• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮಾನ್ವಿಯಲ್ಲಿ ಮುಂದಿನ ಶಾಸಕರು ಯಾರು.? ಒಂದು ರಾಜಕೀಯ ನೋಟ ‌‌‌‌‌

by Dynamic Leader
17/12/2023
in ದೇಶ, ರಾಜ್ಯ
0
0
SHARES
0
VIEWS
Share on FacebookShare on Twitter

ವರದಿ: ರಾಮು ನೀರ ಮಾನ್ವಿ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಉಳಿದಿದೆ. ಮಾನ್ವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಹಂಪಯ್ಯ ನಾಯಕ, ಜೆಡಿಎಸ್ ನಿಂದ ರಾಜಾ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಬಿ.ವಿ.ನಾಯಕ ಹಾಗೂ ಆಮ್ ಆದ್ಮಿಯಿಂದ ರಾಜಾ ಶಾಮಸುಂದರ್ ನಾಯಕ ಮುಂತಾದವರು ಚುನಾವಣೆ ಅಖಾಡದಲ್ಲಿ ಇದ್ದಾರೆ.

ದಿನದಿಂದ ದಿನಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರಚಾರವು ಭರಾಟೆಯಿಂದ ನೆಡೆಯುತ್ತಿದೆ. ಪ್ರಚಾರದಲ್ಲಿ ಯಾವುದೇ ಪಕ್ಷಗಳು ನಾ ಮುಂದೆ ತಾಮುಂದೆ ಅನ್ನುವ ರೀತಿಯಲ್ಲಿ ಪ್ರಚಾರವನ್ನು ಮಾಡುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಜ ವೆಂಕಟಪ್ಪ ನಾಯಕ ಜಯ ಶಾಲಿಯಾಗಿದ್ದರು. ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಡಾ.ತನುಶ್ರೀ, ಮೂರನೆಯ ಸ್ಥಾನದಲ್ಲಿ ಬಿಜೆಪಿಯ ಶರಣಪ್ಪ ನಾಯಕ ಹಾಗೂ ನಾಲ್ಕನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಹಂಪಯ್ಯ ನಾಯಕ ಇದ್ದರು. ಆದರೆ ಈ ಸಾರಿ ಮಾನ್ವಿಯ ಮತದಾರರು ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

ಪ್ರಸ್ತುತ ಜೆಡಿಎಸ್ ಮೊದಲ ಸ್ಥಾನದಲ್ಲಿ ಇದ್ದರೆ, ಎರಡನೆಯದಾಗಿ ಕಾಂಗ್ರೆಸ್ ಇದೆ. ಮೂರನೆಯ ಸ್ಥಾನದಲ್ಲಿ ಬಿಜೆಪಿ ಇದ್ದು, ಎಂದಿನಂತೆ ಎಲ್ಲಾ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಎಡಬಿಡದೆ ನಡೆಯುತ್ತಿದೆ. ಮುಂಜಾನೆ ಒಂದು ಪಕ್ಷದಲ್ಲಿದ್ದರೆ ಮಧ್ಯಾಹ್ನ ಒಂದು ಪಕ್ಷದಲ್ಲಿರುತ್ತಾರೆ. ರಾತ್ರಿಯಲ್ಲಿ ಮತ್ತೊಂದು ಪಕ್ಷದಲ್ಲಿ ಕಂಡುಬರುತ್ತಾರೆ. ಅವರಿಗೆ ಪಕ್ಷ ಸಿದ್ದಾಂತ, ತತ್ವ, ನಿಷ್ಟೆ ಯಾವುದೂ ಇಲ್ಲ. ಆರು ಕೊಟ್ಟರೆ ಅತ್ತೆಯ ಕಡೆ; ಹತ್ತು ಕೊಟ್ಟರೆ ಮಾವನ ಕಡೆ ಅನ್ನುವ ಪರಿಸ್ಥಿತಿ ಇಲ್ಲಿದೆ. ಒಟ್ಟಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಮತದಾರರು ಹಾಗೂ ಕಾರ್ಯಕರ್ತರು ನಾಯಕರ ಇಡುಗಂಟು ಕಡೆ ಕಣ್ಣಿಟ್ಟು ಕಾಯುತ್ತಿದ್ದಾರೆ. ಆದರೆ ಯಾರೂ ಹಣ ಬಿಚ್ಚುತ್ತಿಲ್ಲ ಎಂದು ಕಾರ್ಯಕರ್ತರು ಗೋಳಾಡುತ್ತಿದ್ದಾರೆ. ‘ನಾ ಖಾವುಂಗ ನಾ ಖಾನೆ ದುಂಗಾ’ ಅನ್ನುವ ಪರಿಸ್ಥಿತಿ ಇಲ್ಲಿದೆ. ಇದರಿಂದ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿ ಕೊಂಡಿದ್ದಾರೆ.

ಆದರೆ ಬಿಜೆಪಿಯ ದೇವದುರ್ಗದ ಶಿವನಗೌಡ ನಾಯಕರ ಒಂದು ಮಾತು ಈಗ ಎಲ್ಲಡೆ ವೈರಲ್ ಆಗಿದೆ. ‘ರಾಯಚೂರು ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡುವವರು ಮಾನ್ವಿಯಲ್ಲಿ ಯಾರೂ ಇಲ್ಲ; ದೇವದುರ್ಗದ ನಾವೇ ಬರಬೇಕು’ ಅನ್ನುವ ಮಾತು ಮಾನ್ವಿ ತಾಲೂಕಿನ ಜನತೆಯಲ್ಲಿ ಆಕ್ರೋಷಕ್ಕೆ ಕಾರಣವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿಗೆ ಬಹು ದೊಡ್ಡ ಹೊಡೆತವಾಗಲಿದೆ. ಈ ಮಾತುಗಳಿಂದ ತಾಲೂಕಿನ ಜನತೆ ಕೆಂಡದಂತೆ ಹಾಗಿದ್ದಾರೆ. ಇದರಿಂದಾಗಿ ಬಿಜೆಪಿ ಪಕ್ಷ ಹಿನ್ನಡೆಗೆ ಕಾರಣವಾಗಿದೆ. ಅಂತಿಮವಾಗಿ ಕಾಂಗ್ರೆಸ್, ಜೆಡಿಎಸ್ ಮಧ್ಯೆ ರಣ ಕಾಳಗ ನಡೆಯುವುದು ಬಹುತೇಕ ಖಚಿತವಾಗಿದೆ.

ಕಳೆದ ಭಾರಿ ಪಕ್ಷೇತರರಾಗಿ ಸ್ಪರ್ದಿಸಿದ ಎಂ.ಈರಣ್ಣನವರ ಸೊಸೆ ಡಾ.ತನುಶ್ರೀ, ಮೂವತ್ತೇಳು ಸಾವಿರ ಮತಗಳನ್ನು ತೆಗೆದುಕೊಂಡು ಸೋತಿದ್ದರು. ಇದು ಒಂದು ರೀತಿಯಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಬಹುಮುಖ್ಯ ಕಾರಣವಾಗಿತ್ತು. ನೆನ್ನೆ ನೆಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನೇತ್ರತ್ವದಲ್ಲಿ ಎಂ.ಈರಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಕಾಂಗ್ರೆಸ್‌ನ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಇದರಿಂದ ಕ್ಷೇತ್ರದಲ್ಲಿ ಗೆಲುವು ಯಾರದ್ದು ಎಂಬ ವಿಷಯವು ಗೊಂದಲಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ; ಮನ್ವಿಯ ಪ್ರಜ್ಞಾವಂತ ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

Tags: DynamicDynamic LeaderDynamic Leader MagazineDynamic Leader News PortalManviManvi CongressManvi ElectionManvi MLANeermanviಕಾಂಗ್ರೆಸ್ಜೆಡಿಎಸ್ಬಿ.ವಿ.ನಾಯಕಬಿ.ಹಂಪಯ್ಯ ನಾಯಕಬಿಜೆಪಿಮಾನ್ವಿರಾಜಾ ವೆಂಕಟಪ್ಪ ನಾಯಕರಾಯಚೂರು
Previous Post

ನೀವು ಯುವಕರ ಆತ್ಮಹತ್ಯೆಯನ್ನು ‘ಜೋಕ್’ ಎಂದು ಭಾವಿಸುತ್ತೀರಾ?: ಮೋದಿ ಹೇಳಿದ ಕ್ರೂರ ಹಾಸ್ಯ

Next Post

ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಈ ರಾಜ್ಯದಲ್ಲಿ ರಕ್ಷಣೆ ಇಲ್ಲವೇ?

Next Post

ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಈ ರಾಜ್ಯದಲ್ಲಿ ರಕ್ಷಣೆ ಇಲ್ಲವೇ?

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025

Recent News

edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS