• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಶಾಂತಿನಗರ ಕ್ಷೇತ್ರವನ್ನು ನಿರ್ಲಕ್ಷ್ಯೆ ಮಾಡಿ ಎನ್.ಎ.ಹ್ಯಾರಿಸ್‌ಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ! ಜನಶಕ್ತಿ ವೇದಿಕೆ ಎಚ್ಚರಿಕೆ

by Dynamic Leader
16/05/2023
in ರಾಜಕೀಯ
0
ಶಾಂತಿನಗರ ಕ್ಷೇತ್ರವನ್ನು ನಿರ್ಲಕ್ಷ್ಯೆ ಮಾಡಿ ಎನ್.ಎ.ಹ್ಯಾರಿಸ್‌ಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ! ಜನಶಕ್ತಿ ವೇದಿಕೆ ಎಚ್ಚರಿಕೆ
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಶಾಂತಿನಗರ ವಿಧಾನಸಭಾ ಕ್ಷೇತ್ರವು ಬೆಂಗಳೂರಿನ ಹೃದಯ ಭಾಗದಲ್ಲಿರುವ ಒಂದು ಪುಟ್ಟ ಕ್ಷೇತ್ರವಾಗಿದೆ. ಅದು ಸರ್ವ ಜನಾಂಗದ ಶಾಂತಿಯ ತೋಟವೂ ಹೌದು. ಈ ಕ್ಷೇತ್ರವನ್ನು ಮೇಲ್ನೋಟಕ್ಕೆ ನೋಡಿದರೆ ನಮಗೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರಿಚ್ಮಂಡ್ ರಸ್ತೆ, ಮಾರ್ಕ್ಸ್ ರಸ್ತೆ, ಲವಲ್ಲಿ ರಸ್ತೆ, ಚರ್ಚ್ ಸ್ಟ್ರೀಟ್, ವಿಠಲ್ ಮಲ್ಯ ರಸ್ತೆ, ಕಸ್ತೂರಿಬಾಯ್ ರಸ್ತೆ ಮುಂತಾದ ವಿಶ್ವಖ್ಯಾತಿಯ ಐಷಾರಾಮಿ ರಸ್ತೆಗಳು, ಅಲ್ಲಿನ ಮಾಲ್‌ಗಳು, ಅಂತರಾಷ್ಟ್ರೀಯ ಬ್ರಾಂಡೆಡ್ ಶೋರೂಂಗಳೆಲ್ಲವೂ ಕಾಣಸಿಗುತ್ತವೆ.

ಯೂಟಿಲಿಟಿ ಬಿಲ್ಡಿಂಗ್, ಮೇಯೋಹಾಲ್, ಮಿತ್ತಲ್ ಟವರ್, ಕಾವೇರಿ ಎಂಪೋರಿಯಂ, ಬಾರ್ಟನ್ ಸೆಂಟರ್, ಹಿಗ್ಗಿನ್ ಬಾಥಮ್ಸ್, ಬೈಬಲ್ ಸೊಸೈಟಿ, ಮಲ್ಯ ಟವರ್ಸ್, ವಾರ್ ಮೆಮೋರಿಯಲ್, ಗರುಡ ಮಾಲ್, ಲೈಫ್‌ಸ್ಟೈಲ್ ಹೀಗೆ ಹೇಳುತ್ತಾ ಹೋಗಬಹುದು. ಆದರೆ, ಇದೆಲ್ಲವನ್ನು ನೋಡಿ, ಕ್ಷೇತ್ರವನ್ನು ಐಷಾರಾಮಿ-ಶ್ರೀಮಂತ ಕ್ಷೇತ್ರವೆಂದು ಭಾವಿಸಿಕೊಂಡರೆ ಅದು ಮೂರ್ಖತನ.

ಮೇಲಿನ ಎಲ್ಲವೂ ವ್ಯಾಪಾರ ವಹಿವಾಟು ನಡೆಯುವ ಸ್ಥಳ. ಇದಕ್ಕೂ ಕ್ಷೇತ್ರದ ಜನತೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಇಲ್ಲಿರುವ 90% ಜನ ಯಾರೂ ಕೂಡ ಕ್ಷೇತ್ರದ ಮತದಾರರಲ್ಲ. ಇಲ್ಲಿನದು ಜಾತ್ರೆಯ ಸಂಸ್ಕೃತಿ. ಇದನ್ನು ನೋಡಿ ಕ್ಷೇತ್ರವನ್ನು ತೂಕ ಮಾಡಬಾರದು. ಮತ್ತು ಕ್ಷೇತ್ರವನ್ನು ಸ್ವಲ್ಪ ಆಳವಾಗಿ ಇಣುಕಿ ನೋಡಿದರೆ, ನಮಗೆ ಗೋಚರಿಸುವುದೆಲ್ಲವೂ ಬರೀ ಆಶ್ಚರ್ಯ ಮತ್ತು ಅಘಾತವೇ ಆಗಿರುತ್ತದೆ.

ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯದ ಕೊರೆತೆಯಿರುವ ಶ್ರೀ.ಎನ್. ಲಕ್ಷ್ಮಣರಾವ್ ನಗರ (ಎಲ್.ಆರ್.ನಗರ), ಅಂಬೇಡ್ಕರ್ ನಗರ, ಸಮತಾನಗರ, ಸೊನ್ನೇನಹಳ್ಳಿ, ಮಾಯಾಬಜಾರ್, ತಿಮ್ಮರಾಯಪ್ಪ ಗಾರ್ಡನ್, ವಿನಾಯಕ ನಗರ, ಇಸ್ರೋ ಸ್ಲಂ, ಹಟ್ಟಿಂಗ್ ಕಾಲೋನಿ ಹಾಗೂ ಶಕ್ತಿವೇಲ್ ನಗರ ಮುಂತಾದ 10 ಕೊಳಗೇರಿ ಪ್ರದೇಶಗಳು ಇನ್ನು ಕೂಡ ಮೂಲಭೂತ ಸೌಲಭ್ಯಕ್ಕಾಗಿ ಹಾತೊರೆಯುತ್ತಿದೆ.

ನೀಲಸಂದ್ರ, ರೋಸ್ ಗಾರ್ಡನ್, ಅನೇಪಾಳ್ಯ, ಶಾಂತಿನಗರ, ಅಶೋಕ್ ನಗರ, ಗೌತಮಪುರಂ, ದೀನಬಂಧು ನಗರ, ರುದ್ರಪ್ಪ ಗಾರ್ಡನ್, ಜಯರಾಜ್ ನಗರ, ಆಸ್ಟೀನ್ ಟೌನ್ ಸಿಮೆಂಟ್ ಲೇನ್, ಸಿದ್ಧಾರ್ಥನಗರ, ಬಿಡಿಎ ಕ್ವಾಟ್ರಸ್, ವನ್ನಾರಪೇಟೆ ಮುಂತಾದ ಪ್ರದೇಶಗಳು ಇನ್ನೂ ಕೂಡ ಯಾವ ಅಭಿವೃದ್ಧಿಯೂ ಕಾಣದೆ 5 ದಶಕಗಳಿಂದ ಅದೇ ಪರಿಸ್ಥಿತಿಯನ್ನು ಎದುರಿಸುತ್ತಿದೆ.

ಕ್ಷೇತ್ರದಲ್ಲಿ ಒಂದು ಒಳ್ಳೆಯ ಸರ್ಕಾರಿ ಶಾಲೆ – ಕಾಲೇಜುಗಳು ಇಲ್ಲ. ಸುಸುಜ್ಜಿತವಾದ ಸರ್ಕಾರಿ ಆಸ್ಪತ್ರೆಗಳು ಇಲ್ಲ. ಸಮುದಾಯ ಭವನಗಳಿಲ್ಲ. ಇದ್ದ ಒಂದೆರಡು ಲೈಬ್ರರಿಗಳು ಕೂಡ ಕಣ್ಮರೆಯಾಗುತ್ತಿವೆ. ಆಸ್ಟೀನ್ ಟೌನ್ ಬಿಡಿಎ ಕಾಂಪ್ಲೆಕ್ಸ್, ಅಸ್ಟೀನ್ ಟೌನ್ ಮಾರ್ಕೆಟ್, ಜಾನ್ಸನ್ ಮಾರ್ಕೆಟ್ ಹಾಗೂ ದೊಮ್ಮಲೂರು ಬಿಡಿಎ ಕಾಂಪ್ಲೆಕ್ಸ್ ಎಲ್ಲವೂ ನಿರ್ವಹಣೆಯಿಲ್ಲದೆ ಅವಸಾನದ ಸ್ಥಿತಿಯಲ್ಲಿದೆ.

ಶಾಂತಿನಗರ ವಿಧಾನಸಭಾ ಕ್ಷೇತ್ರವು ಈ ರೀತಿ ಹದೆಗೆಡಲು ಈ ಹಿಂದೆ ಇದ್ದ ಸರ್ಕಾರಗಳು ಮತ್ತು ನಿದ್ರಾವಸ್ಥೆಯಲ್ಲಿರುವ ಬಿಬಿಎಂಪಿಯೇ ಕಾರಣ. ಅದುಮಾತ್ರವಲ್ಲ, ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಆಯ್ಕೆಯಾಗುವ ಶಾಸಕರು ಯಾರಿಗೂ ಇಲ್ಲಿಯವರೆಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನವನ್ನು ನೀಡದೇ ನಿರಂತರವಾಗಿ ವಂಚಿಸಲಾಗುತ್ತಿದೆ ಇದು ಮತ್ತೊಂದು ಕಾರಣ. 2008ರಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ರಚನೆಯಾದ ಬಿಜೆಪಿ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನವನ್ನು ಕೊಡದೇ ವಂಚಿಸಿದ್ದು ಕ್ಷೇತ್ರ ಹದೆಗೆಡಲು ಇದುವೇ ಮೂಲ ಕಾರಣವಾಯಿತು. 

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯವು ಸ್ವಲ್ಪ ಮಟ್ಟಿಗೆ ಸುಧಾರಣೆಯನ್ನು ಖಂಡಿದ್ದು ನಿಜ. ತದನಂತರ 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಚನೆಯಾದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ರಾಜ್ಯದಲ್ಲಿ ಒಂದು ವರ್ಷವಷ್ಟೆ ಅಧಿಕಾರದಲ್ಲಿತ್ತು. ಆ ಸಮಯದಲ್ಲಿ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸವೂ ನಡೆಯಲಿಲ್ಲ.

ನಂತರ ಆಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಯಡಿಯೂರಪ್ಪನವರ ಬಿಜೆಪಿ ಸರ್ಕಾರ ಮತ್ತು ಅವರ ನಂತರ ಬಂದ ಬಸವರಾಜ ಬೊಮ್ಮಾಯ್ ಸರ್ಕಾರ ಈ ಕ್ಷೇತ್ರಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಏನು ಮಾಡಿದೆ ಎಂಬುದನ್ನು ಶಾಸಕ ಎನ್.ಎ.ಹ್ಯಾರಿಸ್ ನವರೇ ಬಂದು ಹೇಳಬೇಕು ಎಂದೇನಿಲ್ಲ. ಅದು ಈ ರಾಜ್ಯದ ಪ್ರತಿಯೊಬ್ಬರಿಗೂ ತಿಳಿದ ವಿಚಾರ.

ಶಾಂತಿನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದೇ ಇರುವುದು ಮತ್ತು ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡದಿರುವುದರಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾದವು. ಅಲ್ಪ ಸಂಖ್ಯಾತ ಸಮುದಾಯದ ಎನ್.ಎ.ಹ್ಯಾರಿಸ್ ಶಾಸಕರಾಗಿದ್ದರೂ ಕ್ಷೇತ್ರದಲ್ಲಿ ದಲಿತರು ಬಹುಸಂಖ್ಯಾತರಾಗಿದ್ದಾರೆ. ಹಿಂದುಳಿದ ವರ್ಗಗಳ ಮತಗಳು ಇಲ್ಲಿ ನಿರ್ಣಾಯಕವಾಗಿದೆ.

ಶಾಸಕ ಎನ್.ಎ.ಹ್ಯಾರಿಸ್ ಮೇಲೆ ನಂಬಿಕೆಯಿಟ್ಟು ಕ್ಷೇತ್ರದ ಜನ ಮತ್ತೊಮ್ಮೆ (4ನೇ ಬಾರಿಗೆ) ಅವರನ್ನು ಆರಿಸಿ ವಿಧಾನಸಭೆಗೆ ಕಳುಹಿಸಿದ್ದಾರೆ. ಕಾರಣ, ಅವರಿಂದ ಕ್ಷೇತ್ರಕ್ಕೆ ಒಳ್ಳೆಯದು ಆಗುತ್ತದೆ ಎಂಬ ನಂಬಿಕೆಯಿಂದಲೇ. ಜನರ ಆಶಯ ಈ ಬಾರಿ ನೆರವೇರಬೇಕು. ಕ್ಷೇತ್ರದ ಪ್ರತಿಯೊಂದು ಪ್ರದೇಶವೂ ಅಭಿವೃದ್ಧಿಯನ್ನು ಕಾಣಬೇಕು. ಅದಕ್ಕೆ ಅವರಿಗೆ ಹೆಚ್ಚಿನ ಅಧಿಕಾರ ಶಕ್ತಿಯನ್ನು ತುಂಬಬೇಕು. ಕ್ಷೇತ್ರದ ಮತದಾರರಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ಅದು ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಬಾರದು.

ಕಾಂಗ್ರೆಸ್ ಪಕ್ಷವು ಜನರ ಬಳಿ ಮುಂದಿಟ್ಟ 1) ಗೃಹ ಜ್ಯೋತಿ (200 ಯೂನಿಟ್ ವಿದ್ಯುತ್ ಉಚಿತ), 2) ಗೃಹಲಕ್ಷ್ಮಿ (2000 ಪ್ರತಿ ಮನೆ ಯಜಮಾನಿಗೆ ಖಚಿತ), 3) ಅನ್ನಭಾಗ್ಯ (ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನಿಶ್ಚಿತ), 4) ಯುವ ನಿಧಿ (ನಿರುದ್ಯೋಗ ಭತ್ಯೆ ರೂ.3000 ಪದವೀಧರರಿಗೆ ರೂ.1500 ಡಿಫ್ಲೋಮ ಪದವೀಧರರಿಗೆ) ಮುಂತಾದ ಗ್ಯಾರೆಂಟಿಗಳು ಖಂಡಿತವಾಗಿ ಜನರಿಗೆ ಸಿಗುತ್ತವೆ ಎಂಬ ಬರವಸೆ ಇದೆ. ಆದರೆ, ಅದುಮಾತ್ರ ಸಾಲದು. ನಮ್ಮ ಬಡಾವಣೆ ಮತ್ತು ನಮ್ಮ ಸುತ್ತಮುತ್ತ ಇರುವ ಪ್ರದೇಶಗಳೆಲ್ಲವೂ ಕೂಡ ಇತರರಂತೆ ಅಭಿವೃದ್ಧಿ ಕಾಣಬೇಕು.

ಅತಿ ಹಿಂದುಳಿದ ಅಹಿಂದ ಕ್ಷೇತ್ರವಾದ ಶಾಂತಿನಗರ ವಿಧಾನಸಭಾ ಕೇತ್ರವನ್ನು ಇಷ್ಟು ವರ್ಷಗಳು ಕಡೆಗಣಿಸಲಾಗಿತ್ತು; ಅದು ಇನ್ನು ಮುಂದುವರಿಯುವುದು ಬೇಡ. ಇತರೆ ಕ್ಷೇತ್ರಗಳಂತೆ ಶಾಂತಿನಗರವೂ ಅಭಿವೃದ್ಧಿಯನ್ನು ಕಾಣಬೇಕಾದರೆ ಖಂಡಿತ ಈ ಬಾರಿ ಎನ್.ಎ.ಹ್ಯಾರಿಸ್ ಸಚಿವರಾಗಬೇಕು. ಅಹಿಂದ ವರ್ಗದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದನ್ನು ಖಂಡಿತ ನೆರೆವೇರಿಸಿ ಕೋಡುತ್ತರೆ ಎಂದು ಕ್ಷೇತ್ರದ ಜನರು ನಂಬಿದ್ದಾರೆ.

ಒಂದು ವೇಳೆ, ಅಕಸ್ಮಾತ್ ಎನ್.ಎ.ಹ್ಯಾರಿಸ್ ಸಚಿವರಾಗುವುದು ಈ ಬಾರಿ ಕೈತಪ್ಪಿದರೆ, ಕ್ಷೇತ್ರದ ಒಳಿತಿಗಾಗಿ ಅವರಿಗೆ ಸಚಿವ ಸ್ಥಾನ ಸಿಗುವವರೆಗೂ ಜನಶಕ್ತಿ ವೇದಿಕೆಯ ನೇತೃತ್ವದಲ್ಲಿ ನಿರಂತರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಜನಶಕ್ತಿ ವೇದಿಕೆ ಎಚ್ಚರಿಕೆಯನ್ನು ಕೊಟ್ಟಿದೆ.

Tags: DK ShivakumarDynamicDynamic LeaderDynamic Leader MagazineDynamic Leader News PortalKarnataka Assembly Election 2023LeaderMallikarjuna KhargeNA HarisShanthinagarSiddaramaiahಎನ್.ಎ.ಹ್ಯಾರಿಸ್ಕರ್ನಾಟಕ ವಿಧಾನಸಭೆ ಚುನಾವಣೆ 2023ಡಿ.ಕೆ.ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆಶಾಂತಿನಗರಸಿದ್ದರಾಮಯ್ಯ
Previous Post

ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಪುರಸಭೆ!   

Next Post

ಮಲ್ಲಿಕಾರ್ಜುನ ಖರ್ಗೆಯನ್ನು ಬೇಟಿಯಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

Dynamic Leader

Next Post
ಮಲ್ಲಿಕಾರ್ಜುನ ಖರ್ಗೆಯನ್ನು ಬೇಟಿಯಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆಯನ್ನು ಬೇಟಿಯಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

20/05/2025
edit post
ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

20/05/2025
edit post
ಭಾರತೀಯ ವಿಮಾನಗಳಿಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಲು ಸಾಧ್ಯತ್ತಿಲ್ಲ: ವಿಕ್ರಮ್ ಮಿಶ್ರಿ

ಭಾರತೀಯ ವಿಮಾನಗಳಿಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಲು ಸಾಧ್ಯತ್ತಿಲ್ಲ: ವಿಕ್ರಮ್ ಮಿಶ್ರಿ

19/05/2025
edit post
ಪರಮಾಣು ಶಕ್ತಿಯಲ್ಲಿ ಖಾಸಗಿ ವಲಯಕ್ಕೆ ಅವಕಾಶ: ಹೊಸ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧತೆ!

ಪರಮಾಣು ಶಕ್ತಿಯಲ್ಲಿ ಖಾಸಗಿ ವಲಯಕ್ಕೆ ಅವಕಾಶ: ಹೊಸ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧತೆ!

19/05/2025

Recent News

edit post
1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

20/05/2025
edit post
ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

20/05/2025
edit post
ಭಾರತೀಯ ವಿಮಾನಗಳಿಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಲು ಸಾಧ್ಯತ್ತಿಲ್ಲ: ವಿಕ್ರಮ್ ಮಿಶ್ರಿ

ಭಾರತೀಯ ವಿಮಾನಗಳಿಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಲು ಸಾಧ್ಯತ್ತಿಲ್ಲ: ವಿಕ್ರಮ್ ಮಿಶ್ರಿ

19/05/2025
edit post
ಪರಮಾಣು ಶಕ್ತಿಯಲ್ಲಿ ಖಾಸಗಿ ವಲಯಕ್ಕೆ ಅವಕಾಶ: ಹೊಸ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧತೆ!

ಪರಮಾಣು ಶಕ್ತಿಯಲ್ಲಿ ಖಾಸಗಿ ವಲಯಕ್ಕೆ ಅವಕಾಶ: ಹೊಸ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧತೆ!

19/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

1,11,111 ಮಂದಿಗೆ ಹಕ್ಕುಪತ್ರ ವಿತರಣೆ: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯ ಪ್ರತಿಮೆ ಲೋಕಾರ್ಪಣೆ!

20/05/2025
ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

20/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS