• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ದರ್ಬಾರ್ ಪರಿಶುದ್ದ ಹಾಸ್ಯಚಿತ್ರ: ನಾಯಕ‌ ಸತೀಶ್

by Dynamic Leader
07/06/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಬೆಂಗಳೂರು: ಇನ್ನೇನು ಬಹುದಿನಗಳಿಂದ ಕಾಯುತ್ತಿದ್ದ ದರ್ಬಾರ್ ಚಲನಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಂಗೀತ ನಿರ್ದೇಶಕ ವಿ.ಮನೋಹರ್ ಅವರನ್ನು 23 ವರ್ಷಗಳ‌ ನಂತರ ಮತ್ತೆ ನಿರ್ದೇಶನಕ್ಕೆ ಕೈ ಹಾಕುವಂತೆ ಪ್ರೇರೇಪಿಸಿದ್ದು “ದರ್ಬಾರ್” ಚಿತ್ರದ ಕಂಟೆಂಟ್.  ಇದೇ 9 ರಂದು ತೆರೆ ಕಾಣಲಿರುವ ಈ ಚಿತ್ರದ ಬಿಡುಗಡೆಪೂರ್ವ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆದಿದ್ದು, ಈ ಸಂದರ್ಭದಲ್ಲಿ ಸಿನಿಮಾ ಕುರಿತಂತೆ ನಿರ್ದೇಶಕ ವಿ.ಮನೋಹರ್, ನಾಯಕ ಸತೀಶ್, ನಾಯಕಿ ಜಾಹ್ನವಿ, ಕಾಮಿಡಿ ಕಿಲಾಡಿ ಸಂತು, ಹುಲಿ ಕಾರ್ತೀಕ್  ಮಾತನಾಡಿದರು. 

ಮೊದಲು ವಿ.ಮನೋಹರ್ ಮಾತನಾಡುತ್ತ  “ಸಂತು ಕಾರ್ತೀಕ್ ನಮ್ಮ ಚಿತ್ರದಲ್ಲಿ  ಪ್ರಧಾನ ಪಾತ್ರ ವಹಿಸಿದ್ದಾರೆ. ಮೈಸೂರು, ಚನ್ನಪಟ್ಟಣ, ದಾವಣಗೆರೆ ಇಲ್ಲೆಲ್ಲ ಟ್ಯಾಬುಲೋ ಜೊತೆ ಹೋದಾಗ ಬಹಳ ದೊಡ್ಡ ರೆಸ್ಪಾನ್ಸ್ ಬಂತು. ಕಾಲೇಜ್ ಸ್ಟೂಡೆಂಟ್ ಗಳಲ್ಲಿ  ಜೋಷ್ ಇತ್ತು. 23 ವರ್ಷಗಳ ವನವಾಸ ಮುಗಿಸಿ ಬಂದಿದ್ದೀರಿ ಎಂದು ಒಬ್ಬ ಪತ್ರಕರ್ತರು ಹೇಳಿದರು. ನಮ್ಮ‌ ನೋವು ದುಃಖಗಳನ್ನು ಕಾಮಿಡಿಯಾಗಿ ತಗೊಂಡಾಗ ತೃಪ್ತಿಯಾಗುತ್ತೆ. ಮ್ಯೂಸಿಕ್ ಮಾಡುವುದು ಇನ್ನೊಬ್ಬರ ಕನಸಿಗೆ, ಸಿನಿಮಾ ಮಾಡುವುದು ನಮ್ಮ‌ ಕನಸಿಗೆ. ಸತೀಶ್ ನಮ್ಮ‌ ಕನಸಿಗೆ ಜೊತೆಯಾದರು. ಈಚೆಗೆ ಚಿತ್ರದ ಟೆಸ್ಟ್ ಷೋ‌ ಮಾಡಿದಾಗ ಒಳ್ಳೆಯ ಅಭಿಪ್ರಾಯ ಬಂತು. ಥಿಯೇಟರಿಗೆ ಬರುವ ಪ್ರೇಕ್ಷಕರಿಗೆ ಮನರಂಜನೆ ಖಚಿತ. ಚಂದನ್ ಶೆಟ್ಟಿ ಅವರು ಹಾಡಿದ ಹೀರೋ ಇಂಟ್ರಡಕ್ಷನ್ ಹಾಡನ್ನು ಮಂಗಳವಾರ ರಿಲೀಸ್ ಮಾಡುತ್ತೇವೆ. ಚಿತ್ರದ ಆರಂಭದಲ್ಲಿ ಬರುವ, ನಾಯಕನ ನೈತಿಕ ದಾದಾಗಿರಿ ಹೇಳುವ ಸಾಂಗ್ ಅದು” ಎಂದರು. 

ನಂತರ ಸಂತು ಮಾತನಾಡಿ, “ಅದ್ಭುತವಾದ ಸಿಚುಯೇಶನ್ ಕಾಮಿಡಿ ಇರುವಂಥ ಚಿತ್ರ. ಟೆಕ್ನಿಕಲ್ ಪ್ರೀಮಿಯರ್ ಷೋ ಮಾಡಿದಾಗ ಬಂದ ರಿಯಾಕ್ಷನ್ ಕಂಡು ನಿಜಕ್ಕೂ ಖುಷಿ ಆಯ್ತು. ಜನ ದುಡ್ಡು ಇಸ್ಕೊಂಡು ಓಟ್ ಹಾಕಿದರೆ ಏನಾಗುತ್ತೆ ಅನ್ನೋದು ಈ ಸಿನಿಮಾದಲ್ಲಿದೆ. ಪ್ರಾಮಾಣಿಕ‌ ವ್ಯಕ್ತಿಗೆ‌ ನಮ್ಮ ಮತ ಹಾಕಬೇಕು ಎಂಬ ಅರಿವು ಮೂಡಿಸುತ್ತದೆ. ನನ್ನ ಪಾತ್ರ ತುಂಬಾ ನಗಿಸುತ್ತದೆ. ಕಾರ್ತೀಕ್ ಕಾಮಿಡಿ ಬಿಟ್ಟು ಫಸ್ಟ್ ಟೈಮ್ ವಿಲನ್ ರೋಲ್ ಮಾಡಿದ್ದಾರೆ. ಸತೀಶ್ ತಾವೊಬ್ಬರೇ ಸ್ಕ್ರೀನ್ ಮೇಲಿರಬೇಕು ಎಂದು ಯೋಚಿಸದೆ ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ಪ್ರತಿ ಪಾತ್ರಕ್ಕೂ ನುರಿತ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನದು ವೈರ ಎಂಬ ಪಾತ್ರ” ಎಂದು ಹೇಳಿದರು.

ನಾಯಕ ಸತೀಶ್ ‌ಮಾತನಾಡಿ, “ಇತ್ತೀಚಿಗೆ ಜನ ಯಾಕೆ ಸಿನಿಮಾಗೆ ಬರುತ್ತಿಲ್ಲ ಅಂತ ನಾನೂ ಯೋಚಿಸಿದೆ. ನಮ್ಮ ಚಿತ್ರವು ಖಂಡಿತ ಮನರಂಜನೆ ನೀಡುತ್ತದೆ. ಕಾರ್ತೀಕ್ ಅವರು ನಾವು ಜೀವನದಲ್ಲಿ ನೋಡುವಂಥ ಅನೇಕ ಚಪ್ಪರ್ ಗಳ ಪಾತ್ರವನ್ನು ಪ್ರತಿನಿಧಿಸಿದ್ದಾರೆ. ಇನ್ನು ಸಂತು ಇಬ್ಬರಿಗೆ ಜಗಳ ತಂದಿಟ್ಟು ಎಂಜಾಯ್ ಮಾಡುವಂಥ ಪಾತ್ರ. ಸಿನಿಮಾದಲ್ಲಿ ಪಾತ್ರಗಳು ಗಂಭೀರವಾಗಿರುತ್ತೆ. ಅದು ನೋಡುಗರಿಗೆ ಮನರಂಜನೆ ನೀಡುತ್ತೆ. ಸಾಂದರ್ಭಿಕ ಹಾಸ್ಯ ದೃಶ್ಯಗಳನ್ನು ಜಾಸ್ತಿ ಇಟ್ಟಿದ್ದೇವೆ. ಇಂಡಸ್ಟ್ರಿ ಮತ್ತೆ ಮೊದಲಿನಂತಾಗಬೇಕು. ಅದು ನಮ್ಮ ಚಿತ್ರದಿಂದಲೇ ಆಗಲಿ. ನಾನು ಸಿನಿಮಾದಲ್ಲಿ ದುಡ್ಡು ಮಾಡಲು ಬಂದಿಲ್ಲ. ಜನರಿಗೆ  ಒಳ್ಳೆಯ ಸಿನಿಮಾ ಕೊಡಬೇಕು ಅಂತ ಬಂದಿದ್ದೇನೆ. ಹತ್ತು ಜನ ಬಂದು ಸಿನಿಮಾ ನೋಡಿದರೆ ಅವರು ನೂರು ಜನಕ್ಕೆ ಖಂಡಿತ ಹೇಳ್ತಾರೆ. ಸಿನಿಮಾ‌ ಕಮರ್ಷಿಯಲಿ ಏನಾಗುತ್ತೋ ಗೊತ್ತಿಲ್ಲ. ಒಳ್ಳೆಯ ಸಿನಿಮಾ ಟೀಮ್ ನೊಂದಿಗೆ ಕೆಲಸ ಮಾಡಿದ ತೃಪ್ತಿಯಿದೆ” ಎಂದು ಹೇಳಿದರು.

ಇದನ್ನೂ ಓದಿ: ಆಡೆ ನಮ್ God: ಕೆ.ಹೆಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾ ಟೈಟಲ್!

ನಂತರ ನಾಯಕಿ ಜಾಹ್ನವಿ, ಖಳನಾಯಕನ ಪಾತ್ರ ಮಾಡಿರುವ ಹುಲಿ ಕಾರ್ತೀಕ್ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಸತೀಶ್ ಅವರೇ  ಬರೆದಿದ್ದು, ದರ್ಬಾರ್ ಪ್ರೊಡಕ್ಷನ್ಸ್ ಮೂಲಕ ಬಿ.ಎನ್.ಶಿಲ್ಪ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು ಚಿತ್ರದಲ್ಲಿವೆ. ಹಿರಿಯ ಕಲಾವಿದರಾದ ಎಂ.ಎನ್.ಲಕ್ಷ್ಮಿದೇವಿ, ಅಶೋಕ್ ಹೀಗೆ ಸಾಕಷ್ಟು ಜನ ಅಭಿನಯಿಸಿದ್ದಾರೆ. ಮೂರು ಹಾಡುಗಳು ಚಿತ್ರದಲ್ಲಿದ್ದು, ಟೈಟಲ್ ಸಾಂಗನ್ನು ಚಂದನ್ ಶೆಟ್ಟಿ ಹಾಡಿದ್ದಾರೆ, ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

Tags: Cinema NewsDarbarDarbar Kannada CinemaDarbar Kannada FilmDarbar Kannada MovieDynamicDynamic LeaderGandhinagarKannada NewsKannada News OnlineKannada News PortalLeaderNewsNews PortalSandalwood Film Industryಗಾಂಧಿನಗರದರ್ಬಾರ್ದರ್ಬಾರ್ ಕನ್ನಡ ಚಿತ್ರದರ್ಬಾರ್ ಕನ್ನಡ ಮೂವಿದರ್ಬಾರ್ ಕನ್ನಡ ಸಿನಿಮಾಸಾಂಡಲ್ ಹುಡ್
Previous Post

ಹೈಪರ್ಸಾನಿಕ್ ಕ್ಷಿಪಣಿ ಉತ್ಪಾದನೆ: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನ!

Next Post

ಆಡೇ ನಮ್ God: ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾ ಟೈಟಲ್!

Next Post

ಆಡೇ ನಮ್ God: ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾ ಟೈಟಲ್!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS