• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಚೆನ್ನೈನಲ್ಲಿ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಪೂರ್ಣಾಕೃತಿಯ ಪ್ರತಿಮೆ ಸ್ಥಾಪನೆ: ವಿಧಾನಸಭೆಯಲ್ಲಿ ಸ್ಟಾಲಿನ್ ಘೋಷಣೆ!

by Dynamic Leader
20/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

“ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರಿಗೆ ದ್ರಾವಿಡ ಮಾಡಲ್ ಸರ್ಕಾರದ ಪರವಾಗಿ ಗೌರವಾರ್ಥ ಘೋಷಣೆಯೊಂದನ್ನು ಮಾಡುತ್ತಿದ್ದೇನೆ” ಎಂ.ಕೆ.ಸ್ಟಾಲಿನ್ 

ಚೆನ್ನೈ: ಸಾಮಾಜಿಕ ನ್ಯಾಯ ದೃಷ್ಟಿ ಮತ್ತು ಸಾಮಾಜಿಕ ನ್ಯಾಯ ಪಯಣದಲ್ಲಿ ಈ ಸರ್ಕಾರ ಯಾವುದೇ ಆಮಿಷ, ರಾಜಿ ಇಲ್ಲದೇ ಕೆಲಸ ಮಾಡುತ್ತಿರುವುದಕ್ಕೆ ಸಾಮಾಜಿಕ ನ್ಯಾಯ ರಕ್ಷಕ ವಿ.ಪಿ.ಸಿಂಗ್ ನೀಡಿದ ಉತ್ಸಾಹವೇ ಕಾರಣ. ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಸ್ಮರಣಾರ್ಥ ಚೆನ್ನೈನಲ್ಲಿ ಪೂರ್ಣ ಪ್ರಮಾಣದ ಪ್ರತಿಮೆಯನ್ನು ಸ್ಥಾಪಿಸಲಾಗುವುದು” ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿಧಾನಸಭೆಯಲ್ಲಿ ನಿಯಮ ಸಂಖ್ಯೆ 110ರ ಅಡಿಯಲ್ಲಿ ಇಂದು ಘೋಷಿಸಿದ್ದಾರೆ.

ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಇದನ್ನು ಉದ್ದೇಶಿಸಿ ಮಾತನಾಡುವಾಗ, “ವಿಶ್ವನಾಥ್ ಪ್ರತಾಪ್ ಸಿಂಗ್ ಅವರು ಉತ್ತರ ಪ್ರದೇಶದ ಅಲಹಾಬಾದ್ ಜಿಲ್ಲೆಯಲ್ಲಿ ದೊಡ್ಡ ಜಮೀನ್ದಾರರಾದ ರಾಜ ದಯಾ ಭಗವತಿ ಪ್ರತಾಪ್ ಸಿಂಗ್ ಅವರಿಗೆ ಜನಿಸಿದರು. ಐಷಾರಾಮಿ ಜೀವನ ಲಭಿಸಿದ್ದರೂ ಅದಕ್ಕೆ ಅಂಟಿಕೊಳ್ಳದೇ ಕಾಲೇಜು ದಿನಗಳಲ್ಲಿ ಗಾಂಧಿ ಚಳವಳಿಗೆ ಸೇರಿಕೊಂಡರು; ಭೂದಾನ ಚಳುವಳಿಯಲ್ಲಿ ಭಾಗವಹಿಸಿದರು. ಅವರು ತಮ್ಮ ಜಮೀನುಗಳನ್ನೇ ಭೂದಾನ ಮಾಡಿದರು.

1969ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಿಂತು ಗೆದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ; ಕೇಂದ್ರ ವಾಣಿಜ್ಯ ಸಚಿವ; ವಿದೇಶಾಂಗ ವ್ಯವಹಾರಗಳ ಸಚಿವ; ಹಣಕಾಸು ಮತ್ತು ರಕ್ಷಣಾ ಸಚಿವ ಮುಂತಾದ ಉನ್ನತ ಸ್ಥಾನಗಳನ್ನು ಅಲಂಕರಿಸಿದರು. ಅವರು ನ್ಯಾಷನಲ್ ಫ್ರಂಟ್ ರಚಿಸಿ 1989ರಲ್ಲಿ ಭಾರತದ ಪ್ರಧಾನ ಮಂತ್ರಿಯಾದರು. ಸನ್ಮಾನ್ಯ ವಿ.ಪಿ.ಸಿಂಗ್ ಅವರು ಕೇವಲ ಹನ್ನೊಂದು ತಿಂಗಳು ಪ್ರಧಾನಿಯಾಗಿದ್ದರೂ ಅವರ ಸಾಧನೆ ಅಪಾರ. ಅದಕ್ಕಾಗಿಯೇ ನಾವು ಈ ವೇದಿಕೆಯಲ್ಲಿ ನಿಂತು ಅವರನ್ನು ಹೊಗಳುತ್ತಿದ್ದೇವೆ.

ಭಾರತದ ಸಂವಿಧಾನವನ್ನು ರಚಿಸಿದಾಗ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿಯನ್ನು ನೀಡಲಾಯಿತು. ಆದರೆ ಹಿಂದುಳಿದ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಿಲ್ಲ. ಇದನ್ನು ಒದಗಿಸಲಿಕ್ಕಾಗಿ ರಚಿಸಲಾದ ಎರಡನೇ ಹಿಂದುಳಿದ ವರ್ಗಗಳ ಆಯೋಗವೇ ಬಿ.ಪಿ. ಮಂಡಲ್ ನೇತೃತ್ವದ ಆಯೋಗ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ 27% ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸು ಮಾಡಿದ ಬಿ.ಪಿ.ಮಂಡಲ್ ವರದಿಯನ್ನು     ಯಥಾವತ್ತಾಗಿ ಜಾರಿಗೊಳಿಸಿದವರು ಸಾಮಾಜಿಕ ನ್ಯಾಯದ ಹರಿಕಾರ ವಿ.ಪಿ.ಸಿಂಗ್.

ಅವರು ಹಿಂದುಳಿದ ಸಮುದಾಯಕ್ಕೆ ಸೇರಿದವರಲ್ಲ; ಬಡ ಕುಟುಂಬದವರೂ ಅಲ್ಲ; ಆದರೆ, ಅದನ್ನು ಮಾಡಿದ್ದು ವಿ.ಪಿ.ಸಿಂಗ್. ಮಂಡಲ್ ಆಯೋಗದ ಶಿಫಾರಸನ್ನು ಜಾರಿಗೆ ತರುವುದಾಗಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ವಿ.ಪಿ.ಸಿಂಗ್ ಘೋಷಿಸಿದಾಗ, ‘ಮುಂದುವರಿದ ಜಾತಿಗೆ ಸೇರಿದವರು ಇದನ್ನು ಮಾಡಲು ಸಾಧ್ಯವಿಲ್ಲ’ ಎಂದು ಸಚಿವರೊಬ್ಬರು ಹೇಳಿದಾಗ, ‘ಇಗೋ, ಈಗಲೇ ದಿನಾಂಕವನ್ನು ಪ್ರಕಟಿಸುತ್ತೇನೆ’ ಎಂದು ಹೇಳಿದ ಗಾಂಭೀರ್ಯತೆಯ ಒಡೆಯ ವಿ.ಪಿ.ಸಿಂಗ್. ಅದುವೇ ಅವರ ಸ್ಥಾನಕ್ಕೆ ಬಿಕ್ಕಟ್ಟಾಯಿತು.   

‘ಕೆಲವೊಮ್ಮೆ ಬದುಕಿಗಿಂತ ಸಾವನ್ನು ಆರಿಸಿಕೊಳ್ಳುವುದೇ ಮೇಲು’ ಎಂದು ಹೇಳಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದವರು ಸ್ವಾಭಿಮಾನಿ ಸೂರ್ಯ ವಿ.ಪಿ.ಸಿಂಗ್. ‘ವಿ.ಪಿ.ಸಿಂಗ್ ಅವರನ್ನು ಬೇಕಾದರೆ ಗಲ್ಲಿಗೇರಿಸಿಕೊಳ್ಳಿ. ಆದರೆ, ದಮನಿತರಿಗೆ ನ್ಯಾಯ ಕೊಡಿಸಿ’ ಎನ್ನುವಷ್ಟರ ಮಟ್ಟಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಹಿಂದುಳಿದ ವರ್ಗಗಳ ಕಲ್ಯಾಣದ ಬಗ್ಗೆ ಕಾಳಜಿ ಹೊಂದಿದ್ದರು.

ಅಧಿಕಾರದಲ್ಲಿದ್ದ 11 ತಿಂಗಳಲ್ಲಿ ಹಿಂದುಳಿದ ವರ್ಗಗಳಿಗೆ 27% ಮೀಸಲಾತಿ; ಮಾಹಿತಿ ಹಕ್ಕು ಕಾಯಿದೆಗೆ ಚಾಲನೆ; ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಕಾರ್ಯಕ್ರಮಕ್ಕೆ ಚಾಲನೆ; ಕೆಲಸ ಮಾಡುವ ಹಕ್ಕನ್ನು ಸಾಂವಿಧಾನಿಕ ಹಕ್ಕನ್ನಾಗಿ ಮಾಡಿದ್ದು; ಚುನಾವಣಾ ಸುಧಾರಣೆಗಳು; ಅಂತರರಾಜ್ಯ ಮಂಡಳಿ; ರಾಷ್ಟ್ರೀಯ ಭದ್ರತಾ ಮಂಡಳಿ; ರೈತರ ಸಮಸ್ಯೆ ಬಗೆಹರಿಸಲು ಮೂರು ಸಮಿತಿಗಳ ರಚನೆ; ದೆಹಲಿಯ ಕೊಳೆಗೇರಿ ನಿವಾಸಿಗಳಿಗೆ ವಸತಿ ಸೌಕರ್ಯ; ಗರಿಷ್ಠ ಚಿಲ್ಲರೆ ಬೆಲೆ (MRP) ಮುದ್ರಿಸಬೇಕು; ಗ್ರಾಹಕರ ರಕ್ಷನೆ ಮುಂತಾದ ಎಲ್ಲವನ್ನೂ ಮಾಡಿ ತೋರಿಸಿದವರು ಮಹಾನ್ ಸಾಧಕ ವಿ.ಪಿ.ಸಿಂಗ್ ಅವರು” ಎಂದು ಹೇಳಿ ಶ್ಲಾಘಿಸಿ ಮಾತನಾಡಿದರು.        

Tags: ChennaiMK StalinStatueVP Singhಎಂ.ಕೆ.ಸ್ಟಾಲಿನ್ಚೆನ್ನೈಪ್ರತಿಮೆವಿ.ಪಿ.ಸಿಂಗ್
Previous Post

ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಿ! ಎಂ.ಕೆ.ಸ್ಟಾಲಿನ್

Next Post

ಗೊಂದಲದ ಗೂಡಾಗಿರುವ ಮಾನ್ವಿಯಲ್ಲಿ ಬಿಜೆಪಿ ಖಾತೆ ತೆರೆಯುವುದೆ…?

Dynamic Leader

Next Post

ಗೊಂದಲದ ಗೂಡಾಗಿರುವ ಮಾನ್ವಿಯಲ್ಲಿ ಬಿಜೆಪಿ ಖಾತೆ ತೆರೆಯುವುದೆ...?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS