• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ರೌಡಿಸಂ ಕಥೆಗೆ “ಸ್ಟಾರ್” ಟೈಟಲ್: ನೂತನ ಚಿತ್ರಕ್ಕೆ ಶಾಸಕ ರವಿ ಸುಬ್ರಮಣ್ಯ ಚಾಲನೆ!

by Dynamic Leader
24/05/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಈ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಓಂ, ಸ್ವಸ್ತಿಕ್, ಸೂಪರ್ ನಂಥ ಚಿತ್ರಗಳು ಮಾಡಿದ ದಾಖಲೆ ನಿಮಗೆಲ್ಲ ಗೊತ್ತೇ ಇದೆ. ಅದೇ ರೀತಿಯ ಟೈಟಲ್ ಇರುವ ಮತ್ತೊಂದು ಚಿತ್ರಕ್ಕೆ ಇತ್ತೀಚೆಗೆ ಚಾಲನೆ ದೊರೆತಿದೆ. ಅದರ ಹೆಸರು ಸ್ಟಾರ್. ನಕ್ಷತ್ರದ ಗುರುತನ್ನೇ ತಮ್ಮ ಚಿತ್ರದ ಶೀರ್ಷಿಕೆಯಾಗಿಟ್ಟುಕೊಂಡು, ಚಿತ್ರ ಮಾಡಲು ಹೊರಟಿರುವವರು ನಿರ್ಮಾಪಕ ಶರತ್; ಅವರೇ ಚಿತ್ರದ ಹೀರೋ ಕೂಡ. ಈ ಚಿತ್ರಕ್ಕೆ ಪತಿ, ಪತ್ನಿ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಮತಿ ಅನು ಹಾಗೂ ಮಂಜು ವಿಜಯಸೂರ್ಯ ಸೇರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶ್ರೀನಿವಾಸ ನಗರದ ಕೆಂಪೇಗೌಡ ಆಟದ ಮೈದಾನದಲ್ಲಿ ನಡೆದ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ರವಿ ಸುಬ್ರಮಣ್ಯ ಅವರು ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ, “ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ. ಈ ಹಿಂದೆ ನಾನು ‘ಪ್ಯಾಟಿ ಮಂದಿ ಕಾಡಿಗ್ ಬಂದ್ರು’ ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ. ವಿಭಿನ್ನವಾದ ಕಥೆ. ಕ್ಲೈಮ್ಯಾಕ್ಸ್ ನೋಡಿ ಹೊರ ಬರುವಾಗ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ. ಚಿತ್ರದಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೇಳಿದರೂ, ಯಾರ ಹೆಸರನ್ನೂ ಸಹ ಬಳಸಿಕೊಂಡಿಲ್ಲ” ಎಂದು ಹೇಳಿದರು.

  ನಂತರ ನಿರ್ದೇಶಕ ಮಂಜು ವಿಜಯಸೂರ್ಯ ಮಾತನಾಡಿ, “16 ವರ್ಷಗಳ ಹಿಂದೆ ನಾನು ಒಬ್ಬ ಲೈಟ್ ಬಾಯ್ ಆಗಿ ಸಿನಿ ಜರ್ನಿ ಆರಂಭಿಸಿ, ಬರವಣಿಗೆಯಲ್ಲೇ ಹೆಚ್ಚು ಸಮಯ ಕಳೆದೆ. ಈಗ ನಿರ್ದೇಶಕನಾಗುತ್ತಿದ್ದೇನೆ.  ನಮ್ಮ ಚಿತ್ರದ ಟೈಟಲ್ಲೇ ಕಥೆ ಹೇಳುತ್ತದೆ. ಇದು ಅಂಡರ್‌ ವರ್ಲ್ಡ್ ಸಬ್ಜೆಕ್ಟ್. ಹೀರೋಗೆ ನಾಯಕಿ ಹೇಗೆ ಬೆಂಬಲವಾಗಿ ನಿಲ್ತಾರೆ ಅಂತ ಹೇಳಿದ್ದೇವೆ. ನ್ಯಾಚುರಲ್ ಆದಂಥ ಫೈಟ್ಸ್ ಚಿತ್ರದಲ್ಲಿರುತ್ತವೆ. ಇದೊಂದು ಲೋಕಲ್ ಸಬ್ಜೆಕ್ಟ್ ಆಗಿರುವುದರಿಂದ ಬೆಂಗಳೂರಿನಲ್ಲೇ ಹೆಚ್ಚು ಭಾಗದ ಶೂಟಿಂಗ್ ಮಾಡುತ್ತೇವೆ. ಹೊಡೆದಾಟಕ್ಕಿಂತ ಹೆಚ್ಚಾಗಿ ಥ್ರಿಲ್ಲರ್ ಮೇಲೆ ಹೆಚ್ಚು ಫೋಕಸ್ ಮಾಡಿದ್ದೇವೆ. ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿಕೊಂಡು ಹೋಗುವ ಕಂಟೆಂಟ್” ಎಂದು ಹೇಳಿದರು.

ಚಿತ್ರದ ನಾಯಕಿಯಾಗಿ ನಟಿಸುತ್ತಿರುವ ನಟಿ ರಜತ ರಕ್ಷ ಮಾತನಾಡಿ, “ಈ ಹಿಂದೆ ಸದ್ದು, ವಿಚಾರಣೆ ನಡೆಯುತ್ತಿದೆ, ತಲವಾರ್ ಸೇರಿ ಮೂರು ಚಿತ್ರಗಳಲ್ಲಿ ನಟಿಸಿದ್ದೆ. ನಾಯಕಿಯಾಗಿ ಇದೇ ಮೊದಲ ಚಿತ್ರ. ನಾಯಕನಿಗೆ ಸಪೋರ್ಟ್ ಆಗಿರುವಂಥ ಪಾತ್ರ, ತುಂಬಾ ಚೆನ್ನಾಗಿದೆ” ಎಂದು ಹೇಳಿದರು. ಛಾಯಾಗ್ರಾಹಕ ಪ್ರವೀಣ್ ಎಂ.ಪ್ರಭು ಮಾತನಾಡಿ, “ಕಪಾಲ ನಂತರ ಮೂರನೇ ಚಿತ್ರ. ರಿಯಲಿಸ್ಟಿಕ್ ಆಗಿ ಸಿನಿಮಾವನ್ನು ಶೂಟ್ ಮಾಡೋಣ ಅಂತ ಪ್ಲಾನ್ ಮಾಡಿಕೊಂಡಿದ್ದೇನೆ. ನಿರ್ದೇಶಕರ ಜೊತೆ ಈ ಹಿಂದೆ ಶಾರ್ಟ್ ಫಿಲಂಸ್ ಮಾಡಿದ್ದೆ” ಎಂದರು. ಮತ್ತೊಬ್ಬ ನಿರ್ದೇಶಕಿ ಅನು ಮಾತನಾಡಿ, “ಸ್ಕ್ರಿಪ್ಟ್ ಕೆಲಸದಲ್ಲಿ ನಾನು ಜಾಸ್ತಿ ಇನ್‌ವಾಲ್ ಆಗಿದ್ದೇನೆ. ರಿಯಲಿಸ್ಟಿಕ್ ಆಗಿ ಚಿತ್ರವನ್ನು ತೆರೆಮೇಲೆ ತರಬೇಕು ಎಂದುಕೊಂಡಿದ್ದೇವೆ” ಎಂದರು. ಒಂದು ಪ್ಯಾಥೋ, ಒಂದು ಮಾಸ್ ಹಾಗೂ 2 ಲವ್ ಸಾಂಗ್ ಸೇರಿ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ವಿಕಾಸ್ ವಸಿಷ್ಠ ಸಂಗೀತ ನೀಡುತ್ತಿದ್ದಾರೆ.

Tags: DynamicDynamic LeaderKannada NewsKannada News OnlineKannada News PortalLeaderNewsNews PortalStar CinemaStar Kannada CinemaStar Kannada FilmStar Kannada Movie
Previous Post

“ಮೀಟರ್ ಹಾಕಿ ಪ್ಲೀಸ್” ಅಂತಿದ್ದಾರೆ ವಿನಾಯಕ ಜೋಶಿ

Next Post

ದಿಗ್ವಿಜಯಕ್ಕೆ ಸೆನ್ಸಾರ್ ‘ಯು’ ಸರ್ಟಿಫಿಕೇಟ್: ಗೋವಾ ಫಿಲಂ ಫೆಸ್ಟಿವಲ್‌ನಲ್ಲಿ 2 ಅವಾರ್ಡ್! 

Dynamic Leader

Next Post

ದಿಗ್ವಿಜಯಕ್ಕೆ ಸೆನ್ಸಾರ್ 'ಯು' ಸರ್ಟಿಫಿಕೇಟ್: ಗೋವಾ ಫಿಲಂ ಫೆಸ್ಟಿವಲ್‌ನಲ್ಲಿ 2 ಅವಾರ್ಡ್! 

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS