ಮೋದಿಯವರ 'ಪ್ಯಾನ್ ಇಂಡಿಯಾ' ಕನಸಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಬಲ ನೀಡಲಿದೆಯೇ?! » Dynamic Leader
October 22, 2024
ರಾಜಕೀಯ

ಮೋದಿಯವರ ‘ಪ್ಯಾನ್ ಇಂಡಿಯಾ’ ಕನಸಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಬಲ ನೀಡಲಿದೆಯೇ?!

ಡಿ.ಸಿ.ಪ್ರಕಾಶ್ ಸಂಪಾದಕರು

‘ಡಬಲ್ ಇಂಜಿನ್’ ಸರ್ಕಾರದ ಬಗ್ಗೆ ನಿರಂತರವಾಗಿ ಮಾತನಾಡುವ ಪ್ರಧಾನಿ ಮೋದಿ, ಇದೀಗ ಬಿಜೆಪಿಯನ್ನು ‘ಪ್ಯಾನ್ ಇಂಡಿಯಾ’ ಪಕ್ಷ ಎಂದು ಹೆಮ್ಮೆಯಿಂದ ಉಲ್ಲೇಖಿಸಿದ್ದಾರೆ.

ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಆಡಳಿತ ನಡೆಸುತ್ತಿದೆ. ಹಾಗಾಗಿ ಬಿಜೆಪಿ ಮಾತ್ರ “ಪ್ಯಾನ್ ಇಂಡಿಯಾ” ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾರ್ಚ್ 28 ರಂದು ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಹೊಸ ಕಚೇರಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದರು.

ಆಗ ಮಾತನಾಡಿದ ಪ್ರಧಾನಿ ಮೋದಿ, “1984ರ ಕರಾಳ ಕಾಲವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆ ಅವಧಿಯಲ್ಲಿ ನಾವು ಸಂಪೂರ್ಣವಾಗಿ ನಾಶವಾದೆವು. ಆದರೆ ಖಿನ್ನತೆಗೆ ಒಳಗಾಗಲಿಲ್ಲ. ಅದಕ್ಕಾಗಿ ಇತರರನ್ನು ದೂಷಿಸಲಿಲ್ಲ. ಆಗ ನಾವು ಗೆದ್ದಿದ್ದು ಕೇವಲ ಎರಡು ಲೋಕಸಭಾ ಸ್ಥಾನಗಳು. ಈ ಎರಡು ಕ್ಷೇತ್ರಗಳಿಂದ ಆರಂಭವಾದ ನಮ್ಮ ಪಯಣ 303 ಕ್ಷೇತ್ರಗಳನ್ನು ತಲುಪಿದೆ. ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಏಕೈಕ ‘ಪ್ಯಾನ್ ಇಂಡಿಯಾ’ ಪಕ್ಷವಾಗಿದೆ” ಎಂದು ಅವರು ಹೇಳಿದರು. In his speech, the prime minister dwelt on the BJP’s growth from having two Lok Sabha seats in 1984 to 303 in 2019.

ಆ ಸಂದರ್ಭದಲ್ಲಿ ಬಿಜೆಪಿ ಆಡಳಿತ ವೈಭವದ ಬಗ್ಗೆ ಮೋದಿ ಸಾಕಷ್ಟು ಮಾತನಾಡಿದರು. ಆ ವೇಳೆ ಮಾತನಾಡಿದ ಅವರು, “ಬಿಜೆಪಿ ದೂರದರ್ಶನ, ಪತ್ರಿಕೆ, ಟ್ವಿಟರ್, ಯೂಟ್ಯೂಬ್ ಚಾನೆಲ್‌ಗಳಿಂದ ಬಂದ ಪಕ್ಷವಲ್ಲ. ಇದು ಸಂಪೂರ್ಣವಾಗಿ ಕಾರ್ಯಕರ್ತರ ಶ್ರಮದಿಂದ ರೂಪುಗೊಂಡ ಪಕ್ಷವಾಗಿದೆ” ಎಂದು ಮೋದಿ ವ್ಯಾಕ್ಯಾನಿಸಿದರು. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಕೆಳಗಿಳಿಸುವ ವಿಚಾರದಲ್ಲಿ ವಿರೋಧ ಪಕ್ಷಗಳು ದನಿಗೂಡಿಸುತ್ತಿರುವುದನ್ನು ಉಲ್ಲೇಖಿಸಿದ ಮೋದಿ, “ಭ್ರಷ್ಟಾಚಾರ ಒಂದೇ ವೇದಿಕೆಯಲ್ಲಿ ಸೇರುತ್ತಿದೆ” ಎಂದು ಟೀಕಿಸಿದರು. ಆದರೆ ಅದಾನಿ ಸಮೂಹದ ವಂಚನೆಯ ಬಗ್ಗೆ ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಪ್ರಧಾನಿ ಮೋದಿಯವರಿಂದ ಒಂದು ಮಾತೂ ಬರಲಿಲ್ಲ. Those involved in corruption coming on one platform, action against corrupt will continue: PM Narendra Modi

ಪ್ರಸ್ತುತ ಬಿಜೆಪಿ 16 ರಾಜ್ಯಗಳಲ್ಲಿ ಏಕಾಂಗಿಯಾಗಿ ಮತ್ತು ಮೈತ್ರಿಕೂಟ ರಚಿಸಿಕೊಂಡು ಅಧಿಕಾರದಲ್ಲಿದೆ. ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಮೋದಿ ಉಲ್ಲೇಖಿಸಿದರು. ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಬಲಿಷ್ಠ ಪಕ್ಷವಾಗಿದೆ. ಆದರೆ ದಕ್ಷಿಣದಲ್ಲಿ ಐದು ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮುಂತಾದ ರಾಜ್ಯಗಳ ಪೈಕಿ ಕರ್ನಾತಕದಲ್ಲಿ ಮಾತ್ರ ಬಿಜೆಪಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್, ಜನತಾದಳ ನಂತರ ಜಾತ್ಯತೀತ ಜನತಾದಳ ಪಕ್ಷಗಳೇ ಪರ್ಯಾಯ ಆಡಳಿತ ನಡೆಸುತ್ತಿದ್ದ ಕರ್ನಾಟಕದಲ್ಲಿ 2007ರಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರು. ನಂತರ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಸದ್ಯ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. 

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಳೆದ ಕೆಲವು ತಿಂಗಳುಗಳಿಂದ ಆಗಾಗ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ದಾವನಗೆರೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಉಳಿಸಿಕೊಳ್ಳಲು ಜನರು ನಿರ್ಧರಿಸಿದ್ದಾರೆ,” ಎಂದು ಹೇಳಿದರು. ಆದರೆ ಜನರ ಮನಸ್ಸಿನಲ್ಲಿ ಏನಿದೆ ಎಂಬುದು ಮೇ 13ರ ನಂತರವೇ ಗೊತ್ತಾಗಲಿದೆ. 

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಕರ್ನಾಟಕವನ್ನು ಉಳಿಸಿಕೊಂಡರೆ ಮಾತ್ರ ಬಿಜೆಪಿ ಪಕ್ಷವು ಮೋದಿ ಹೇಳುತ್ತಿರುವ ‘ಪ್ಯಾನ್ ಇಂಡಿಯಾ’ ಪಕ್ಷವಾಗಿರುತ್ತದೆ. ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತೃಪ್ತರಾಗಿದ್ದು, ಆಂತರಿಕ ಕಚ್ಚಾಟದಿಂದ ಬಿಜೆಪಿ ಹಿನ್ನಡೆ ಅನುಭವಿಸಲಿದೆ ಎಂದು ವರದಿಗಳು ಹೇಳುತ್ತಿವೆ. ಅಲ್ಲದೇ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ನಾನಾ ರೀತಿಯ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಕಾಂಗ್ರೆಸ್ ಗೆ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂದು ರಾಜಕೀಯ ತಜ್ಞರು ಭವಿಷ್ಯ ನುಡಿದಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಹೇಳುತ್ತಿದೆ. 

ಬಿಜೆಪಿ ವಿರುದ್ಧದ ಸವಾಲುಗಳನ್ನು ಹತ್ತಿಕ್ಕಲು ಕರ್ನಾಟಕ ಬಿಜೆಪಿ ಸದಸ್ಯರಿಗೆ ಅಮಿತ್ ಶಾ ರಣತಂತ್ರ ಹೆಣೆದಿದ್ದಾರೆ. ಆ ತಂತ್ರಗಳು ಯಶಸ್ವಿಯಾದರೆ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ. ಅದೇ ವೇಳೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜಾತ್ಯತೀತ ಜನತಾದಳ ಗಮನಾರ್ಹ ಸ್ಥಾನಗಳನ್ನು ಗೆದ್ದು ಅತಂತ್ರ ವಿಧಾನಸಭೆ ಎದುರಾಗಬಹುದು. ಅಂತಹ ಪರಿಸ್ಥಿತಿ ಬಂದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕುಮಾರಸ್ವಾಮಿ ಯೋಚಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಬಿಜೆಪಿ ಗೆದ್ದು, ಮೋದಿಯವರ ‘ಪ್ಯಾನ್ ಇಂಡಿಯಾ ಬಿಜೆಪಿ’ ಕನಸು ನನಸಾಗುವ ಸಾಧ್ಯತೆಗಳು ಬಹಳ ಕಡಿಮೆಯಿದೆ ಎಂದು ಹೇಳುತ್ತಿದ್ದಾರೆ ರಾಜಕೀಯ ತಜ್ಞರು. ಕಾದು ನೋಡೋಣ. BJP only pan-India party today amidst family-run political outfits: PM Narendra Modi

Related Posts