ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಳಿಂದ ಅರ್ಜಿ ಸಲ್ಲಿಕೆ! » Dynamic Leader
October 21, 2024
ರಾಜಕೀಯ

ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಳಿಂದ ಅರ್ಜಿ ಸಲ್ಲಿಕೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇದುವರೆಗೂ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿವೆ. ಕನಿಷ್ಠ ನಿಬಂಧನೆಗಳು ಮತ್ತು ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯನ್ನು ತಲುಪಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ.

ಯೋಜನೆಯ ವ್ಯಾಪ್ತಿಗೆ ಒಳಪಡುವವರು ತಪ್ಪದೇ ಅರ್ಜಿ ಸಲ್ಲಿಸಿ, ಇತರರಿಗೂ ಅರ್ಜಿ ಸಲ್ಲಿಸಲು ನೆರವಾಗಿ. ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ” ಎಂದು ಹೇಳಿದ್ದಾರೆ.

Related Posts