• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಪಕ್ಷವೇ… ಅಥವಾ ಬಿಜೆಪಿಯೇ… ಪರಿಸ್ಥಿತಿ ಏನು?

by Dynamic Leader
09/10/2023
in ರಾಜಕೀಯ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ ಸಂಪಾದಕರು

ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮುಂಬರುವ ಸಂಸತ್ತಿನ ಚುನಾವಣೆಯ ಮುನ್ನೋಟ ಎಂದು ಪರಿಗಣಿಸಲಾಗಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಐದು ರಾಜ್ಯಗಳ ಚುನಾವಣಾ ಕಾರ್ಯದಲ್ಲಿ ಕೆಲ ತಿಂಗಳ ಹಿಂದೆಯೇ ನಿರತವಾಗಿದ್ದು, ಇದೀಗ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಪ್ರಕಟಿಸಿದ್ದಾರೆ. ಅದರಂತೆ ಛತ್ತೀಸ್ ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ ಎಂದು ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಆಡಳಿತ ನಡೆಸುತ್ತಿದೆ. ರಾಜಸ್ಥಾನ 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಅಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಆಂತರಿಕ ಸಂಘರ್ಷ ಕಾಂಗ್ರೆಸ್ ಗೆ ಹಿನ್ನಡೆಯಾಗಿ ಪರಿಣಮಿಸಿತ್ತು. ಆದರೆ, ಕಾಂಗ್ರೆಸ್ ವರಿಷ್ಠರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಸರಿಪಡಿಸಿದ ನಂತರ, ಪರಿಸ್ಥಿತಿ ಸ್ಥಿರವಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅಲ್ಲಿ ರೂ.7,000 ಕೋಟಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ರಾಜಸ್ಥಾನದಲ್ಲಿ ಕಾಂಗ್ರೆಸ್‌ನಂತೆಯೇ ಬಿಜೆಪಿಯಲ್ಲೂ ಗುಂಪು ಸಂಘರ್ಷಗಳಿವೆ. ಈ ಬಾರಿಯೂ ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂದರಾ ರಾಜೇ ಸಿಂಧಿಯಾ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿಲ್ಲ. ಇದರಿಂದ ಉದ್ಭವಿಸಿರುವ ಆಂತರಿಕ ಕಲಹಗಳನ್ನು ನಿಭಾಯಿಸಲು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ವಿಧಾನಸಭೆ ಚುನಾವಣೆ ನಡೆಸಲು ನಿರ್ಧರಿಸಿದೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಒಂದು ವರ್ಷ ಆಡಳಿತ ನಡೆಸಿತು. ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರಿಂದ, ಬಿಜೆಪಿ ಅಧಿಕಾರ ಹಿಡಿಯಿತು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಭರವಸೆಗಳ ಘೋಷಣೆಯಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದೆ. ಮಹಿಳೆಯರಿಗೆ ತಿಂಗಳಿಗೆ ರೂ.1,000 ನೀಡುವ ಯೋಜನೆಯನ್ನು ಬಿಜೆಪಿ ಸರ್ಕಾರ ಆರಂಭಿಸಿತು. ಆದರೆ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರೂ.1,500 ನೀಡಲಾಗುವುದು ಎಂದು ಹೇಳಿದೆ. ಅಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂದು ವರದಿಗಳು ತಿಳಿಸುತ್ತಿವೆ.

ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ನೇತೃತ್ವದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷ ಆಡಳಿತ ನಡೆಸುತ್ತಿದೆ. ಹೇಗಾದರೂ ಮಾಡಿ ಅಲ್ಲಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಳೆದ ಕೆಲವು ತಿಂಗಳುಗಳಿಂದ ಕಸರತ್ತು ನಡೆಸುತ್ತಿದೆ. ಅದೇ ಸಮಯದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಭಾವ ಹೆಚ್ಚಾಗಿದೆ.

ಹೀಗಾಗಿ ಕಾಂಗ್ರೆಸ್ ಪಕ್ಷವೂ ಅಧಿಕಾರ ಹಿಡಿಯಲು ತೀವ್ರ ಪೈಪೋಟಿ ನಡೆಸುತ್ತಿದೆ. ಭಾರತ್ ರಾಷ್ಟ್ರ ಸಮಿತಿಯ 12 ಮಾಜಿ ಸಚಿವರು ಸೇರಿದಂತೆ 35 ಪ್ರಮುಖ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಿದೆ. ತೆಲಂಗಾಣ ಚುನಾವಣಾ ಕ್ಷೇತ್ರವು ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಟ್ಟಿದೆ.

Tags: 5 State Election5 ರಾಜ್ಯಗಳ ಚುನಾವಣೆBJpCongressMallikarjun KhargeNarendra ModiRahul Gandhiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿ
Previous Post

ಚೀನಾ ಪರವಾಗಿ ಕೆಲಸ ಮಾಡುತ್ತಿರುವುದು ಮೋದಿ ಸರ್ಕಾರವೇ: ಜೈರಾಮ್ ರಮೇಶ್ ಆರೋಪ!

Next Post

ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಏಕೆ ಚುನಾವಣೆ ಇಲ್ಲ: ಉಮರ್ ಅಬ್ದುಲ್ಲಾ ಪ್ರಶ್ನೆ

Next Post

ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಏಕೆ ಚುನಾವಣೆ ಇಲ್ಲ: ಉಮರ್ ಅಬ್ದುಲ್ಲಾ ಪ್ರಶ್ನೆ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS