• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ನಾಯಕಿಯಾದ ವೀರಪ್ಪನ್​ ಮಗಳು; ‘ಮಾವೀರನ್​ ಪಿಳ್ಳೈ’ ಚಿತ್ರದಲ್ಲಿ ನಟನೆ!

by Dynamic Leader
26/03/2023
in ಸಿನಿಮಾ
0
ನಾಯಕಿಯಾದ ವೀರಪ್ಪನ್​ ಮಗಳು; ‘ಮಾವೀರನ್​ ಪಿಳ್ಳೈ’ ಚಿತ್ರದಲ್ಲಿ ನಟನೆ!
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ದಂತಚೋರ ವೀರಪ್ಪನ್​ ಅವರ ಮಗಳು ಹಾಗೂ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆಯಾಗಿರುವ ವಿಜಯಲಕ್ಷ್ಮಿ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ‘ಮಾವೀರನ್​ ಪಿಳ್ಳೈ’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಇತ್ತೀಚೆಗೆ ಹಾಡುಗಳ ಬಿಡುಗಡೆಯಗಿದೆ.

ಚೆನ್ನೈನ ಪ್ರಸಾದ್​ ಲ್ಯಾಬ್​ನಲ್ಲಿ ನಡೆದ ಈ ಸಮಾರಂಭದಲ್ಲಿ ವೀರಪ್ಪನ್​ ಪತ್ನಿ ಮುತ್ತುಲಕ್ಷ್ಮಿ, ಆಲ್​ ಪೀಪಲ್ಸ್​ ಪೊಲಿಟಿಕಲ್​ ಪಾರ್ಟಿ ಅಧ್ಯಕ್ಷೆ ರಾಜೇಶ್ವರಿ ಪ್ರಿಯಾ, ನಟ ಕೂಲ್​ ಸುರೇಶ್​, ನಿರ್ದೇಶಕ ಪೇರರಸು, ನಿರ್ಮಾಪಕ ಕೆ.ಎನ್.​ಆರ್.​ರಾಜ ಮುಂತಾದವರು ಹಾಜರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ರಾಜ, ‘ಪ್ರತಿ ಸಂಸಾರದಲ್ಲೂ ಕುಡಿತದಿಂದ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತವೆ. ಕುಡಿತದಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದೇವೆ’ ಎಂದು ಹೇಳಿದರು.

ವಿಜಯಲಕ್ಷ್ಮಿ ಅವರಿಗೆ ಬಾಲ್ಯದಿಂದಲೂ ನಟಿಸುವ ಆಸಕ್ತಿ ಇತ್ತಂತೆ. ‘ಮೊದಲಿನಿಂದಲೂ ನಟಿಸುವ ತುಡಿತ ಇತ್ತು. ಈಗ ಅವಕಾಶ ಸಿಕ್ಕಿದೆ. ಕುಡಿತದಿಂದಾಗಿ ಪ್ರತೀ ಮನೆಯಲ್ಲೂ ಸಾಕಷ್ಟು ಮಹಿಳೆಯರು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಅಂಥ ಮಹಿಳೆಯರ ಕುರಿತು ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿದೆ. ಅದೇ ಕಾರಣಕ್ಕೆ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದು ಹೇಳಿದರು.

ಒಂದು ಚಿತ್ರದಲ್ಲಿ ಯಾರು ನಟಿಸಿದ್ದಾರೆ ಅಥವಾ ಚಿತ್ರವನ್ನು ಯಾರು ನಿರ್ದೇಶಿಸಿದ್ದಾರೆ ಎಂಬುದು ಮುಖ್ಯವಲ್ಲ, ಚಿತ್ರದ ಕಥಾವಸ್ತು ಮುಖ್ಯ ಎಂದ ನಿರ್ದೇಶಕ ಪೇರರಸು, ‘ನಮ್ಮ ಚಿತ್ರರಂಗದಲ್ಲಿ ಮುಖ್ಯಮಂತ್ರಿಗಳ ಮಗನೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಾಗೆಯೇ, ವೀರಪ್ಪನ್​ ಮಗಳು ಸಹ ಇದೀಗ ಚಿತ್ರರಂಗಕ್ಕೆ ಬಂದಿದ್ದಾರೆ. ಚಿತ್ರರಂಗ ಎಲ್ಲರನ್ನೂ ಕೈಬೀಸಿ ಕರೆಯುತ್ತಿದೆ. ನಾವು ಸಹ ವಿಜಯಲಕ್ಷ್ಮಿ ಅವರನ್ನು ಬಹಳ ಪ್ರೀತಿಯಿಂದ ಚಿತ್ರರಂಗಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ’ ಎಂದು ವಿಜಯಲಕ್ಷ್ಮಿ ಅವರಿಗೆ ಚಿತ್ರರಂಗಕ್ಕೆ ಸ್ವಾಗತ ಕೋರಿದರು.

‘ಇಂದು ದೊಡ್ಡವರಷ್ಟೇ ಅಲ್ಲ, ಸಣ್ಣ ಮಕ್ಕಳು ಸಹ ಕುಡಿಯುವ ವೀಡಿಯೋಗಳು ಬಿಡುಗಡೆಯಾಗಿ ಎಲ್ಲರಿಗೂ ಆಘಾತ ತಂದಿದೆ. ಈ ಚಿತ್ರದಲ್ಲಿ ‘ಸಾರಾಯಂ ಅಭಯಂ’ ಎಂಬ ಹಾಡಿದ್ದು, ಕುಡಿತದ ವಿರುದ್ಧದ ಅಭಿಯಾನದಲ್ಲಿ ಬಳಸಿಕೊಳ್ಳಬಹುದು. ಜನ ಮತ ಚಲಾಯಿಸುತ್ತಾರೋ, ಇಲ್ಲವೋ ಎಂಬ ಭಯದಿಂದ ಯಾವ ರಾಜಕಾರಿಣಿಯೂ ಕುಡಿತವನ್ನು ನಿಷೇಧಿಸುವ ಮಾತಾಡುವುದಿಲ್ಲ. ಅವರ ಭಾಷಣಗಳಲ್ಲಿ, ಮಾತುಗಳಲ್ಲಿ ಕುಡಿತ ಕುರಿತು ಪ್ರಸ್ತಾಪವೇ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಸಾರಾಯಿ ತರಹ ಗಾಂಜ ಅಂಗಡಿಗಳು ಪ್ರಾರಂಭವಾದರೂ ಆಶ್ಚರ್ಯವಿಲ್ಲ. ಆಗಾಗ ಆನ್​ಲೈನ್​ ರಮ್ಮಿಯಿಂದ ಜನ ಸಾಯುವ ಬಗ್ಗೆ ಕೇಳುತ್ತಿರುತ್ತೇವೆ. ಆದರೆ, ಕುಡಿತದಿಂದ ಪ್ರತೀ ದಿನ ನೂರಾರು ಜನ ಸಾಯುತ್ತಿದ್ದಾರೆ. ಆನ್​ಲೈನ್​ ರಮ್ಮಿಯನ್ನು ನಿಷೇಧಿಸಬೇಕು ಎನ್ನುವವರು ಕುಡಿತವನ್ನು ನಿಷೇಧಿಸಬೇಕು ಎಂದು ಆಗ್ರಹಿಸುವುದಿಲ್ಲ. ಮಹಿಳೆಯರಿಗೆ ಸಾವಿರಾರು ರೂಪಾಯಿ ಬೇಕಿಲ್ಲ. ಅವರಿಗೆ ಎಸಿ ಬಸ್​ ಬೇಕಿಲ್ಲ. ನೀಟ್​ ಪರೀಕ್ಷೆಗಳು ಮುಖ್ಯವಲ್ಲ. ಜನಸಾಮಾನ್ಯರಿಗೆ ಸಮಸ್ಯೆ ಆಗಿರುವ ಸಾರಾಯಿಯನ್ನು ಮೊದಲು ನಿಷೇಧಿಸಿ’ ಎಂದು ಆಗ್ರಹಿಸಿ.

ಈ ಚಿತ್ರಕ್ಕೆ ಮಂಜುನಾಥ ಅವರ ಛಾಯಾಗ್ರಹಣ ಮತ್ತು ರವಿವರ್ಮ ಸಂಗೀತವಿದೆ. ಪ್ರೇಮ್​ ಹಿನ್ನೆಲೆ ಸಂಗೀತ ಸಂಯೋಜಿಸಿದರೆ, ಜೂಲಿಯನ್​ ಸಂಕಲನಕಾರರಾಗಿ ದುಡಿದಿದ್ದಾರೆ.

Tags: Director PerarasuMaveeran PillaiMuthulakshmiVeerappanನಿರ್ದೇಶಕ ಪೇರರಸುಮಾವೀರನ್​ ಪಿಳ್ಳೈಮುತ್ತುಲಕ್ಷ್ಮೀವೀರಪ್ಪನ್
Previous Post

ವಿಶ್ವ ಮಹಿಳಾ ಬಾಕ್ಸಿಂಗ್: ಚಿನ್ನ ಗೆದ್ದು ದಾಖಲೆ ಮಾಡಿದ ಭಾರತದ ಸ್ವೀಟಿ ಬುರಾ…!

Next Post

ಧರ್ಮ ಪ್ರಚಾರಕ್ಕೆ ಯತ್ನಿಸಿದ ಪಾಲ್ ದಿನಕರನ್: ಶ್ರೀಲಂಕಾದಲ್ಲಿ ಪಾಸ್‌ಪೋರ್ಟ್ ಜಪ್ತಿ!

Dynamic Leader

Next Post
ಧರ್ಮ ಪ್ರಚಾರಕ್ಕೆ ಯತ್ನಿಸಿದ ಪಾಲ್ ದಿನಕರನ್: ಶ್ರೀಲಂಕಾದಲ್ಲಿ ಪಾಸ್‌ಪೋರ್ಟ್ ಜಪ್ತಿ!

ಧರ್ಮ ಪ್ರಚಾರಕ್ಕೆ ಯತ್ನಿಸಿದ ಪಾಲ್ ದಿನಕರನ್: ಶ್ರೀಲಂಕಾದಲ್ಲಿ ಪಾಸ್‌ಪೋರ್ಟ್ ಜಪ್ತಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025

Recent News

edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS