• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಬಿಜೆಪಿ ಸರ್ಕಾರದಿಂದ ಮೀಸಲಾತಿ ವಂಚಿತರಾದ ಮುಸ್ಲಿಮರ ಕಾನೂನಾತ್ಮಕ ಹೋರಾಟಕ್ಕೆ ಸಿಕ್ಕಿದ ಮೊದಲ ಜಯ!

by Dynamic Leader
13/04/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಒಬಿಸಿ ಕೆಟಗರಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ, ಅವೈಜ್ಞಾನಿಕವಾಗಿ EWS ವರ್ಗದಲ್ಲಿ ಸೇರಿಸಿರುವುದು ಸಾಮಾಜಿಕ ದಬ್ಬಾಳಿಕೆ ಎಂದು ಒತ್ತಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ವ್ಯಕ್ತಿಗಳು ಸಲ್ಲಿಸಿರುವ ಹಲವು ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಸರ್ಕಾರದ ನಡೆಯು ಅಸ್ಥಿರ ಹಾಗೂ ದೋಷಪೂರಿತವಾಗಿರುವಂತೆ ಕಾಣಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಒಬಿಸಿ ಕೆಟಗರಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಏಪ್ರಿಲ್ 18ರವರೆಗೂ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಗುರುವಾರ ಭರವಸೆ ನೀಡಿದೆ.

ನ್ಯಾಯಾಲಯದ ಎದುರು ಹಾಜರುಪಡಿಸಿರುವ ದಾಖಲೆಗಳನ್ನು ಗಮನಿಸಿದರೆ, ಮೇಲ್ನೋಟಕ್ಕೆ ಕರ್ನಾಟಕ ಸರ್ಕಾರದ ನಿರ್ಧಾರವು ‘ಸಂಪೂರ್ಣ ತರ್ಕರಹಿತ ಕಲ್ಪನೆ’ ಎಂಬಂತೆ ಕಾಣಿಸುತ್ತದೆ ಎಂಬುದಾಗಿ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದ ಜನಸಂಖ್ಯೆಯಲ್ಲಿ ಶೇ.13ರಷ್ಟಿರುವ ಮುಸ್ಲಿಂ ಜನಸಂಖ್ಯೆ ವಿರುದ್ಧ ತಾರತಮ್ಯ ಮಾಡುವ ಮೂಲಕ ಸಮಾನತೆಯ ಸಾಂವಿಧಾನಿಕ ತತ್ವವನ್ನು ಹಾಗೂ ಜಾತ್ಯತೀತತೆಯನ್ನು ಕರ್ನಾಟಕ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಅರ್ಜಿದಾರರು ವಾದಿಸಿದರು. ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನ ನಡೆಸಿಲ್ಲ ಅಥವಾ ಯಾವುದೇ ಪ್ರಾಯೋಗಿಕ ದತ್ತಾಂಶ ಸಂಗ್ರಹಿಸಿಲ್ಲ ಎಂದು ಪ್ರತಿಪಾದಿಸಿದರು.

ಈ ನಿರ್ಧಾರವನ್ನು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ, ರಾಜ್ಯದಲ್ಲಿನ ವಿವಿಧ ಸಮುದಾಯಗಳ ಸಮಾಜೋ- ಆರ್ಥಿಕ ಸ್ಥಿತಿಗತಿಯನ್ನು ಪರಿಶೀಲಿಸಿ ಆಯೋಗ ಸಲ್ಲಿಸಿದ್ದ ಶಿಫಾರಸಿನ ಆಧಾರದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿತು. ರಾಜ್ಯದ ಜನಸಂಖ್ಯೆಯಲ್ಲಿ ಒಟ್ಟು ಶೇ.40 ರಷ್ಟಿರುವ ಒಕ್ಕಲಿಗರು ಮತ್ತು ಲಿಂಗಾಯತರ ಪ್ರಮಾಣದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಸಮುದಾಯಗಳು ಅಧಿಕ ಮೀಸಲಾತಿಗೆ ಅರ್ಹವಾಗಿವೆ ಎಂದು ಸರ್ಕಾರ ತಿಳಿಸಿದೆ.

ಆದರೆ ಆಯೋಗದ ವರದಿಯ ಸಿಂಧುತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೋರ್ಟ್, ತನ್ನ ನಿರ್ಧಾರಕ್ಕೆ ಪೂರಕವಾದ ಮತ್ತಷ್ಟು ಪುರಾವೆಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರವು 2013ರಲ್ಲಿ ಜಾರಿಗೊಳಿಸಿದ ಮೀಸಲಾತಿಯಲ್ಲಿ ಮುಸ್ಲಿಮರ ಶೇ.4ರಷ್ಟನ್ನು ಹೇಗೆ ಗುರುತಿಸಲಾಗಿದೆ ಎಂಬ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

1992ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ನಿರ್ಣಾಯಕ ತೀರ್ಪಿನಲ್ಲಿ ನಿಗದಿಪಡಿಸಲಾಗಿದ್ದ ಶೇ.50ರ ಮೀಸಲಾತಿಯ ಮಿತಿಯನ್ನು ಕರ್ನಾಟಕ ಸರ್ಕಾರದ ನಿರ್ಧಾರ ಮೀರಿದೆ ಎಂಬುದನ್ನು ಕೋರ್ಟ್ ಗಮನಿಸಿದೆ. ಈ ಮಿತಿಯನ್ನು ದಾಟಲು ಅಸಾಧಾರಣ ಸನ್ನಿವೇಶ ಹಾಗೂ ನಿರಾಕರಿಸಲಾಗದ ಕಾರಣಗಳು ಅತಿ ಅಗತ್ಯ ಎಂದು ಕೋರ್ಟ್ ತಿಳಿಸಿದೆ.

ಬಳಿಕ ಏಪ್ರಿಲ್ 18ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ, ಕರ್ನಾಟಕ ಸರ್ಕಾರ ಹಾಗೂ ಒಕ್ಕಲಿಗ ಮತ್ತು ಲಿಂಗಾಯತ ಪ್ರತಿನಿಧಿಗಳು ಅರ್ಜಿಗಳಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಹೇಳಿದೆ. ಮುಂದಿನ ಆದೇಶದವರೆಗೂ ಈ ನಿರ್ಧಾರದ ಆಧಾರದಲ್ಲಿ ಯಾವುದೇ ನೇಮಕಾತಿ ಅಥವಾ ಪ್ರವೇಶಾತಿ ನಡೆಸದಂತೆ ನಿರ್ದೇಶನ ನೀಡಿದೆ. ಒಟ್ಟಾರೆಯಾಗಿ ಇದು ಬಿಜೆಪಿ ಸರ್ಕಾರದಿಂದ ಮೀಸಲಾತಿ ವಂಚಿತರಾದ ಮುಸ್ಲಿಮರ ಕಾನೂನಾತ್ಮಕ ಹೋರಾಟಕ್ಕೆ ಸಿಕ್ಕಿದ ಮೊದಲ ಜಯವಾಗಿದೆ. Muslim OBC Reservation: Supreme Court Slams Karnataka Govt For Scrapping 4 percent Quota.

Tags: Dynamic LeaderDynamic Leader News PortalKarnataka MuslimKarnataka Muslim UnityMuslim ReservationSDPI Karnatakaಎಸ್.ಡಿ.ಪಿ.ಐ ಕರ್ನಾಟಕಕರ್ನಾಟಕ ಮುಸ್ಲಿಂಕರ್ನಾಟಕ ಮುಸ್ಲಿಂ ಯುನಿಟಿಮುಸ್ಲಿಮರ ಮೀಸಲಾತಿ
Previous Post

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ಪ್ರಕರಣದಲ್ಲಿ 20 ರಂದು ಆದೇಶ!

Next Post

ಗೌರೀಬಿದನೂರು ತಾಲ್ಲೂಕು ಅಲ್ಪಸಂಖ್ಯಾತರ ಯುವ ಕಾರ್ಯದರ್ಶಿಯಾಗಿ ಅಬ್ಬಾಸ್ ರಜಾ ನೇಮಕ!

Next Post

ಗೌರೀಬಿದನೂರು ತಾಲ್ಲೂಕು ಅಲ್ಪಸಂಖ್ಯಾತರ ಯುವ ಕಾರ್ಯದರ್ಶಿಯಾಗಿ ಅಬ್ಬಾಸ್ ರಜಾ ನೇಮಕ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS