• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ!

by Dynamic Leader
17/06/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

Tags: AdipurushCinema NewsDravidaDynamic Leaderdynamicleader.inKannada NewsKannada News OnlineKannada News Portalkannada Online News PortalPrabhasRamayanRamayanaRavanaSaif Ali khanSitaSrilankaSriramaಆದಿಪುರುಷದ್ರಾವಿಡಪ್ರಭಾಸ್ರಾಮಾಯಣರಾವಣಶ್ರೀರಾಮಶ್ರೀಲಂಕಾಸೀತಾಸೈಫ್ ಅಲಿ ಖಾನ್
Previous Post

ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೇಡಿತನದ ಮತ್ತು ದುರಹಂಕಾರದ ಕ್ರಮಗಳನ್ನು ಅನುಸರಿಸುತ್ತಿದೆ! ಎಂ.ಕೆ.ಸ್ಟಾಲಿನ್

Next Post

ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!

Next Post

ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS