• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ!

by Dynamic Leader
09/12/2023
in ರಾಜ್ಯ, ಸಿನಿಮಾ
0
ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ!
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾತನಾಡಿದರು. “ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ, ಹಿರಿಯ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ” ಎಂದರು.

“ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ ವಿನೋದ್ ರಾಜ್‌ರನ್ನು ಭೇಟಿಯಾಗಿ, ಅವರಿಗೆ ಯಾವುದೇ ರೀತಿಯ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ ಎಂದು ಧೈರ್ಯ ತುಂಬಲಾಗಿತ್ತು. ಲೀಲಾವತಿ ಹಾಗೂ ವಿನೋದರಾಜ್ ಅವರ ತಾಯಿಮಗನ ಸಂಬಂಧ ಆದರ್ಶಮಯವಾದದ್ದು” ಎಂದು ಹೇಳಿದರು.

“ರಂಗಭೂಮಿಯಿಂದ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಲೀಲಾವತಿಯವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.  ನೈಜ ನಟನೆಗೆ ಹೆಸರಾಗಿದ್ದ ಅವರು ದಕ್ಷಿಣ ಭಾರತದ ಎಲ್ಲ ಭಾಷೆಯ ಚಿತ್ರರಂಗದಲ್ಲಿ ನಟಿಸಿದ್ದಾರೆ. ಬಹುಭಾಷಾ ಕಲಾವಿದರಾಗಿದ್ದ ಲೀಲಾವತಿಯವರು ನಾಯಕಿ, ಪೋಷಕ ನಟಿಯಾಗಿ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಡಾ.ರಾಜ್ ಕುಮಾರ್ ಹಾಗೂ ಲೀಲಾವತಿಯವರದು ಜನಪ್ರಿಯ ಜೋಡಿಯಾಗಿತ್ತು. ವಿದ್ಯಾರ್ಥಿ ದೆಸೆಯಲ್ಲಿ ಗೆಜ್ಜೆಪೂಜೆ, ಕುಲವಧು, ಭಕ್ತ ಕುಂಬಾರ ಸೇರಿದಂತೆ ಅನೇಕ ಚಲನಚಿತ್ರಗಳನ್ನು ವೀಕ್ಷಿಸಿದ್ದೆ” ಎಂದು ಅಂದಿನ ದಿನಗಳನ್ನು ನೆನಪಿಸಿಕೊಂಡರು.

“ಲೀಲಾವತಿಯವರು ಒಬ್ಬ ಪರಿಪೂರ್ಣ ಕಲಾವಿದರಾಗಿದ್ದರು. ಐತಿಹಾಸಿಕ, ಸಾಮಾಜಿಕ, ಪೌರಾಣಿಕ ಪಾತ್ರಗಳನ್ನು ಲೀಲಾಜಾಲವಾಗಿ, ಮನೋಜ್ಞವಾಗಿ ಅಭಿನಯಿಸುತ್ತಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಲೀಲಾವತಿಯವರು ಆಸ್ಪತ್ರೆ, ಪಶುವೈದ್ಯಕೀಯ ಆಸ್ಪತ್ರೆಗಳನ್ನು ನಿರ್ಮಿಸಿದ್ದರು. ರೈತಾಪಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ ಲೀಲಾವತಿಯವರು ಪ್ರಾಣಿಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಜೀವಿಗಳೆಡೆಗಿನ ಪ್ರೀತಿ ಅವರಿಗೆ ರಕ್ತಗತವಾಗಿ ಬಂದಿತ್ತು.

ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದ ಲೀಲಾವತಿಯವರು ಮನುಷ್ಯತ್ವದ ಮೂರ್ತರೂಪವಾಗಿದ್ದರು. ತಾನು ಗಳಿಸಿದ್ದನ್ನು ಪರರಿಗೆ ಹಂಚುವ ದೊಡ್ಡ ಗುಣ ಅವರಲ್ಲಿತ್ತು. ಅವರ ಪ್ರತಿಭೆಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ” ಎಂದು ವಿಷಾಧಿಸಿದರು.

ನಟಿ ಲೀಲಾವತಿಯವರ ಸಾವು ಆಘಾತವನ್ನುಂಟು ಮಾಡಿದ್ದು, ಕನ್ನಡ ಚಿತ್ರರಂಗವಲ್ಲದೇ, ಭಾರತೀಯ ಸಿನಿಮಾ ರಂಗಕ್ಕೂ ತುಂಬಲಾರದ ನಷ್ಟವುಂಟಾಗಿದೆ.  ಅವರ ಕುಟುಂಬ ಹಾಗೂ ಅಪಾರ ಅಭಿಮಾನ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದರು.

Tags: LeelavathiLeelavathi DiedRavindra KalakshetraSiddaramaiahಕನ್ನಡ ಚಿತ್ರರಂಗರವೀಂದ್ರ ಕಲಾಕ್ಷೇತ್ರಲೀಲಾವತಿಸಿದ್ದರಾಮಯ್ಯ
Previous Post

ಗಾಜಾದಲ್ಲಿ ಕದನ ವಿರಾಮ: ವಿಶ್ವ ಸಂಸ್ಥೆಯ ನಿರ್ಣಯವನ್ನು ಅಮೆರಿಕ ತನ್ನ ವೀಟೋ ಅಧಿಕಾರವನ್ನು ಬಳಸಿ ನಿರಾಕರಿಸಿದೆ!

Next Post

ಗುಜರಾತ್‌ನ ಸೂರತ್ ನಗರದಲ್ಲಿ ವಿಶ್ವದ ಅತಿ ದೊಡ್ಡ ವ್ಯಾಣಿಜ್ಯ ಕೇಂದ್ರವನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ!

Dynamic Leader

Next Post
ಗುಜರಾತ್‌ನ ಸೂರತ್ ನಗರದಲ್ಲಿ ವಿಶ್ವದ ಅತಿ ದೊಡ್ಡ ವ್ಯಾಣಿಜ್ಯ ಕೇಂದ್ರವನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ!

ಗುಜರಾತ್‌ನ ಸೂರತ್ ನಗರದಲ್ಲಿ ವಿಶ್ವದ ಅತಿ ದೊಡ್ಡ ವ್ಯಾಣಿಜ್ಯ ಕೇಂದ್ರವನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS