• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮಾನ್ವಿ ಕಾಂಗ್ರೆಸ್ ನಲ್ಲಿ ಬಿ.ವಿ.ನಾಯಕ ಗದ್ದಲ; ಭಿನ್ನಮತ!

by Dynamic Leader
08/04/2023
in ರಾಜಕೀಯ
0
ಮಾನ್ವಿ ಕಾಂಗ್ರೆಸ್ ನಲ್ಲಿ ಬಿ.ವಿ.ನಾಯಕ ಗದ್ದಲ; ಭಿನ್ನಮತ!
0
SHARES
0
VIEWS
Share on FacebookShare on Twitter

ವರದಿ: ರಾಮು ನೀರಮಾನ್ವಿ

ರಾಯಚೂರು: (ಮಾನ್ವಿ) ರಾಯಚೂರು ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲಿನಂತೆ ಬರುವ ವಿಧಾನ ಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಪ್ರಮುಖ ಪಕ್ಷಗಳ ನಾಯಕರು, ಪಕ್ಷದ ಟಿಕೆಟ್ ಗಾಗಿ ಜಂಗಿ ಕುಸ್ತಿಗೆ ಇಳಿದಿದ್ದಾರೆ. ಎಲ್ಲರೂ, ‘ನಾನೇನು ಕಡಿಮೆಯಿಲ್ಲ; ನಾನೂ ಒಂದು ಕೈ ನೋಡುತ್ತೇನೆ’ ಎನ್ನುವ ಅಹಂನಲ್ಲಿದ್ದಾರೆ. ಕಾಂಗ್ರೆಸ್ ನ ಮೊದಲನೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಯಿತು. ಆದರೆ, ಯಾವುದೇ ಭಿನ್ನಮತ ಕಾಣಿಸಿಕೊಂಡಿಲ್ಲ. ಆದರೆ, ಎರಡನೆಯ ಪಟ್ಟಿ ಬಿಡುಗಡೆ ಅಗಿದ್ದೇ ಅಗಿದ್ದು, ಕಾಂಗ್ರೆಸ್ ನಲ್ಲಿ ಭಿನ್ನಮತ ಮುಗಿಲೆತ್ತರಕ್ಕೆ ಜಿಗಿದಿದೆ. ಇದರಿಂದ ಪಕ್ಷದ ಹೈ ಕಮಾಂಡ್ ಗೆ ತಲೆಬಿಸಿ ಆದಂತಿದೆ. ರಾಜ್ಯದ ಕಾಂಗ್ರೆಸ್ ನಾಯಕರು ಭಿನ್ನಮತ ಶಮನ ಮಾಡಲು ಹರಸಾಹಸ ಪಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ, ಲಿಂಗಸುಗೂರು, ಮಸ್ಕಿ, ಸಿಂಧನೂರು, ಮಾನ್ವಿ, ರಾಯಚೂರು ನಗರ, ರಾಯಚೂರು (ಗ್ರಾಮೀಣ) ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಿದೆ. ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು 1) ಹಂಪಯ್ಯ ನಾಯಕ, 2) ಶರಣಯ್ಯ ನಾಯಕ, 3) ವಸಂತ ನಾಯಕ, 4)ಲಕ್ಷ್ಮಿ ದೇವಿ ನಾಯಕ, 5) ಡಾ.ತನುಶ್ರೀ, 6) ದೇವದುರ್ಗದ ಬಿ.ವಿ.ನಾಯಕ ಇಷ್ಟು ಜನರು ಟಿಕೆಟ್ ಗಾಗಿ ಶತಃ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಜ ವೆಂಕಟಪ್ಪ ನಾಯಕ

ಇದು ಹೈ ಕಮಾಂಡ್ ಗೆ ದೊಡ್ಡ ತಲೆನೋವಾಗಿದೆ. ಹಂಪಯ್ಯ ನಾಯಕ ಮತ್ತು ಶರಣಯ್ಯ ನಾಯಕರ ಮದ್ಯೆ ಟಿಕೆಟ್ ಗೆ ಪೈಪೋಟಿ ನಡೆಯುತ್ತಿರುವ ಹಿನ್ನಲೆಯಲ್ಲೇ ಪಕ್ಕದ ದೇವದುರ್ಗದ ಬಿ.ವಿ.ನಾಯಕರಿಗೆ ಟಿಕೆಟ್ ಖಚಿತವಾಯಿತು ಎಂಬ ಸುದ್ಧಿ ಹೊರಬಿದ್ದಿದೆ. ಇದರಿಂದ ಕೆರಳಿ ಕೆಂಡವಾದ ಮಾನ್ವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ತಮ್ಮ ಹಿಂಬಾಲಕರ ಸಭೆ ಕರೆದು ಬಿ.ವಿ.ನಾಯಕರ ವಿರುದ್ಧ ಬಹಿರಂಗವಾಗಿ ಕೆಂಡ ಕಾರಿದ್ದಾರೆ. ಬೇರೆ ತಾಲೂಕಿನವರಿಗೆ ಟಿಕೆಟ್ ಕೊಟ್ಟರೆ ಸ್ಥಳೀಯ ನಾಯಕರು ಗಡ್ಡ ಬಿಟ್ಟು ಗುಡ್ಡ ಸೇರಬೇಕಾ..? ಎಂದು ಗುಡುಗು ಹಾಕಿದ್ದಾರೆ. ಅದೇ ಸಮಯದಲ್ಲಿ ಕೆಲವೊಂದು ಕಾರ್ಯಕರ್ತರು ‘ನಾವು ಹಂಪಯ್ಯ ನಾಯಕ, ಬಿ.ವಿ.ನಾಯಕರ ರಾಜಕೀಯ ನೋಡಿದ್ದೇವೆ, ಇವರು ಅಧಿಕಾರ ಇಲ್ಲದಾಗ ಒಂದು ರೀತಿ, ಅಧಿಕಾರ ಸಿಕ್ಕಾಗ ಕಾರ್ಯಕರ್ತರನ್ನು ನಡೆಸಿಕೊಳ್ಳುವುದು ಒಂದು ರೀತಿಯಾಗಿದೆ. ಇವರಿಗೆ ಅಧಿಕಾರ ಸಿಕ್ಕಾಗ ಕಾರ್ಯಕರ್ತರನ್ನು  ಕ್ಯಾರೆ ಅನ್ನುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದರ ಫಲವಾಗಿಯೇ 2018ರ ಚುನಾವಣೆಯಲ್ಲಿ ಹಂಪಯ್ಯ ನಾಯಕ ಸೋತು ನಾಲ್ಕನೇ ಸ್ಥಾನಕ್ಕೆ ಹೋಗಿದ್ದು ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಹಂಪಯ್ಯ ನಾಯಕ ಹಾಗೂ ಬಿ.ವಿ.ನಾಯಕ ಇವರಿಬ್ಬರೂ ಬೇಡ, ಇವರಿಬ್ಬರ ರಾಜಕೀಯ ನೋಡಿ ಬೇಸತ್ತಿದ್ದೇವೆ. ಬೇರೆ ಹೊಸ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು.

ಬಿ.ವಿ.ನಾಯಕ

ಇನ್ನೊಂದು ಕಡೆ ಹಂಪಯ್ಯ ನಾಯಕರಿಗೆ ಟಿಕೆಟ್ ಸಿಕ್ಕರೆ, ಡಾ.ತನುಶ್ರೀ ಪಕ್ಷೇತರರಾಗಿ ಸ್ಪರ್ಧಿಸುವುದು ನಿಶ್ಚಿತ. ಹೀಗಿರುವಾಗ ಮತಗಳು ದೃವೀಕರಣವಾಗಿ, ಇಬ್ಬಾಗವಾಗುತ್ತದೆ. ಇದರಿಂದ ಮತ್ತೆ ಜನತಾದಳದ ರಾಜ ವೆಂಕಟಪ್ಪ ನಾಯಕ ಗೆಲ್ಲುವುದು ಸುಲುಭವಾಗುತ್ತದೆ. ಈಗಿನ ಸಂದರ್ಭ ಬೇರೆಯಾದರೂ ಡಾ.ತನುಶ್ರೀ ಪಕ್ಷೇತರರಾಗಿ ಸ್ಪರ್ದಿಸಿದರೆ ಕನಿಷ್ಟ 20 ರಿಂದ 25 ಸಾವಿರ ಮತ ಪಡೆಯುತ್ತಾರೆಂಬ ಲೆಕ್ಕಾಚಾರವಿದೆ. ಹೀಗಿರುವಾಗ ಹಂಪಯ್ಯ ನಾಯಕ ಹಾಗೂ ಶರಣಯ್ಯ ನಾಯಕರ ಗೆಲುವು ಅಷ್ಟು ಸುಲಭವಲ್ಲದ ಮಾತು ಎಂದು ತಾಲ್ಲೂಕು ತುಂಬ ಸುದ್ದಿ ಆಗಿದೆ. ವಲಸಿಗರಾದ ಬಿ.ವಿ.ನಾಯಕರಿಗೆ ಟಿಕೆಟ್ ಕೊಟ್ಟರೆ, ಕಾರ್ಯಕರ್ತರು ಬೇರೆ ಪಕ್ಷಕ್ಕೆ ವಲಸೆ ಹೋಗುತ್ತೆವೆ ಅನ್ನುವ ಸುದ್ದಿ ಗುಟ್ಟಾಗಿ ಉಳಿದಿಲ್ಲ.

ಭಿನ್ನಮತ ಶಮನವಾಗುವುದು ಕನಸಿನ ಮಾತಾಗಿದೆ. ಟಿಕೆಟ್ ವಿಷಯ ಬಹಳ ಶೂಕ್ಷ್ಮವಾಗಿದೆ. ಪಕ್ಷದ ಹೈಕಮಂಡ್ ಸೂಕ್ತ ನಿರ್ದಾರ ತೆಗೆದುಕೊಂಡು ಎಲ್ಲಾ ಕಾರ್ಯಕರ್ತರು ಒಪ್ಪುವಂತ ಸ್ಥಳೀಯ ನಾಯಕರಿಗೆ ಟಿಕೆಟ್ ಕೊಟ್ಟರೆ ನಾವು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ತಿಯನ್ನು ಗೆಲ್ಲಿಸುತ್ತೇವೆ ಎಂಬುದು ಪಕ್ಷದ ನಿಷ್ಟಾವಂತರ ಕೂಗಾಗಿದೆ.

Tags: BV NayakDr.ThanushriDynamic LeaderDynamic Leader MagazineDynamic Leader News PortalManvi CongressManvi ElectionNeermanvi ElectionRaichur Congressಡಾ.ತನುಶ್ರೀನೀರಮಾನ್ವಿ ಚುನಾವಣೆಬಿವಿ ನಾಯಕ್ಮಾನ್ವಿ ಕಾಂಗ್ರೆಸ್ಮಾನ್ವಿ ಚುನಾವಣೆರಾಯಚೂರು ಕಾಂಗ್ರೆಸ್
Previous Post

ರಜೆಯ ದಿನಗಳಲ್ಲೂ ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೋದಿ!?

Next Post

ಹೊರಗೆ ಹಣ್ಣು; ಒಳಗೆ ಕಾಯಿ… ಕಾರ್ಬನ್ ಮಾಗಿದ ಮಾವಿನ ಹಣ್ಣುಗಳನ್ನು ಪತ್ತೆಹಚ್ಚಲು 3 ಸುಲಭ ಮಾರ್ಗಗಳು!

Dynamic Leader

Next Post
ಹೊರಗೆ ಹಣ್ಣು; ಒಳಗೆ ಕಾಯಿ… ಕಾರ್ಬನ್ ಮಾಗಿದ ಮಾವಿನ ಹಣ್ಣುಗಳನ್ನು ಪತ್ತೆಹಚ್ಚಲು 3 ಸುಲಭ ಮಾರ್ಗಗಳು!

ಹೊರಗೆ ಹಣ್ಣು; ಒಳಗೆ ಕಾಯಿ... ಕಾರ್ಬನ್ ಮಾಗಿದ ಮಾವಿನ ಹಣ್ಣುಗಳನ್ನು ಪತ್ತೆಹಚ್ಚಲು 3 ಸುಲಭ ಮಾರ್ಗಗಳು!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS