• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕನ್ನಗಿಯ ಕೋಪ ರಾಜದಂಡವನ್ನು ಮುರಿದ ಕಥೆ ಏನು ಗೊತ್ತಾ?; ಸಿಲಪತಿಕಾರಂ ಓದಿ – ಕನಿಮೋಳಿ ಭಾವುಕ ಭಾಷಣ!

by Dynamic Leader
09/08/2023
in ದೇಶ
0
0
SHARES
0
VIEWS
Share on FacebookShare on Twitter

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದಲೂ ಮಣಿಪುರ ವಿಚಾರವಾಗಿ ಪ್ರಧಾನಿ ಮೋದಿ ವಿವರಣೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ ಉಭಯ ಸದನಗಳಲ್ಲಿ ಅನುಮತಿ ನಿರಾಕರಣೆ ಆಗುತ್ತಿರುವುದರಿಂದ ನಿರಂತರ ಉದ್ವಿಗ್ನತೆ ಉಂಟಾಗಿದೆ. ಮತ್ತು ಸದನಗಳನ್ನು ಸಹ ಮುಂದೂಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಈ ನಿರ್ಣಯದ ಮೇಲಿನ ಚರ್ಚೆ ಇಂದು (ಆ.9) 2ನೇ ದಿನವೂ ನಡೆಯಿತು.

ಇಂದಿನ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಡಿಎಂಕೆ ಪಕ್ಷದ ಸಂಸದೆ ಕನಿಮೊಳಿ ಮಾತನಾಡಿದರು. ”ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ರಾಜ್ಯವನ್ನು ಉಳಿಸಬೇಕಾದ ಪರಿಸ್ಥಿತಿ ಇದೆ. ‘ಡಬಲ್ ಇಂಜಿನ್ ಸರ್ಕಾರ’ ಎಂದು ಬಿಂಬಿಸಿಕೊಳ್ಳುವ ಬಿಜೆಪಿ, ಮಣಿಪುರದ ವಿಚಾರದಲ್ಲಿ ಏಕೆ ವಿವರಣೆ ನೀಡುತ್ತಿಲ್ಲ? ಮಣಿಪುರದ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಮೌನವಾಗಿರುವುದೇಕೆ?

ಮಣಿಪುರದಲ್ಲಿ ನಡೆಯುತ್ತಿರುವ ಹತ್ಯಾಕಾಂಡವನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿಫಲವಾಗಿವೆ. ಮಣಿಪುರದಲ್ಲಿ ಮೂರು ತಿಂಗಳಿನಿಂದ ಗಲಭೆ ತಡೆಯುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ. ಮಣಿಪುರದ ಶಿಬಿರಗಳಲ್ಲಿ ತಂಗಿರುವ ಜನರ ಸ್ಥಿತಿ ಗಂಭೀರವಾಗಿದೆ. ‘ಮಣಿಪುರ ಕ್ಯಾಂಪ್‌ನಲ್ಲಿ ತಂಗಿರುವ ಜನರನ್ನು ನೋಡಲು ಮಣಿಪುರದ ಮುಖ್ಯಮಂತ್ರಿ ಮತ್ತು ಪ್ರಧಾನಿ ಏಕೆ ಬಂದಿಲ್ಲ’ ಎಂದು ಹುಡುಗಿಯೊಬ್ಬರು ನನ್ನನ್ನು ಕೇಳಿದರು.

ಮಣಿಪುರದಲ್ಲಿ ಸಂತ್ರಸ್ತರಿಗೆ ಪೊಲೀಸರು ಯಾವ ಸಹಾಯವನ್ನೂ ಮಾಡಲಿಲ್ಲ. 161 ಸಶಸ್ತ್ರ ಪಡೆಗಳು ಅಲ್ಲಿದ್ದರೂ ಹಿಂಸಾಚಾರವನ್ನು ತಡೆಯಲಿಲ್ಲ. ಮೃತ ದೇಹಗಳು ಕೂಡ ಸಂಬಂಧಿಕರಿಗೆ ತಲುಪಿಲ್ಲ. ಬಿಜೆಪಿ ಆಡಳಿತದಲ್ಲಿ ಬೆಲೆ ಏರಿಕೆ ಮಾತ್ರವಲ್ಲ, ಮಹಿಳೆಯರ ಮೇಲಿನ ಅಪರಾಧಗಳೂ ಹೆಚ್ಚಿವೆ. ಮಣಿಪುರದಲ್ಲಿ ಸ್ಥಾಪಿಸಲಾಗಿರುವ ನೂರಾರು ಪರಿಹಾರ ಶಿಬಿರಗಳಲ್ಲಿ ಸೂಕ್ತ ಸೌಲಭ್ಯ, ಆಹಾರ, ಕುಡಿಯುವ ನೀರೂ ಇಲ್ಲ. ಮಣಿಪುರದಲ್ಲಿನ ಪರಿಹಾರ ಶಿಬಿರಗಳು ಅನೈರ್ಮಲ್ಯ ಮತ್ತು ವಾಸಕ್ಕೆ ಯೋಗ್ಯವಲ್ಲ.

ದೇಶದಲ್ಲಿ ಸಾಕಷ್ಟು ಮಂದಿ ನಿರುದ್ಯೋಗಿಗಳಾಗಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೂ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ಅದರಲ್ಲೂ ರೈಲ್ವೆ ವಲಯದಲ್ಲಿ ಹುದ್ದೆಗಳು ಭರ್ತಿಯಾಗಿಲ್ಲ. ಸಂಸತ್ತಿನಲ್ಲಿ ರಾಜದಂಡವನ್ನು ಅಳವಡಿಸಿ, ‘ಇದು ಚೋಳರಾಜನಿಗೆ ಸೇರಿದ್ದು’ ಎಂದು ಹೇಳಿದ್ದೀರಿ. ಕನ್ನಗಿಯ ಕೋಪಕ್ಕೆ ಪಾಂಡಿಯನ ರಾಜದಂಡ ಮುರಿದ ಕಥೆ ಏನು ಗೊತ್ತಾ? ನಮ್ಮ ಮೇಲೆ ಹಿಂದಿ ಹೇರುವುದನ್ನು ನಿಲ್ಲಿಸಿಕೊಂಡು, ಸಿಲಪತಿಕಾರಂ ಓದಿ; ಅದರಲ್ಲಿ ನಿಮಗೆ ಅನೇಕ ಪಾಠಗಳಿವೆ.

ಪ್ರಧಾನಮಂತ್ರಿಯವರು ಮಣಿಪುರದ ಜನರನ್ನು ಖುದ್ದಾಗಿ ಭೇಟಿ ಮಾಡಿ ನ್ಯಾಯ ಸ್ಥಾಪಿಸುವುದು ಅಗತ್ಯವಾಗಿದೆ. ಮಣಿಪುರ ಹಿಂಸಾಚಾರದಲ್ಲಿ 170ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ದ್ರೌಪದಿಯಂತೆಯೇ ಮಣಿಪುರದ ಮಹಿಳೆಯರನ್ನು ವಿವಸ್ತ್ರಗೊಳಿಸಿದಾಗ ಅವರ ಇಷ್ಟ ದೇವರನ್ನು ಪ್ರಾರ್ಥಿಸಿರುತ್ತಾರೆ. ಆದರೆ ಅವರನ್ನು ರಕ್ಷಿಸಲು ದೇವರಾಗಲಿ, ಸರ್ಕಾರವಾಗಲಿ ಬರಲಿಲ್ಲ.

ಮಹಾಭಾರತವನ್ನು ಚೆನ್ನಾಗಿ ಓದಿದವರಿಗೆ ಗೊತ್ತು. ಅಪರಾಧಿಗಳಿಗೆ ಮಾತ್ರವಲ್ಲ, ಅದನ್ನು ಮೌನವಾಗಿದ್ದು ನೋಡಿ ಆನಂದಿಸಿದವರಿಗೂ ಶಿಕ್ಷೆಯಾಯಿತು. ಹತ್ರಾಸ್, ಕಥುವಾ, ಉನ್ನಾವೋ, ಬಿಲ್ಕಿಸ್ ಬಾನು, ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ ಮೌನವಹಿಸಿದವರನ್ನು ಭಾರತ ಮಾತೆಯರು ಶಿಕ್ಷಿಸುತ್ತಾರೆ. ಆಡಳಿತಾರೂಢ ಸಮ್ಮಿಶ್ರ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಕನಿಮೋಳಿ ಭಾವುಕ ಭಾಷಣ ಮಾಡಿದ್ದಾರೆ.

Tags: DMkKanimozhiKannagiMaduraiManipur ViolenceParlimentSilappadikaramಕನಿಮೊಳಿಕನ್ನಗಿಡಿಎಂಕೆಮಣಿಪುರ ಗಲಭೆಮಧುರೈಸಂಸತ್ಸಿಲಪತಿಕಾರಂ
Previous Post

ನಾವು ಧಾರ್ಮಿಕ ಕಿರುಕುಳದ ವಿರುದ್ಧ ಮಾತನಾಡಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ!

Next Post

ನಾನು ಗುಲಾಮನಲ್ಲ ಎಂದು ಭಾವಿಸಿದ ಆ ಕ್ಷಣದಿಂದಲೇ ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ! ಆಗಸ್ಟ್ ಕ್ರಾಂತಿ ಒಂದು ನೋಟ

Dynamic Leader

Next Post

ನಾನು ಗುಲಾಮನಲ್ಲ ಎಂದು ಭಾವಿಸಿದ ಆ ಕ್ಷಣದಿಂದಲೇ ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ! ಆಗಸ್ಟ್ ಕ್ರಾಂತಿ ಒಂದು ನೋಟ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS