• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅಡುಗೆ ಸಿಲಿಂಡರ್ ಬೆಲೆ: ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು 200 ರೂಪಾಯಿ ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ; ಇದು ಚುನಾವಣೆ ಲಾಲಿಪಾಪ್!

by Dynamic Leader
30/08/2023
in ರಾಜಕೀಯ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

2014ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅಡುಗೆ ಸಿಲಿಂಡರ್ ಬೆಲೆ ರೂ.417 ಆಗಿತ್ತು. ಆದರೆ ಕ್ರಮೇಣ 1118 ರೂಪಾಯಿಗೆ ಏರಿಕೆಯಾಗಿದೆ. ಗಗನಕ್ಕೇರಿರುವ ಸಿಲಿಂಡರ್ ಬೆಲೆಯಿಂದಾಗಿ ಕುಟುಂಬದ ಮುಖ್ಯಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕಡಿದಾದ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಕಾಂಗ್ರೆಸ್, ಡಿಎಂಕೆ, ಸಿಪಿಎಂ ಮತ್ತು ಇತರ ಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಾ ಬಂದವು. ಆಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿದ್ದೆ ಸಿಲಿಂಡರ್ ಬೆಲೆ ಏರಿಕೆಗೆ ಕಾರಣ ಎಂದು ಮೋದಿ ಸರ್ಕಾರ ಹೇಳಿಕೊಂಡಿತ್ತು. ನಂತರ ಕಚ್ಚಾ ತೈಲ ಬೆಲೆ ಕುಸಿದರೂ ಮೋದಿ ಸರ್ಕಾರ ಸಿಲಿಂಡರ್ ಬೆಲೆ ಇಳಿಸಲಿಲ್ಲ.

ಈ ಹಿನ್ನಲೆಯಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಕಾರಣ ಅಡುಗೆ ಸಿಲಿಂಡರ್ ಬೆಲೆಯನ್ನು 200 ರೂಪಾಯಿ ಕಡಿಮೆ ಮಾಡಿದೆ; ಕೇಂದ್ರ ಬಿಜೆಪಿ ಸರ್ಕಾರ. ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ.200 ಸಬ್ಸಿಡಿ ನೀಡುವುದಾಗಿಯೂ ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರದ ಘೋಷಣೆ ಚುನಾವಣಾ ನಾಟಕ ಎಂದು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.

ಈ ಹಿನ್ನಲೆಯಲ್ಲಿ “ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು ರೂ.200 ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಜಾಲತಾಣದಲ್ಲಿ ಹೇಳಿಕೆಯನ್ನು ಪ್ರಕಟಿಸಿರುವ ಅವರು, “ಯಾವಾಗ ಮತಗಳು ಕಡಿಮೆಯಾಗಲು ಪ್ರಾರಂಭಿಸುತ್ತದೆಯೋ, ಆಗ ಚುನಾವಣೆ ಉಡುಗೊರೆಗಳ ವಿತರಣೆ ಪ್ರಾರಂಭವಾಗುತ್ತದೆ!

ಜನರ ದುಡಿಮೆಯ ಹಣವನ್ನು ಲೂಟಿ ಮಾಡಿದ ನಿರ್ದಯಿ ಮೋದಿ ಸರ್ಕಾರ, ಪ್ರಸ್ತುತ ತಾಯಿ ಮತ್ತು ಸಹೋದರಿಯರ ಬಗ್ಗೆ ಸುಳ್ಳು ಅಭಿಮಾನ ತೋರಿಸುತ್ತಿದೆ. ಒಂಬತ್ತೂವರೆ ವರ್ಷಗಳ ಕಾಲ ಜನ ಸಾಮಾನ್ಯರ ಜೀವನವನ್ನು ಹಾಳುಮಾಡಿದ್ದಾರೆ. ಆಗ “ಪ್ರೀತಿಯ ಉಡುಗೊರೆ” ಏಕೆ ನೆನಪಿಗೆ ಬಂದಿಲ್ಲ?

ಒಂಬತ್ತೂವರೆ ವರ್ಷಗಳ ಕಾಲ 140 ಕೋಟಿ ಭಾರತೀಯರನ್ನು ಹಿಂಸಿಸಿದ ಬಿಜೆಪಿ ಸರ್ಕಾರ “ಚುನಾವಣಾ ಲಾಲಿಪಾಪ್‌ಗಳನ್ನು” ಹಂಚುವುದರಿಂದ ಏನೂ ಪ್ರಯೋಜವಾಗುವುದಿಲ್ಲ ಎಂದು ತಿಳಿದುಕೊಳ್ಳಬೇಕು. ನಿಮ್ಮ ಹತ್ತು ವರ್ಷಗಳ ಪಾಪಗಳು ತೊಳೆಯಲಾಗದು.

ಬಿಜೆಪಿಯಿಂದ ಜಾರಿಗೊಂಡ ಹಣದುಬ್ಬರವನ್ನು ಎದುರಿಸಲು ಹಲವು ರಾಜ್ಯಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಬಡವರಿಗೆ 500 ರೂಪಾಯಿ ಸಿಲಿಂಡರ್ ನೀಡಲು ಹೊರಟಿದೆ. ರಾಜಸ್ಥಾನದಂತಹ ಹಲವು ರಾಜ್ಯಗಳು ಇದನ್ನು ಈಗಾಗಲೇ ಜಾರಿಗೆ ತಂದಿವೆ.

ಸಂಕಷ್ಟದಲ್ಲಿರುವ ಜನರ ಸಿಟ್ಟು 200 ರೂಪಾಯಿಗಳ ಸಬ್ಸಿಡಿಯಿಂದ ಕಡಿಮೆಯಾಗುವುದಿಲ್ಲ ಎಂಬುದನ್ನು ಮೋದಿ ಸರ್ಕಾರ ಅರಿಯಬೇಕು. ಇಂಡಿಯಾದ ಭಯ ಒಳ್ಳೆಯದು, ಮೋದಿ ಅವರೇ! ಜನ ಸಾಮಾನ್ಯರು ನಿರ್ಧರಿಸಿದ್ದಾರೆ. ಹಣದುಬ್ಬರವನ್ನು ಸೋಲಿಸುವ ಏಕೈಕ ಮಾರ್ಗವೆಂದರೆ ಬಿಜೆಪಿಗೆ ನಿರ್ಗಮನದ ಬಾಗಿಲನ್ನು ತೋರಿಸುವುದೇ ಆಗಿದೆ” ಎಂದರು.

Tags: 2024 Parliament Election2024ರ ಸಂಸತ್ ಚುನಾವಣೆGas CylinderMallikarjun KhargeNarendra ModiPrice reductionRaksha Bandhanಗ್ಯಾಸ್ ಸಿಲಿಂಡರ್ನರೇಂದ್ರ ಮೋದಿಬೆಲೆ ಕಡಿತಮಲ್ಲಿಕಾರ್ಜುನ ಖರ್ಗೆರಕ್ಷಾ ಬಂಧನ
Previous Post

ಭಾಷಣಕ್ಕೆ ನಿಂತರೆ ಶೌರ್, ರೌದ್ರ, ಪ್ರತಾಪಗಳ ಬಗ್ಗೆಯೇ ಮಾತಾಡುವ ಮೋದಿಯವರು ಚೀನಾ ವಿಚಾರದಲ್ಲಿ ಹೆದರುವುದ್ಯಾಕೆ? ಅಷ್ಟು ಭಯವೇ?

Next Post

ಆಧುನಿಕ ಗೂಢಚಾರಿಕೆ ಉಪಕರಣಗಳ ಮೂಲಕ ಭಾರತದ 140 ಕೋಟಿ ಜನರನ್ನೂ ಮೋದಿ ಸರ್ಕಾರ ನಿಗಾ ಇಡುತ್ತಿದೆ.!?

Next Post

ಆಧುನಿಕ ಗೂಢಚಾರಿಕೆ ಉಪಕರಣಗಳ ಮೂಲಕ ಭಾರತದ 140 ಕೋಟಿ ಜನರನ್ನೂ ಮೋದಿ ಸರ್ಕಾರ ನಿಗಾ ಇಡುತ್ತಿದೆ.!?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS