• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ!

by Dynamic Leader
02/10/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-2023’ ಪ್ರದಾನ ಮಾಡಿ ಮಾತನಾಡಿದರು.

2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಮಹಾತ್ಮ ಗಾಂಧಿಯವರ ಜಯಂತಿಯಂದು ಗಾಂಧಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿ, ಗಾಂಧಿಜೀಯವರ ತತ್ವಾದರ್ಶಗಳ ಹಾದಿಯಲ್ಲಿ ನಡೆಯುವ ವ್ಯಕ್ತಿ ಅಥವಾ ಸಂಘಸಂಸ್ಥೆಗಳಿಗೆ ಗಾಂಧಿ ಪ್ರಶಸ್ತಿಯನ್ನು ನೀಡಬೇಕೆಂದು ಆದೇಶ ಹೊರಡಿಸಲಾಯಿತು. ಪ್ರಶಸ್ತಿಗೆ ಆರ್ಹರಾಗುವವರು ಗಾಂಧಿಜೀಯವರ ತತ್ವಗಳಲ್ಲಿ ನಂಬಿಕೆಯಿಟ್ಟುವವರಾಗಿರಬೇಕು. ಧಾರವಾಡದ ಗರಗ ಕ್ಷೇತ್ರಿಯ ಸೇವಾ ಸಂಘ ಖಾದಿ ಉತ್ಪನ್ನ ಮತ್ತು ಮಾರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಭಾರತದ ರಾಷ್ಟ್ರಧ್ವಜ ತಯಾರಕರಾಗಿದ್ದಾರೆ. ಇಲ್ಲಿ ತಯಾರಾಗುವ ರಾಷ್ಟ್ರಧ್ವಜವನ್ನು ಇಡೀ ದೇಶಕ್ಕೆ ಸರಬರಾಜು ಮಾಡಲಾಗುತ್ತದೆ. ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನರಾದ ಈ ಸಂಸ್ಥೆಯ ಎಲ್ಲರಿಗೂ ಅಭಿನಂದನೆಗಳು ಹಾಗೂ ಪ್ರಶಸ್ತಿಯ ಆಯ್ಕೆ ಸಮಿತಿಗೆ ಧನ್ಯವಾದಗಳು ಎಂದು ಹೇಳಿದರು.

ಮಹಾತ್ಮ ಗಾಂಧಿಯವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ. ವಕೀಲ ವೃತ್ತಿಯಲ್ಲಿದ್ದ ಗಾಂಧಿಯವರು ದಕ್ಷಿಣಾ ಆಫ್ರಿಕಾದಲ್ಲಿ ವರ್ಣಬೇಧದಿಂದ ಅವಮಾನಿತರಾದರು. ಆ ದೇಶದಲ್ಲಿ ವರ್ಣಬೇಧದ ವಿರುದ್ಧ ಹೋರಾಟ ನಡೆಸಿದರು. ಗೋಪಾಲಕೃಷ್ಣ ಗೋಖಲೆಯವರು ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಗಾಂಧಿಯವರ ಹೋರಾಟವನ್ನು ನೋಡಿ, ಭಾರತವನ್ನು ಬ್ರಿಟೀಷರ ದಾಸ್ಯದಿಂದ ತಪ್ಪಿಸಲು ಗಾಂಧಿಯವರು ನೇತೃತ್ವವನ್ನು ವಹಿಸಲು ಕೋರಿದರು. 1915ರಲ್ಲಿ ಗಾಂಧಿಯವರು ಭಾರತಕ್ಕೆ ಬಂದರು. ಭಾರತದ ಸಾಮಾಜಿಕ ವ್ಯವಸ್ಥೆ, ಜನರ ಬದುಕನ್ನು ಅರಿಯಲು ರೈಲಿನಲ್ಲಿ 3ನೇ ದರ್ಜೆಯಲ್ಲಿಯೇ ಪ್ರಯಾಣ ಮಾಡಿ ಇಡೀ ಭಾರತವನ್ನು ಸುತ್ತಿದ್ದ ಅತ್ಯಂತ ಸರಳ ಜೀವಿ ಅವರು ಎಂದು ಗಾಂಧಿಯನ್ನು ಸ್ಮರಿಸಿದರು.

ಗಾಂಧಿಯವರ ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸವಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿದರು. ಅಹಿಂಸೆಯ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ಪಡೆಯಲು ಹೊರಟ ದೇಶವೆಂದರೆ ಅದು ಭಾರತ. ಗಾಂಧಿಯವರು ದೊಡ್ಡ ಮಾನವತಾವಾದಿ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವ ಮೂಲಕ ಗಾಂಧಿಯವರಿಗೆ ನಿಜವಾದ ಗೌರವ ಅರ್ಪಿಸಿದಂತಾಗುತ್ತದೆ. ಅವರು ನಡೆದ ದಾರಿಯಲ್ಲಿ ನಡೆಯುವ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಗಾಂಧಿಯವರಿಗೆ ಮಹಾತ್ಮ ಎಂದು ಬಿರುದು ನೀಡಿದವರು ರವೀಂದ್ರನಾಥ ಟಾಗೋರ್ ಅವರು. ಸುಭಾಷ್ ಚಂದ್ರ ಬೋಸ್ ಅವರು ರಾಷ್ಟ್ರಪಿತ ಎಂದು ಕರೆದರು. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಲು ಕೊನೆಯವರೆಗೂ ಶ್ರಮಿಸಿದ್ದರು. ಆದರೆ ನಾಥೂರಾಂ ಗೋಡ್ಸೆಯವರ ಮತಾಂಧತೆಯಿಂದ ಅವರು ಅಸುನೀಗಿದರು. ನಾಥೂರಾಂ ಅವರನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ. ಇಂತಹವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಕಿಡಿಕಾರಿದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಸ್ವಾವಂಬನೆಯಿಂದ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ನಮ್ಮ ದೇಶಕ್ಕೆ ದೊಡ್ಡ ಕೈಗಾರಿಕೆಗಳ ಬದಲು ಗುಡಿ ಕೈಗಾರಿಕೆಗಳು ಬರಬೇಕು. ಅವರು ಹೇಳಿದ ಪಂಚಾಯತ್ ರಾಜ್ ವ್ಯವಸ್ಥೆಯಂತೆ ಅಧಿಕಾರ ಹಳ್ಳಿಯಿಂದ ದಿಲ್ಲಿಗೆ ಹೋಗಬೇಕೆ ಹೊರತು, ದಿಲ್ಲಿಯಿಂದ ಹಳ್ಳಿಗೆ ಬರಬಾರದು ಎಂದಿದ್ದರು. ದೇಶ, ರಾಜ್ಯ, ಜಿಲ್ಲೆ, ಹಳ್ಳಿ ನಾಲ್ಕು ಹಂತದಲ್ಲಿ ಅಧಿಕಾರದ ವಿಕೇಂದ್ರೀಕರಣವು, ಜನರ ಪಾಲ್ಗೊಳ್ಳುವಿಕೆಯಿಂದ ಜನತಂತ್ರದ ವಿಕೇಂದ್ರೀಕರಣ ಸಾಧ್ಯ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಗಾಂಧಿಯವರ ಚಿಂತನೆಗಳೇ ಪ್ರೇರಣೆ ಎಂದು ಮೊಳಗಿದರು.

ಮಹಿಳಾ ಸ್ವಾತಂತ್ರ್ಯ ಹಾಗೂ ಸಬಲೀಕರಣದ ಬಗ್ಗೆ ಗಾಂಧಿಯವರು ಅಪಾರವಾದ ಬದ್ಧತೆ ಹೊಂದಿದ್ದರು. ಮಹಿಳೆಯರ ಅಭಿವೃದ್ಧಿಯಿಂದ ನಾಡು, ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಅನ್ನಭಾಗ್ಯ ಯೋಜನೆಗಳು ಗಾಂಧಿ ತತ್ವಗಳನ್ನು ಅವಲಂಬಿಸಿದೆ ಎಂದು ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಇಂದು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಾಗಿದ್ದು, ಇಡೀ ದೇಶದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾರತ ಕಂಡ ಪ್ರಾಮಾಣಿಕ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿ, ಗಾಂಧಿವಾದಿಯಾಗಿ ಬದುಕಿದವರು. ಅವರನ್ನು ಈ ಸಂದರ್ಭದಲ್ಲಿ ಗೌರವದಿಂದ ನೆನೆಯುತ್ತೇನೆ ಎಂದು ಹೇಳಿದರು.

Tags: Gandhi JayantiMahatma GandhiNathuram GodseSiddaraamaiahಗಾಂಧಿ ಜಯಂತಿನಾಥೂರಾಂ ಗೋಡ್ಸೆಮಹಾತ್ಮಾಗಾಂಧಿಸಿದ್ದರಾಮಯ್ಯ
Previous Post

ಕುವೆಂಪುನಗರದಲ್ಲಿ ಮಹಾತ್ಮ ಗಾಂಧಿಜೀಯವರ 154ನೇ ಜನ್ಮ ದಿನಾಚರಣೆ!

Next Post

ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ಶಿಶುಗಳು ಸೇರಿ 24 ರೋಗಿಗಳು ಸಾವು!

Dynamic Leader

Next Post

ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ಶಿಶುಗಳು ಸೇರಿ 24 ರೋಗಿಗಳು ಸಾವು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS