• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6; ಅತಿಥಿಯಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್!

by Dynamic Leader
13/06/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಮತ್ತೆ ಶುರು ಡಾ.ರಾಜ್ ಕಪ್! ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6 ಹರಾಜು ಪ್ರಕ್ರಿಯೆ; ವಿಶೇಷ ಅತಿಥಿಯಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗಿ!

ಸ್ಯಾಂಡಲ್ ವುಡ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಆಯೋಜರಾದ ರಾಜೇಶ್ ಬ್ರಹ್ಮಾವರ, ಅನಿರುದ್, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, “ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ.  1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ. ದುಬೈನಲ್ಲಿ ನಡೆಯುವ ಆಟಗಾರರ ಹರಾಜಿನಲ್ಲಿ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು. 

ನಟ ಅನಿರುದ್ಧ್ ಮಾತನಾಡಿ, “ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನೂ ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ಕನ್ನಡ ಚಿತ್ರರಂಗಲ್ಲಿ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ; ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು. 

ಡಾ.ರಾಜ್ ಕಪ್ ಸೀಸನ್ 6ರಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್‌ಗಳು ನಡೆಯಲಿದೆ.  ಡಾಲಿ ಧನಂಜಯ್, ಅನಿರುದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್‌ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.

Tags: Ashwini Punit RajkumarCinema NewsDynamicDynamic LeaderKannada NewsKannada News OnlineKannada News PortalLeaderNewsNews PortalRaj Cup SeasonRaj Cup Season-6ಅಶ್ವಿನಿ ಪುನೀತ್ ರಾಜ್‌ಕುಮಾರ್ರಾಜ್ ಕಪ್ ಸೀಸನ್ರಾಜ್ ಕಪ್ ಸೀಸನ್-6
Previous Post

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

Next Post

ರಾಹುಲ್ ಅವರ ಅಮೆರಿಕನ್ ಟ್ರಕ್ ಯಾತ್ರೆ: ವಿಡಿಯೋ ವೈರಲ್!

Next Post

ರಾಹುಲ್ ಅವರ ಅಮೆರಿಕನ್ ಟ್ರಕ್ ಯಾತ್ರೆ: ವಿಡಿಯೋ ವೈರಲ್!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025

Recent News

edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS