• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ!

by Dynamic Leader
27/07/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿ ಪಕ್ಷದ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಒಳಮೀಸಲಾತಿ ವಿಷಯದ ಕಟ್ಲೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ವಿಷಯವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯನ್ಯಾಯಮೂರ್ತಿಯನ್ನು ಕೋರಿದ್ದಾರೆ. ಇದರಿಂದಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ‘ಸಬ್ ಜುಡೀಸ್’ ಆಗುತ್ತದೆ” ಎಂದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹರಾವ್ ಅವರ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವ ನಾರಾಯಣ ಸ್ವಾಮಿ ಜಾರಿಕೊಂಡಿದ್ದಾರೆ.

“ಒಳಒಳಮೀಸಲಾತಿಗಾಗಿ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಈ ಉದ್ದೇಶಕ್ಕಾಗಿಯೇ ರಚಿಸಲಾಗಿರುವ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿತ್ತು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಲು ಕೋರಲಾಗಿತ್ತು. ಆದರೆ ಇಲ್ಲಿಯವರೆಗೆ 20 ರಾಜ್ಯ ಸರ್ಕಾರಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ತಮ್ಮ ಅಭಿಪ್ರಾಯವನ್ನು ತಿಳಿಸಿದೆ” ಎಂದು ಹೇಳಿದ್ದಾರೆ.

“ಈ 20 ರಾಜ್ಯಗಳಲ್ಲಿ ಏಳು ರಾಜ್ಯಗಳು ಮಾತ್ರ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದ್ದು ಉಳಿದ 13 ರಾಜ್ಯಗಳು ವಿರೋಧಿಸಿವೆ” ಎಂದು ಹೇಳುವ ಮೂಲಕ ಬಹುಸಂಖ್ಯಾತ ರಾಜ್ಯಗಳು ಒಳಮೀಸಲಾತಿಗೆ ವಿರುದ್ಧವಾಗಿವೆ ಎಂಬ ಸೂಚನೆಯನ್ನೂ ಸಚಿವ ನಾರಾಯಣಸ್ವಾಮಿ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ನಾಯಕರು ಆ ಸಮಯದಲ್ಲಿ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದಾಗಲಿ, ಈ ಬಗ್ಗೆ ಕೈಗೊಳ್ಳುವ ನಿರ್ಧಾರ ಸಬ್ ಜುಡಿಸ್ ಆಗುತ್ತದೆ ಎಂದಾಗಲಿ ಯಾಕೆ ಹೇಳಿಲ್ಲ?

2020ರ ಆಗಸ್ಟ್ ತಿಂಗಳಲ್ಲಿಯೇ ಐವರು ನ್ಯಾಯಾಧೀಶರ ಪೀಠವು ಏಳು ನ್ಯಾಯಾಧೀಶರ ಪೀಠ ರಚಿಸುವಂತೆ ಕೋರಿಕೆ ಸಲ್ಲಿಸಿದ್ದರೂ ಇಲ್ಲಿಯ ವರೆಗೆ ಯಾಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿಲ್ಲ? ಇದೇ ವಿಷಯವನ್ನು ನಾವು ಪ್ರಶ್ನಿಸಿದಾಗ ಸಂವಿಧಾನಕ್ಕೆ ತಿದ್ದುಪಡಿ ಮಾಡದೆಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಸುಳ್ಳು ಭರವಸೆ ನೀಡಿದ್ದು ಯಾಕೆ? ಬಹಿರಂಗವಾಗಿ ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ, ಅಂತರಂಗದಲ್ಲಿ ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಉಪಕ್ರಮಗಳಿಗೆ ವಿರುದ್ಧವಾಗಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಎಂದು ಹೇಳಿದ್ದಾರೆ.

Tags: SC ST Internal ReservationSC/ST ReservationSiddaramaiahಎಸ್‌ಸಿ ಎಸ್‌ಟಿ ಒಳ ಮೀಸಲಾತಿಎಸ್‌ಸಿ ಎಸ್‌ಟಿ ಮೀಸಲಾತಿಸಿದ್ದರಾಮಯ್ಯ
Previous Post

2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು! ಅಖಿಲೇಶ್ ಯಾದವ್

Next Post

4000 ಕಿ.ಮೀ., ದೂರವನ್ನು ತೆವಳುತ್ತಾ ಸಾಗಿದ ಮೂರು ಸ್ವಾಮೀಜಿಗಳು!

Next Post

4000 ಕಿ.ಮೀ., ದೂರವನ್ನು ತೆವಳುತ್ತಾ ಸಾಗಿದ ಮೂರು ಸ್ವಾಮೀಜಿಗಳು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS