• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಬಂಧನ!

by Dynamic Leader
14/06/2023
in ದೇಶ
0
0
SHARES
2
VIEWS
Share on FacebookShare on Twitter

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಸೆಂಥಿಲ್ ಬಾಲಾಜಿ ಮತ್ತು ಇತರರ ಮನೆಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಸೆಂಥಿಲ್ ಬಾಲಾಜಿಯನ್ನು ಬಂಧಿಸಿ, ಅವರನ್ನು ವಿಚಾರಣೆಗೆ ಕರೆದೊಯ್ದರು. ಆಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೆಂಥಿಲ್ ಬಾಲಾಜಿ ತಮಿಳುನಾಡು ಇಂಧನ ಸಚಿವರಾಗಿದ್ದಾರೆ. ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಆಗ 81 ಮಂದಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ, 1.62 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ವಿಚಾರದಲ್ಲಿ ನಡೆದ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸೆಂಥಿಲಬಾಲಾಜಿ, ಅವರ ಸಹೋದರನ ಮನೆ ಹಾಗೂ ಅವರ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾನೂನುಬಾಹಿರ ಹಣ ವರ್ಗಾವಣೆ ನಿಷೇಧ ಕಾಯಿದೆ ಅಡಿಯಲ್ಲಿ ಇಡಿ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಅರೆಸೇನಾ ಪಡೆಗಳ ರಕ್ಷಣೆಯೊಂದಿಗೆ ಚೆನ್ನೈ ಗ್ರೀನ್‌ವೇಸ್ ರಸ್ತೆಯಲ್ಲಿರುವ ಸಚಿವ ಸೆಂಥಿಲ್ ಬಾಲಾಜಿ ಅವರ ಬಂಗಲೆ ಮತ್ತು ಮಂದೈವೆಳಿ ಬಿಷಪ್ ಗಾರ್ಡನ್ ಪ್ರದೇಶದಲ್ಲಿರುವ ಅವರ ಸಹೋದರ ಅಶೋಕ್ ಕುಮಾರ್ ಮನೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆ 8:30ಕ್ಕೆ ತನಿಖೆ ಪ್ರಾರಂಭಿಸಿ, ಮಧ್ಯರಾತ್ರಿ 1:30ಕ್ಕೆ ಪೂರ್ಣಗೊಳಿಸಿದರು.

ನಂತರ ಮಧ್ಯರಾತ್ರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ನುಂಗಮ್ ಪಾಕ್ಕಂನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದರು. ಆಗ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ನಂತರ ಅವರನ್ನು ಓಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ.

ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವಿಷಯ ತಿಳಿದು, ಸಚಿವರಾದ ಎಂ.ಸುಬ್ರಮಣಿಯನ್, ಎ.ವಿ.ವೇಲು, ಶೇಖರ್ ಬಾಬು, ಮತ್ತು ಉದಯನಿಧಿ ಸ್ಟಾಲಿನ್ ಮುಂತಾದವರು ಯೋಗಕ್ಷೇಮ ವಿಚಾರಿಸಲಿಕ್ಕಾಗಿ, ಓಮಂದೂರಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

‘ಸೆಂಥಿಲ್ ಬಾಲಾಜಿ ಬಂಧನದ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಿಲ್ಲ. ಅವರನ್ನು ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬುದೂ ತಿಳಿದುಬಂದಿಲ್ಲ. ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಗೊತ್ತಿಲ್ಲ. ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇದು ಸಂಪೂರ್ಣ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

TAMILNADU MINISTER V.SENTHIL BALAJI ARRESTED IN MONEY LAUNDERING CASE 
The Enforcement Directorate arrested Tamil Nadu Electricity Minister V. Senthil Balaji in a money-laundering case on Wednesday early morning. The arrest came after an 18-hour questioning at Senthilbalaji’s residence in Chennai, according to a report by The Hindu.

Tags: Crime NewsDynamicDynamic LeaderKannada NewsKannada News OnlineKannada News PortalLeaderMinister Senthil Balaji ArrestedMoney Laundering CaseNewsPolitical NewsSenthil Balaji ArrestedV.Senthil Balajiಅಕ್ರಮ ಹಣ ವರ್ಗಾವಣೆವಿ.ಸೆಂಥಿಲ್ ಬಾಲಾಜಿಸಚಿವ ಸೆಂಥಿಲ್ ಬಾಲಾಜಿ ಅರೆಸ್ಟ್ಸೆಂಥಿಲ್ ಬಾಲಾಜಿ ಅರೆಸ್ಟ್
Previous Post

ರಾಹುಲ್ ಅವರ ಅಮೆರಿಕನ್ ಟ್ರಕ್ ಯಾತ್ರೆ: ವಿಡಿಯೋ ವೈರಲ್!

Next Post

ವಾಟ್ಸಾಪ್ ಪಿಂಕ್ ಹೆಸರಿನ ಲಿಂಕ್ ಸ್ಪರ್ಶಿಸಿದರೆ ನಿಮ್ಮ ಬ್ಯಾಂಕ್ ಖಾತೆ ಹಾಗೂ ವೈಯಕ್ತಿಕ ಮಾಹಿತಿ ಕಳವಾಗುತ್ತದೆ?

Next Post

ವಾಟ್ಸಾಪ್ ಪಿಂಕ್ ಹೆಸರಿನ ಲಿಂಕ್ ಸ್ಪರ್ಶಿಸಿದರೆ ನಿಮ್ಮ ಬ್ಯಾಂಕ್ ಖಾತೆ ಹಾಗೂ ವೈಯಕ್ತಿಕ ಮಾಹಿತಿ ಕಳವಾಗುತ್ತದೆ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS