100 ಮತ್ತು 2,000 ಹೊಸ ನೋಟುಗಳನ್ನು ಚಲಾವಣೆಗೆ ತರಲಾಯಿತು. ಇದು ಕೇಂದ್ರ ಸರ್ಕಾರ ಹೇಳುವ ಕಾರಣ.

Nirmala Seetharaman

ಪಿಚ್ಚೈಕಾರನ್ ಎಂಬ ತಮಿಳು (ಭಿಕ್ಷುಕ) ಚಿತ್ರದ ಒಂದು ದೃಶ್ಯದಲ್ಲಿ, ಎಫ್.ಎಂ.ರೇಡಿಯೋ ಲೈವ್ ಕಾರ್ಯಕ್ರಮಕ್ಕಾಗಿ ಭಿಕ್ಷುಕನೊಬ್ಬನು ನೀಡುವ ಸಂದರ್ಶನದಲ್ಲಿ, ‘ಭಾರತದಲ್ಲಿ ಬಡತನವನ್ನು ತೊಡೆದುಹಾಕಲು ನಿಮ್ಮ ಆಲೋಚನೆ ಏನು’ ಎಂದು ಕೇಳುತ್ತಾರೆ. ಅದಕ್ಕೆ ಆತನು ‘ಭಾರತದಲ್ಲಿ ಬಡತನವನ್ನು ತಪ್ಪಿಸಲು ಇರುವ ಏಕೈಕ ಮಾರ್ಗವೆಂದರೆ 500 ರೂಪಾಯಿ ಮತ್ತು 1000 ರೂಪಾಯಿ ನೋಟುಗಳನ್ನು ರದ್ದುಗೊಳಿಸಬೇಕು. ನಮ್ಮ ದೇಶದ ಬಡತನಕ್ಕೆ ಮುಖ್ಯ ಕಾರಣವಾಗಿರುವುದು ಭ್ರಷ್ಟಾಚಾರ, ಹಾಗೂ ತೆರಿಗೆ ವಂಚನೆ. ಈ ರೀತಿ ಅಕ್ರಮವಾಗಿ ಗಳಿಸಿ ಬಚ್ಚಿಟ್ಟಿರುವುದೆಲ್ಲ ಬರೀ 500, 1000 ರೂಪಾಯಿ ದೊಡ್ಡ ನೋಟುಗಳನ್ನೇ. 1000 ರೂಪಾಯಿ ನೋಟಾಗಿದ್ದರೆ, 100 ಕೋಟಿ ಕೂಡ ಎರಡು ದೊಡ್ಡ ಸೂಟ್ಕೇಸ್ಗಳಲ್ಲಿ ಸಂಗ್ರಹಿಸಿಡಬಹುದು. ಅದೇ 100 ಅಥವಾ 50 ರೂಪಾಯಿಯಾಗಿದ್ದರೆ ದೊಡ್ಡ ಮನೆಯೆ ಬೇಕು’ ಎಂದು ಹೇಳುತ್ತಾರೆ.

ಪಿಚ್ಚೈಕಾರನ್ ತಮಿಳು (ಭಿಕ್ಷುಕ) ಚಿತ್ರದ ಒಂದು ದೃಶ್ಯ

ಈ ವಿಚಾರವನ್ನು ಸರಿಯಾಗಿ ಅರ್ಥ ಮಾಡಿಕೊಂಡ ಮೋದಿ ಸರ್ಕಾರ ಅದನ್ನು ಕಾರ್ಯರೂಪಕ್ಕೆ ತರಲು ಆರಂಭಿಸಿತು. 10, 20, 50, 100, 2,000 ಹೊಸ ನೋಟುಗಳನ್ನು ಮುದ್ರಿಸಿತು. “10, 20, 50, 100, 200 ರೂಪಾಯಿ ನೋಟುಗಳೆಲ್ಲ ಬಡವರಿಗಾಗಿ. ಆದರೆ, 2000 ರೂಪಾಯಿ ನೋಟು ಇದೆ ನೋಡಿ ಅದು ಯಾರಿಗೆಂದು ಗೊತ್ತಿಲ್ಲ” ಎಂದು ಹೇಳುತ್ತಾರೆ ತರಕಾರಿ ವ್ಯಾಪಾರಿ  ಕೃಷ್ಣಪ್ಪ.

ರಿಸರ್ವ್ ಬ್ಯಾಂಕ್ ಪ್ರಕಾರ ರೂ.27.05 ಲಕ್ಷ ಕೋಟಿ 2,000 ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿ ಅಷ್ಟೊಂದು ನೋಟುಗಳು ಚಲಾವಣೆಯಲ್ಲಿ ಇದೆ ಎಂದರೆ, ಅದು ಜನರ ಬಳಿಯೇ ಇರಬೇಕು. ಆದರೆ ಜನರು ಹೇಳುವ ಉತ್ತರವೇ ಬೇರೆಯದಾಗಿದೆ. “ನೋಟು ಅಮಾನ್ಯೀಕರಣ ಗೊಂಡಾಗ ನೋಡಿದ್ದು, ಅಲ್ಲೊಂದು ಇಲ್ಲೊಂದು ಎಂಬಂತೆ ಎರಡು ವರ್ಷಗಳ ಹಿಂದೇ ನೋಡಿದ್ದೆ. ಎಟಿಎಂನಲ್ಲಿ ಬರುತ್ತಿತ್ತು ಈಗ ಅಲ್ಲಿಯೂ ಬರುತ್ತಿಲ್ಲ” ಎಂಬುದಾಗಿದೆ. ಹಾಗಾದರೇ 2000 ರೂಪಾಯಿ ನೋಟು ಯಾರ ಬಳಿ ಇದೆ? ಯಾತಕ್ಕಾಗಿ ಮುದ್ರಿಸಿದರೋ; ಯಾರಿಗಾಗಿ ಮುದ್ರಿಸಿದರೋ ಅವರ ಬಳಿಯೇ ಇರುತ್ತದೆ ಎಂಬುದು ತಾನೆ ಇದರರ್ಥ

Tags: DemonetizationNirmala SeetharamanReserve Bankಅಮಾನ್ಯೀಕರಣನಿರ್ಮಲಾ ಸೀತಾರಾಮನ್ರಿಸರ್ವ್ ಬ್ಯಾಂಕ್
Previous Post

ರಂಜಾನ್ 2023: ನಾಳೆಯಿಂದ ಉಪವಾಸ (ರೋಝ) ಆರಂಭ; ಆಚರಣೆಗಳು ಮತ್ತು ಕಾರಣ!

Next Post

ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಮತ್ತೊಂದು ಬಾಂಬ್ ಸಿಡಿಸುವುದಾಗಿ ಇಂದು ಘೋಷಣೆ!

Next Post

ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಮತ್ತೊಂದು ಬಾಂಬ್ ಸಿಡಿಸುವುದಾಗಿ ಇಂದು ಘೋಷಣೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS