• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕಾಂಗ್ರೆಸ್‌ನ ಉಚಿತ ಕಾರ್ಯಕ್ರಮಗಳನ್ನು ಜಾರಿಗೆ ತರಲು ವರ್ಷಕ್ಕೆ 75,000 ಕೋಟಿ ಬೇಕು: ಇದು ಕಾರ್ಯಸಾಧ್ಯವೇ?

by Dynamic Leader
14/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿತ್ತು. ಈ ಬಾರಿಯ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ನಿನ್ನೆ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಗೆದ್ದು ಏಕ ಬಹುಮತದೊಂದಿಗೆ ಸರ್ಕಾರ ರಚಿಸಲು ಹೊರಟಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಪಕ್ಷ ಹಲವು ಉಚಿತ ಯೋಜನೆಗಳನ್ನು ಘೋಷಿಸಿತ್ತು.

ಅದರಲ್ಲಿ ಪ್ರಮುಖವಾಗಿ 5 ಗ್ಯಾರಂಟಿಗಳನ್ನು ನೀಡಿತ್ತು. ಮಹಿಳೆಯರಿಗೆ ಮಾಸಿಕ ರೂ.2000 ಪ್ರೋತ್ಸಾಹಧನ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಬಡತನ ರೇಖೆಗಿಂತ ಕೆಳಗಿರುವ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ರೂ.3000 ಮತ್ತು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮುಂತಾದ 5 ಗ್ಯಾರಂಟಿಗಳು ವಿಶೇಷವಾದದ್ದು.

ಈ ಉಚಿತ ಕಾರ್ಯಕ್ರಮಗಳು ಕಾಂಗ್ರೆಸ್ ಗೆಲುವಿಗೆ ನೆರವಾದವು ಎಂದರೆ ಅತಿಶಯೋಕ್ತಿಯಲ್ಲ. ಪ್ರಧಾನಿ ಮೋದಿ, ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯ್ ಸೇರಿದಂತೆ ಬಿಜೆಪಿಯ ಮುಖಂಡರು “ಈ ಉಚಿತ ಯೋಜನೆಗಳು ಕಾಂಗ್ರೆಸ್ ನವರ ಸುಳ್ಳು ಭರವಸೆಗಳು” ಎಂದರು. ಆದರೆ, ಕಾಂಗ್ರೆಸ್ ಮುಖಂಡರು ಮನೆ-ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಿಸಿ, ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ ಉಚಿತ ಯೋಜನೆಗಳಿಗೆ ಅನುಮತಿ ನೀಡುವುದಾಗಿ ಭರವಸೆ ನೀಡಿದರು.

ನಂತರ ಬಿಜೆಪಿ ಕೂಡ ಇದೇ ರೀತಿಯ ಉಚಿತ ಭರವಸೆಗಳನ್ನು ನೀಡಿತು. ಪ್ರತಿದಿನ ಅರ್ಧ ಲೀಟರ್ ಹಾಲಿನೊಂದಿಗೆ, ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ ಎಂಬ ಭರವಸೆಯನ್ನೂ ಕೊಟ್ಟಿತು. ಆದರೆ ಫಲಕಾರಿಯಾಗಲಿಲ್ಲ. ಜನತಾ ದಳ (ಎಸ್) ವರ್ಷಕ್ಕೆ 5 ಉಚಿತ ಗ್ಯಾಸ್ ಸಿಲಿಂಡರ್ ಸೇರಿದಂತೆ ಇತರೆ ಉಚಿತಗಳನ್ನು ಘೋಷಿಸಿತು. ಅದುವೂ ಅವರಿಗೆ ಕೈಕೊಡಲಿಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದು ಈಗ ಸರ್ಕಾರ ರಚಿಸಲಿದೆ. ಆದ್ದರಿಂದ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಾಗುವುದೇ? ಅದು ಕಾರ್ಯಸಾಧ್ಯವೇ? ಇದಕ್ಕೆ ಪ್ರತಿ ವರ್ಷ ಬೇಕಾಗುವ ಹಣವೆಷ್ಟು? ಅದರ ಬಗ್ಗೆ ಸ್ವಲ್ಪ ನೋಡೋಣ.

Congress Guarantee

ಅಂದರೆ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲು ವರ್ಷಕ್ಕೆ ಸರಾಸರಿ 25,800 ಕೋಟಿ ಬೇಕಾಗುತ್ತದೆ. ಅದೇ ರೀತಿ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ ಕುಟುಂಬ) ಕಾರ್ಡ್ ಹೊಂದಿರುವವರಿಗೆ ತಿಂಗಳಿಗೆ 2,000 ರೂಪಾಯಿಗಳನ್ನು ಒದಗಿಸಲು ವರ್ಷಕ್ಕೆ ಸರಾಸರಿ 30,000 ಕೋಟಿ ಬೇಕಾಗಬಹುದು. ಏಕೆಂದರೆ ರಾಜ್ಯಾದ್ಯಂತ 1.28 ಕೋಟಿ ಮಹಿಳೆಯರು ಬಿ.ಪಿ.ಎಲ್. ಕಾರ್ಡ್ ಹೊಂದಿದ್ದಾರೆ. ಇವರೆಲ್ಲರಿಗೂ ತಿಂಗಳಿಗೆ 2 ಸಾವಿರ ನೀಡಲು 30 ಸಾವಿರ ಕೋಟಿ ಬೇಕು ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ವಾರ್ಷಿಕ 3 ಸಾವಿರ ಕೋಟಿ ಬೇಕಾಗುತ್ತದೆ ಎಂದು ಊಹಿಸಲಾಗಿದೆ. ಇದಲ್ಲದೇ, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ಮತ್ತು 10 ಕೆಜಿ ಉಚಿತ ಅಕ್ಕಿ ನೀಡಲು ವರ್ಷಕ್ಕೆ 15,000 ಕೋಟಿಯಿಂದ 17,000 ಕೋಟಿಯವರೆಗೆ ಬೇಕಾಗುತ್ತದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಒಟ್ಟಾರೆಯಾಗಿ ಕಾಂಗ್ರೆಸ್ ನೀಡಿರುವ ಈ 5 ಪ್ರಮುಖ ಭರವಸೆಗಳನ್ನು ಈಡೇರಿಸಲು ವರ್ಷಕ್ಕೆ ಅಂದಾಜು 75 ಸಾವಿರ ಕೋಟಿ ರೂಪಾಯಿಗಳು ಬೇಕಾಗಬಹುದು. 2023-24ನೇ ಸಾಲಿನ ಬಜೆಟ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯ್ ಅವರು 3 ಸಾವಿರ ಕೋಟಿಗೆ ಮಂಡಿಸಿದ್ದರು. 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ 1 ಲಕ್ಷದ 28 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದರು. ಕಳೆದ ಬಿಜೆಪಿ ಸರ್ಕಾರದಲ್ಲಿ ಆ ಸಾಲ 3 ಸಾವಿರ ಕೋಟಿ ಮೀರಿತ್ತು.

ಇದರಿಂದಾಗಿ ಕರ್ನಾಟಕ ಸರ್ಕಾರದ ಸಾಲ ಹೆಚ್ಚುತ್ತಲೇ ಇದೆ. ಮತ್ತು ಆ ಸಾಲದ ಮೇಲಿನ ಬಡ್ಡಿಯೂ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಯೋಜನೆಗಳನ್ನು ಈಡೇರಿಸಲು ಸರ್ಕಾರ ಇನ್ನೂ ಹೆಚ್ಚಿನ ಸಾಲವನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ? ಆದ್ದರಿಂದ ಕಾಂಗ್ರೆಸ್ ಉಚಿತ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಸಾದ್ಯವೇ? ಎಂಬ ಪ್ರಶ್ನೆಯನ್ನು ಅರ್ಥಶಾಸ್ತ್ರಜ್ಞರು ಮುಂದಿಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ನೀಡಿದ ಭರವಸೆಗಳು ಈಡೇರುತ್ತದೆಯೇ? ಅದಕ್ಕಾಗಿ ಕಾಂಗ್ರೆಸ್ ನಾಯಕರು ಯಾವ ಕ್ರಮಗಳನ್ನು ತೆಗೆದುಕೊಳಬಹುದು? ಎಂಬುದನ್ನು ಕಾದು ನೋಡಬೇಕಿದೆ.

Tags: Congress GovernmentCongress GuaranteeDK ShivakumarDynamicDynamic LeaderDynamic Leader MagazineDynamic Leader News PortalKarnataka Assembly Election 2023LeaderMallikarjuna KhargeSiddaramaiahಕರ್ನಾಟಕ ವಿಧಾನಸಭೆ ಚುನಾವಣೆ 2023ಕಾಂಗ್ರೆಸ್ ಗ್ಯಾರಂಟಿಕಾಂಗ್ರೆಸ್ ಸರ್ಕಾರಡಿ.ಕೆ.ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Previous Post

ಬೆಂಗಳೂರು ನಗರ ಹಾಗೂ ಬೆಂಗಳೂರು ಜಿಲ್ಲೆಯಲ್ಲಿ ಪೊಲೀಸ್ ಕಟ್ಟೆಚ್ಚರ: 144 ಸೆಕ್ಷನ್ ಜಾರಿ!

Next Post

ಬಿ.ಝಡ್.ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕರ್ನಾಟಕ ಮುಸ್ಲಿಮ್ ಯುನಿಟಿ!

Next Post

ಬಿ.ಝಡ್.ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕರ್ನಾಟಕ ಮುಸ್ಲಿಮ್ ಯುನಿಟಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS